ಜಾವಗಲ್: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಸೌಲಭ್ಯ ಪಡೆಯಲು ರೈತರು ಇ- ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ಗ್ರಾಮದ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಸುಬ್ರಹ್ಮಣ್ಯ ತಿಳಿಸಿದರು.
ಕೃಷಿ ಇಲಾಖೆ ಅಧಿಕಾರಿಗಳು ಇ-ಕೆವೈಸಿ ನೋಂದಾಯಿಸಲು ರೈತರಿಗೆ ಅರಿವು ಮೂಡಿಸುತ್ತಿದ್ದರೂ ರೈತರು ಇ-ಕೆವೈಸಿ ನೋಂದಣಿಗೆ ಆಸಕ್ತಿ ತೋರದೆ ಇರುವ ಕಾರಣ, ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳೇ ರೈತರ ಮನೆಗೆ ತೆರಳಿ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತಿದ್ದಾರೆ ಎಂದರು.