ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಯಾವ ಶಿವರಾಂಗೂ ಕೇರ್ ಮಾಡುವುದಿಲ್ಲ ಎಂದಿರುವುದು ಸರಿಯಲ್ಲ. ಮಾಜಿ ಸಚಿವ ಬಿ.ಶಿವರಾಂ, ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅರಸೀಕೆರೆ ಶಶಿಧರ್ಗೆ ಮಾತು ಕೊಟ್ಟಂತೆ ನಿಗಮ ಮಂಡಳಿಯಲ್ಲಿ ಅವಕಾಶ ಕೊಡಬೇಕೆಂದು ಒತ್ತಾಯ ಮಾಡಿ, ಶಾಸಕ ಶಿವಲಿಂಗೇಗೌಡರನ್ನು ಲೋಕಸಭಾ ಚುನಾವಣೆ ಅಭ್ಯರ್ಥಿ ಮಾಡಬೇಕೆಂದು ಹೆಳಿದ್ದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.