ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿಸಾನ್ ಸಮ್ಮಾನ್ : ಮನೆಗಳಿಗೆ ತೆರಳಿ ಇ-ಕೆವೈಸಿ

Published 14 ಜೂನ್ 2023, 12:31 IST
Last Updated 14 ಜೂನ್ 2023, 12:31 IST
ಅಕ್ಷರ ಗಾತ್ರ

ಜಾವಗಲ್: ಕೇಂದ್ರ ಸರ್ಕಾರದ  ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ  ಸೌಲಭ್ಯ ಪಡೆಯಲು ರೈತರು ಇ- ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ಗ್ರಾಮದ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಸುಬ್ರಹ್ಮಣ್ಯ ತಿಳಿಸಿದರು.

ಕೃಷಿ ಇಲಾಖೆ ಅಧಿಕಾರಿಗಳು ಇ-ಕೆವೈಸಿ ನೋಂದಾಯಿಸಲು ರೈತರಿಗೆ ಅರಿವು ಮೂಡಿಸುತ್ತಿದ್ದರೂ ರೈತರು ಇ-ಕೆವೈಸಿ ನೋಂದಣಿಗೆ ಆಸಕ್ತಿ ತೋರದೆ ಇರುವ ಕಾರಣ, ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳೇ ರೈತರ ಮನೆಗೆ ತೆರಳಿ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತಿದ್ದಾರೆ ಎಂದರು.

ಇ- ಕೆವೈಸಿ ಮಾಡಿಸಲು ಜೂನ್ 30 ಅಂತಿಮ ದಿನವಾಗಿದ್ದು, ರೈತರು ತಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಗಳಿಗೆ ತೆರಳಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT