<p><strong>ಹಿರೀಸಾವೆ:</strong> ‘ದೇವಸ್ಥಾನವನ್ನು ನಿರ್ಮಾಣ ಮಾಡಿದ ನಂತರ ಸ್ವಚ್ಛವಾಗಿ, ಸುಂದರವಾಗಿ ಇಟ್ಟುಕೊಳ್ಳವುದು ಬಹಳ ಮುಖ್ಯ’ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಬುಧವಾರ ಹೋಬಳಿಯ ಬಿಳಿಕೆರೆ ಗ್ರಾಮದಲ್ಲಿ ಹೇಳಿದರು.</p>.<p>ಗ್ರಾಮದಲ್ಲಿ ಜೀರ್ಣೋದ್ಧಾರಗೊಂಡಿರುವ ಮಾರಮ್ಮ ದೇವಾಲಯದ ಲೋಕಾರ್ಪಣೆಯಲ್ಲಿ ಭಾಗವಹಿಸಿ ಮಾತನಾಡಿದರು. ‘ದೇವರ ಅನುಗ್ರಹವಿಲ್ಲದೆ ಈ ಭೂಮಂಡಲದಲ್ಲಿ ಏನೂ ನಡೆಯುವುದಿಲ್ಲ. ಮನಸ್ಸಿಗೆ ಶಾಂತಿ ಹಾಗೂ ನೆಮ್ಮದಿ ದೇವರ ಸನ್ನಿಧಿಯಲ್ಲಿ ಸಿಗುತ್ತದೆ. ನಾನು ಎನ್ನುವುದಕ್ಕಿಂತ ನಾವು ಎನ್ನುವ ಮೂಲಕ ಗ್ರಾಮದ ಅಭಿವದ್ಧಿ ಮಾಡಬೇಕು’ ಎಂದರು.</p>.<p>‘ಈ ಗ್ರಾಮದಿಂದ ಕಬ್ಬಳಿ ಗ್ರಾಮದವರಗೆ 2 ಕಿಲೋಮೀಟರ್ ರಸ್ತೆಯನ್ನು ₹1 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಳಿಸಲಾಗುವುದು. ತೋಟಿಕೆರೆ ಏತನೀರಾವರಿ ಯೋಜನೆಯು ಪ್ರಗತಿಯಲ್ಲಿದ್ದು, ಮುಂದಿನ ಹಂಗಾಮಿನಿಂದ ಕೆರೆಗಳಿಗೆ ನೀರು ಹರಿಸಲಾಗುವುದು. ದಿಡಗ-ಕಬ್ಬಳಿ ಏತನೀರಾವರಿ ಯೋಜನೆಯೂ ಪ್ರಸ್ತಾವನೆಯ ಹಂತದಲ್ಲಿದೆ’ ಎಂದರು.</p>.<p>ಕಬ್ಬಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಮ್ಮ, ಉಪಾಧ್ಯಕ್ಷೆ ರತ್ನ ಕುಮಾರಸ್ವಾಮಿ, ಮುಖಂಡರಾದ ಎಂ.ಆರ್.ವಾಸು, ಶಿವನಂಜೇಗೌಡ, ಬಿಳಿಕೆರೆ ರಂಗೇಗೌಡ, ರಾಜೇಗೌಡ, ಪೃಥ್ವಿಕುಮಾರ್, ಪಿಡಿಒ ಕಿರಣ್, ಕಾರ್ಯದರ್ಶಿ ಹನುಮೇಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರೀಸಾವೆ:</strong> ‘ದೇವಸ್ಥಾನವನ್ನು ನಿರ್ಮಾಣ ಮಾಡಿದ ನಂತರ ಸ್ವಚ್ಛವಾಗಿ, ಸುಂದರವಾಗಿ ಇಟ್ಟುಕೊಳ್ಳವುದು ಬಹಳ ಮುಖ್ಯ’ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಬುಧವಾರ ಹೋಬಳಿಯ ಬಿಳಿಕೆರೆ ಗ್ರಾಮದಲ್ಲಿ ಹೇಳಿದರು.</p>.<p>ಗ್ರಾಮದಲ್ಲಿ ಜೀರ್ಣೋದ್ಧಾರಗೊಂಡಿರುವ ಮಾರಮ್ಮ ದೇವಾಲಯದ ಲೋಕಾರ್ಪಣೆಯಲ್ಲಿ ಭಾಗವಹಿಸಿ ಮಾತನಾಡಿದರು. ‘ದೇವರ ಅನುಗ್ರಹವಿಲ್ಲದೆ ಈ ಭೂಮಂಡಲದಲ್ಲಿ ಏನೂ ನಡೆಯುವುದಿಲ್ಲ. ಮನಸ್ಸಿಗೆ ಶಾಂತಿ ಹಾಗೂ ನೆಮ್ಮದಿ ದೇವರ ಸನ್ನಿಧಿಯಲ್ಲಿ ಸಿಗುತ್ತದೆ. ನಾನು ಎನ್ನುವುದಕ್ಕಿಂತ ನಾವು ಎನ್ನುವ ಮೂಲಕ ಗ್ರಾಮದ ಅಭಿವದ್ಧಿ ಮಾಡಬೇಕು’ ಎಂದರು.</p>.<p>‘ಈ ಗ್ರಾಮದಿಂದ ಕಬ್ಬಳಿ ಗ್ರಾಮದವರಗೆ 2 ಕಿಲೋಮೀಟರ್ ರಸ್ತೆಯನ್ನು ₹1 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಳಿಸಲಾಗುವುದು. ತೋಟಿಕೆರೆ ಏತನೀರಾವರಿ ಯೋಜನೆಯು ಪ್ರಗತಿಯಲ್ಲಿದ್ದು, ಮುಂದಿನ ಹಂಗಾಮಿನಿಂದ ಕೆರೆಗಳಿಗೆ ನೀರು ಹರಿಸಲಾಗುವುದು. ದಿಡಗ-ಕಬ್ಬಳಿ ಏತನೀರಾವರಿ ಯೋಜನೆಯೂ ಪ್ರಸ್ತಾವನೆಯ ಹಂತದಲ್ಲಿದೆ’ ಎಂದರು.</p>.<p>ಕಬ್ಬಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಮ್ಮ, ಉಪಾಧ್ಯಕ್ಷೆ ರತ್ನ ಕುಮಾರಸ್ವಾಮಿ, ಮುಖಂಡರಾದ ಎಂ.ಆರ್.ವಾಸು, ಶಿವನಂಜೇಗೌಡ, ಬಿಳಿಕೆರೆ ರಂಗೇಗೌಡ, ರಾಜೇಗೌಡ, ಪೃಥ್ವಿಕುಮಾರ್, ಪಿಡಿಒ ಕಿರಣ್, ಕಾರ್ಯದರ್ಶಿ ಹನುಮೇಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>