<p><strong>ಹಾಸನ:</strong> ಬೇಲೂರು ತಾಲ್ಲೂಕಿನ ಚೌಡನಹಳ್ಳಿ ಗ್ರಾಮದ ಬಳಿ ನಡೆದಿದ್ದ ಮಂಗಗಳ ಮಾರಣಹೋಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಪೊಲೀಸ್ ಮತ್ತು ಅರಣ್ಯ ಇಲಾಖೆ, ಹಾಸನ<br />ತಾಲ್ಲೂಕಿನ ಗ್ರಾಮವೊಂದರ 15ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದೆ.</p>.<p>ಹತ್ತಾರು ಮಂಗಗಳು ಎಲ್ಲೆಂದರಲ್ಲಿ ಓಡಾಡುತ್ತಾ ತೆಂಗು, ಅಡಿಕೆ, ಬಾಳೆ ಮೊದಲಾದ ಬೆಳೆಗಳನ್ನು ನಾಶ<br />ಮಾಡುತ್ತಿದ್ದವು. ಇದರಿಂದ ಬೇಸತ್ತ ಊರಿನವರು ಮಂಗಗಳ ಜೀವವನ್ನೇ ತೆಗೆದಿದ್ದಾರೆ ಎಂಬ ಮಾಹಿತಿ<br />ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.</p>.<p>ಮಂಗಗಳ ಸಾಮೂಹಿಕ ಹತ್ಯೆ ಪ್ರಕರಣದಲ್ಲಿ ಪೊಲೀಸ್ ತಂಡ ಐವರನ್ನು ವಶಕ್ಕೆ ಪಡೆದಿದ್ದರೆ, ಅರಣ್ಯ ಇಲಾಖೆ ತಂಡ 12ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ತೆಗೆದುಕೊಂಡಿದೆ.</p>.<p>ಈ ಪ್ರಕರಣದಲ್ಲಿ ದಂಪತಿಯ ಕೈವಾಡ ಇದೆ ಎಂಬ ಅನುಮಾನ ದಟ್ಟವಾಗಿದೆ. ಮಂಗ ಹಿಡಿಯುವುದರಲ್ಲಿ ಪಳಗಿದ್ದ ಅರಸೀಕೆರೆಯ ದಂಪತಿಯನ್ನು ಕೆಲ ದಿನಗಳ ಹಿಂದೆ ಸಂಪರ್ಕಿಸಿದ ಗ್ರಾಮಸ್ಥರು, ‘ನಮ್ಮೂರಲ್ಲಿ ಕೋತಿ ಹಾವಳಿ ಹೆಚ್ಚಾಗಿದೆ. ಹೇಗಾದರೂ ಮಾಡಿ ಅವುಗಳಿಗೆ ಕಡಿವಾಣ ಹಾಕಬೇಕು’ ಎಂದು ಹೇಳಿದ್ದಾರೆ.</p>.<p>ನಂತರ ದಂಪತಿಯನ್ನು ಗ್ರಾಮಕ್ಕೆ ಕರೆಸಿಕೊಂಡಿದ್ದಾರೆ. ಮಂಗಗಳು ಸಾಮೂಹಿಕವಾಗಿ ಒಂದೆಡೆ ಬರಲಿ ಎಂಬ ಕಾರಣಕ್ಕೆ ದಂಪತಿ, ನಿತ್ಯವೂ ಅವುಗಳಿಗೆ ಆಹಾರ ಹಾಕಲು ಆರಂಭಿಸಿದ್ದಾರೆ. ದೊಡ್ಡದಾದ ಬಿದಿರು ಬುಟ್ಟಿ ತರಿಸಿ ಅದರೊಳಗೆ ಅನ್ನ ಹಾಕಲು ಆರಂಭಿಸಿದ್ದಾರೆ. ಅಲ್ಲಿಗೂ ಬರುವುದನ್ನು ಖಾತ್ರಿ ಪಡಿಸಿಕೊಂಡ ನಂತರ, ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಬೇಲೂರು