<p>ಹಾಸನ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ‘ಕಾವೇರಿ-2’ ತಂತ್ರಾಂಶದಡಿ ಜಾರಿಗೆ ತಂದಿರುವ ಪೇಪರ್ಲೆಸ್ ನೋಂದಣಿ ವ್ಯವಸ್ಥೆಗೆ ರಾಜ್ಯದ ಅಧಿಕೃತ ಪತ್ರ ಬರಹಗಾರರ ಒಕ್ಕೂಟದ ಕೃಷ್ಣ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಚಾಮರಾಜನಗರ ಜಿಲ್ಲೆಯಲ್ಲಿ ಏ.30ರಿಂದ ಪ್ರಾಯೋಗಿಕವಾಗಿ ಜಾರಿಗೊಳಿಸಿರುವ ಈ ಆನ್ಲೈನ್ ನೋಂದಣಿ ವ್ಯವಸ್ಥೆಯಿಂದ ಸಾರ್ವಜನಿಕರು, ವಿಶೇಷವಾಗಿ ರೈತರು ಹಾಗೂ ಕಂಪ್ಯೂಟರ್ ಜ್ಞಾನವಿಲ್ಲದವರು ತೊಂದರೆ ಎದುರಿಸುತ್ತಿದ್ದಾರೆ ಎಂದು ದೂರಿದರು.</p>.<p>ಕಾಗದ ರಹಿತ ವ್ಯವಸ್ಥೆಯಲ್ಲಿ ಆಸ್ತಿ ದಾಖಲೆಗಳಿಗೆ ಭೌತಿಕ ಪ್ರತಿಗಳು ದೊರೆಯುವುದಿಲ್ಲ. (ಡಿಜಿಲಾಕರ್) ಡಿಜಿಟಲ್ ಲಾಕರ್ನಲ್ಲಿ ಮಾತ್ರ ದಾಖಲೆ ಉಳಿಯುವುದರಿಂದ ಭವಿಷ್ಯದಲ್ಲಿ ವಾರಸುದಾರರಿಗೆ ಮಾಹಿತಿ ಸಿಗದ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಆನ್ಲೈನ್ ಮೂಲಕವೇ ಮುದ್ರಾಂಕ ಹಾಗೂ ನೋಂದಣಿ ಶುಲ್ಕ ಪಾವತಿಸಬೇಕು. ಯಾವುದೇ ಕಾರಣಕ್ಕೆ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳದಿದ್ದರೆ ಹಣ ಮರಳಿ ಪಡೆಯಲು ಅವಕಾಶ ಇಲ್ಲ. ಇದು ಸಾರ್ವಜನಿಕರಿಗೆ ಆರ್ಥಿಕ ಹೊರೆ ಉಂಟು ಮಾಡುತ್ತಿದೆ ಎಂದು ಆರೋಪಿಸಿದರು.</p>.<p>ಭೌತಿಕ ಸಹಿ ಬದಲು ಇ-ಸಹಿ ಮೂಲಕ ವ್ಯವಹಾರ ನಡೆಯುವುದರಿಂದ ಹಿರಿಯ ನಾಗರಿಕರು ಹಾಗೂ ಅನಕ್ಷರಸ್ಥರು ಮೋಸಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚಿದೆ. ಸಾಕ್ಷಿದಾರರ ಒಟಿಪಿ ಪ್ರಕ್ರಿಯೆ, ಹಾಜರಾತಿ ಸಮಸ್ಯೆಯಿಂದ ನೋಂದಣಿ ವಿಳಂಬವಾಗುತ್ತಿದೆ ಎಂದು ತಿಳಿಸಿದರು.</p>.<p>ಮೊಬೈಲ್ ಹ್ಯಾಕಿಂಗ್, ಒಟಿಪಿ ಮೋಸ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಡಿಜಿಟಲ್ ನೋಂದಣಿ ವ್ಯವಸ್ಥೆಯ ಭದ್ರತೆ ಬಗ್ಗೆ ಪ್ರಶ್ನೆಗಳು ಉದ್ಭವಿಸುತ್ತಿವೆ. ಈ ವ್ಯವಸ್ಥೆ ಭೂಮಾಫಿಯಾ ಚಟುವಟಿಕೆಗಳಿಗೆ ಉತ್ತೇಜನ ನೀಡಬಹುದು ಎಂದು ಅಭಿಪ್ರಾಯಪಟ್ಟರು.</p>.<p>ಬ್ಯಾಂಕ್ ಸಾಲ ಪಡೆಯಲು ಭೌತಿಕ ದಾಖಲೆ ಅಗತ್ಯವಿರುವುದರಿಂದ ಕಾಗದ ರಹಿತ ವ್ಯವಸ್ಥೆ ಅನಾನುಕೂಲವಾಗಿದೆ. ವಿಲ್ ಪತ್ರಗಳನ್ನು ಗುಪ್ತವಾಗಿ ಇಡುವ ವ್ಯವಸ್ಥೆಯೂ ಇಲ್ಲ ಎಂದು ವಿವರಿಸಿದರು.</p>.