ಅಡುಗೆ ಸಿಬ್ಬಂದಿ ತರಬೇತಿಯಲ್ಲಿ ಸಿಬ್ಬಂದಿಗೆ ಗ್ಯಾಸ್ ಬಳಕೆ, ಅಗ್ನಿ ದುರಂತಗಳು ಸಂಭವಿಸದಂತೆ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು. ಮುಖ್ಯ ಶಿಕ್ಷಕಿ ಸರೋಜಾ ನಿಂಬಣ್ಣನವರ್, ಬಾಣಾವರ ಹೋಬಳಿಯ ಸಿಆರ್ಪಿಗಳು, ಸಂಪನ್ಮೂಲ ವ್ಯಕ್ತಿಗಳು, ಶಿಕ್ಷಕರು ಭಾಗವಹಿಸಿದ್ದರು. ಅಡುಗೆ ಸಿಬ್ಬಂದಿಗೆ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.