ತಾಲ್ಲೂಕಿನ ಚೌಡನಹಳ್ಳಿ ಗ್ರಾಮದ ಬಳಿ ನಡೆದಿದ್ದ ಮಂಗಗಳ ಮಾರಣಹೋಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಪೊಲೀಸ್ ಮತ್ತು ಅರಣ್ಯ ಇಲಾಖೆ, ಹಾಸನ<br />ತಾಲ್ಲೂಕಿನ ಗ್ರಾಮವೊಂದರ 15ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದೆ.</p>.<p>ಹತ್ತಾರು ಮಂಗಗಳು ಎಲ್ಲೆಂದರಲ್ಲಿ ಓಡಾಡುತ್ತಾ ತೆಂಗು, ಅಡಿಕೆ, ಬಾಳೆ ಮೊದಲಾದ ಬೆಳೆಗಳನ್ನು ನಾಶ<br />ಮಾಡುತ್ತಿದ್ದವು. ಇದರಿಂದ ಬೇಸತ್ತ ಊರಿನವರು ಮಂಗಗಳ ಜೀವವನ್ನೇ ತೆಗೆದಿದ್ದಾರೆ ಎಂಬ ಮಾಹಿತಿ<br />ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.</p>.<p>ಮಂಗಗಳ ಸಾಮೂಹಿಕ ಹತ್ಯೆ ಪ್ರಕರಣದಲ್ಲಿ ಪೊಲೀಸ್ ತಂಡ ಐವರನ್ನು ವಶಕ್ಕೆ ಪಡೆದಿದ್ದರೆ, ಅರಣ್ಯ ಇಲಾಖೆ ತಂಡ 12ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ತೆಗೆದುಕೊಂಡಿದೆ.</p>.<p>ಈ ಪ್ರಕರಣದಲ್ಲಿ ದಂಪತಿಯ ಕೈವಾಡ ಇದೆ ಎಂಬ ಅನುಮಾನ ದಟ್ಟವಾಗಿದೆ. ಮಂಗ ಹಿಡಿಯುವುದರಲ್ಲಿ ಪಳಗಿದ್ದ ಅರಸೀಕೆರೆಯ ದಂಪತಿಯನ್ನು ಕೆಲ ದಿನಗಳ ಹಿಂದೆ ಸಂಪರ್ಕಿಸಿದ ಗ್ರಾಮಸ್ಥರು, ‘ನಮ್ಮೂರಲ್ಲಿ ಕೋತಿ ಹಾವಳಿ ಹೆಚ್ಚಾಗಿದೆ. ಹೇಗಾದರೂ ಮಾಡಿ ಅವುಗಳಿಗೆ ಕಡಿವಾಣ ಹಾಕಬೇಕು’ ಎಂದು ಹೇಳಿದ್ದಾರೆ.</p>.<p>ನಂತರ ದಂಪತಿಯನ್ನು ಗ್ರಾಮಕ್ಕೆ ಕರೆಸಿಕೊಂಡಿದ್ದಾರೆ. ಮಂಗಗಳು ಸಾಮೂಹಿಕವಾಗಿ ಒಂದೆಡೆ ಬರಲಿ ಎಂಬ ಕಾರಣಕ್ಕೆ ದಂಪತಿ, ನಿತ್ಯವೂ ಅವುಗಳಿಗೆ ಆಹಾರ ಹಾಕಲು ಆರಂಭಿಸಿದ್ದಾರೆ. ದೊಡ್ಡದಾದ ಬಿದಿರು ಬುಟ್ಟಿ ತರಿಸಿ ಅದರೊಳಗೆ ಅನ್ನ ಹಾಕಲು ಆರಂಭಿಸಿದ್ದಾರೆ. ಅಲ್ಲಿಗೂ ಬರುವುದನ್ನು ಖಾತ್ರಿ ಪಡಿಸಿಕೊಂಡ ನಂತರ, ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>