<p>ಪತ್ರಿಕಾಗೋಷ್ಠಿ ಯಲ್ಲಿ ಜಯರಾಮ್, ಸತೀಶ್, ತುಳಸಿದಾಸ್, ಸತ್ಯನಾರಾಯಣ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-36-881474989</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ‘ಕಾವೇರಿ-2’ ತಂತ್ರಾಂಶದಡಿ ಜಾರಿಗೆ ತಂದಿರುವ ಪೇಪರ್ಲೆಸ್ ನೋಂದಣಿ ವ್ಯವಸ್ಥೆಗೆ ರಾಜ್ಯದ ಅಧಿಕೃತ ಪತ್ರ ಬರಹಗಾರರ ಒಕ್ಕೂಟದ ಕೃಷ್ಣ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಚಾಮರಾಜನಗರ ಜಿಲ್ಲೆಯಲ್ಲಿ ಏ.30ರಿಂದ ಪ್ರಾಯೋಗಿಕವಾಗಿ ಜಾರಿಗೊಳಿಸಿರುವ ಈ ಆನ್ಲೈನ್ ನೋಂದಣಿ ವ್ಯವಸ್ಥೆಯಿಂದ ಸಾರ್ವಜನಿಕರು, ವಿಶೇಷವಾಗಿ ರೈತರು ಹಾಗೂ ಕಂಪ್ಯೂಟರ್ ಜ್ಞಾನವಿಲ್ಲದವರು ತೊಂದರೆ ಎದುರಿಸುತ್ತಿದ್ದಾರೆ ಎಂದು ದೂರಿದರು.</p>.<p>ಕಾಗದ ರಹಿತ ವ್ಯವಸ್ಥೆಯಲ್ಲಿ ಆಸ್ತಿ ದಾಖಲೆಗಳಿಗೆ ಭೌತಿಕ ಪ್ರತಿಗಳು ದೊರೆಯುವುದಿಲ್ಲ. (ಡಿಜಿಲಾಕರ್) ಡಿಜಿಟಲ್ ಲಾಕರ್ನಲ್ಲಿ ಮಾತ್ರ ದಾಖಲೆ ಉಳಿಯುವುದರಿಂದ ಭವಿಷ್ಯದಲ್ಲಿ ವಾರಸುದಾರರಿಗೆ ಮಾಹಿತಿ ಸಿಗದ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಆನ್ಲೈನ್ ಮೂಲಕವೇ ಮುದ್ರಾಂಕ ಹಾಗೂ ನೋಂದಣಿ ಶುಲ್ಕ ಪಾವತಿಸಬೇಕು. ಯಾವುದೇ ಕಾರಣಕ್ಕೆ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳದಿದ್ದರೆ ಹಣ ಮರಳಿ ಪಡೆಯಲು ಅವಕಾಶ ಇಲ್ಲ. ಇದು ಸಾರ್ವಜನಿಕರಿಗೆ ಆರ್ಥಿಕ ಹೊರೆ ಉಂಟು ಮಾಡುತ್ತಿದೆ ಎಂದು ಆರೋಪಿಸಿದರು.</p>.<p>ಭೌತಿಕ ಸಹಿ ಬದಲು ಇ-ಸಹಿ ಮೂಲಕ ವ್ಯವಹಾರ ನಡೆಯುವುದರಿಂದ ಹಿರಿಯ ನಾಗರಿಕರು ಹಾಗೂ ಅನಕ್ಷರಸ್ಥರು ಮೋಸಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚಿದೆ. ಸಾಕ್ಷಿದಾರರ ಒಟಿಪಿ ಪ್ರಕ್ರಿಯೆ, ಹಾಜರಾತಿ ಸಮಸ್ಯೆಯಿಂದ ನೋಂದಣಿ ವಿಳಂಬವಾಗುತ್ತಿದೆ ಎಂದು ತಿಳಿಸಿದರು.</p>.<p>ಮೊಬೈಲ್ ಹ್ಯಾಕಿಂಗ್, ಒಟಿಪಿ ಮೋಸ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಡಿಜಿಟಲ್ ನೋಂದಣಿ ವ್ಯವಸ್ಥೆಯ ಭದ್ರತೆ ಬಗ್ಗೆ ಪ್ರಶ್ನೆಗಳು ಉದ್ಭವಿಸುತ್ತಿವೆ. ಈ ವ್ಯವಸ್ಥೆ ಭೂಮಾಫಿಯಾ ಚಟುವಟಿಕೆಗಳಿಗೆ ಉತ್ತೇಜನ ನೀಡಬಹುದು ಎಂದು ಅಭಿಪ್ರಾಯಪಟ್ಟರು.</p>.<p>ಬ್ಯಾಂಕ್ ಸಾಲ ಪಡೆಯಲು ಭೌತಿಕ ದಾಖಲೆ ಅಗತ್ಯವಿರುವುದರಿಂದ ಕಾಗದ ರಹಿತ ವ್ಯವಸ್ಥೆ ಅನಾನುಕೂಲವಾಗಿದೆ. ವಿಲ್ ಪತ್ರಗಳನ್ನು ಗುಪ್ತವಾಗಿ ಇಡುವ ವ್ಯವಸ್ಥೆಯೂ ಇಲ್ಲ ಎಂದು ವಿವರಿಸಿದರು.</p>.<p>ಪತ್ರಿಕಾಗೋಷ್ಠಿ ಯಲ್ಲಿ ಜಯರಾಮ್, ಸತೀಶ್, ತುಳಸಿದಾಸ್, ಸತ್ಯನಾರಾಯಣ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-36-881474989</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>