<p><strong>ಕೊಣನೂರು</strong>: ಪೌತಿ ಖಾತಾ ಆಂದೋಲನದ ಮೂಖೇನ ನಿಮ್ಮ ಜಮೀನಿನ ದಾಖಲಾತಿಗಳನ್ನು ಸರಿಪಡಿಸಿಕೊಳ್ಳಿ ಎಂದು ಶಾಸಕ ಎ.ಮಂಜು ತಿಳಿಸಿದರು.<br><br> ರಾಮನಾಥಪುರ ಗ್ರಾಮ ಪಂಚಾಯಿತಿ ಅವರಣದಲ್ಲಿ ನಡೆದ ತಾಲ್ಲೂಕುಮಟ್ಟದ ಪೌತಿಖಾತೆ ಅಂದೋಲನದಲ್ಲಿ ಅರ್ಜಿಗಳನ್ನು ಸ್ವೀಕರಿಸಿ ಅವರು ಮಾತನಾಡಿದರು. ರೈತರು ವಂಶವೃಕ್ಷ, ಮರಣ ಧೃಢೀಕರಣ ಮುಂತಾದ ದಾಖಲಾತಿ ಸಲ್ಲಿಸಿ ಪೌತಿ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.</p>.<p>ತಹಶೀಲ್ದಾರ್ ಕೆ.ಸಿ. ಸೌಮ್ಯ ಮಾತನಾಡಿ, ತಾಲ್ಲೂಕು ಕಚೇರಿಯಲ್ಲಿ ಯಾವುದೇ ಕೆಲಸದಲ್ಲೂ ವಿಳಂಬವಾದಲ್ಲಿ, ರೈತರು ಹಾಗೂ ಸಾರ್ವಜನಿಕರು ನೇರವಾಗಿ ಅಥವಾ ದೂರವಾಣಿ ಮೂಲಕ ದೂರು ಸಲ್ಲಿಸಿದರೆ ವಿಳಂಬ ಮಾಡಿದ ಅಧಿಕಾರಿ ವಿರುದ್ಧ ಕ್ರಮಕ್ಕೆ ಮೇಲಾಧಿಕಾರಿ ಗೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.</p>.<p>ಅಕ್ರಮಸಕ್ರಮ ಮನೆಗಳಿಗೆ 94 ಸಿ ಅಡಿಯಲ್ಲಿ ಹಕ್ಕು ಪತ್ರ ಹಾಗೂ ವಿವಿಧ ಪಿಂಚಣಿ ಯೋಜನೆಗಳ ಆದೇಶ ಪ್ರತಿಗಳನ್ನು ಶಾಸಕ ವಿತರಿಸಿದರು.</p><p> ಗ್ರೇಡ್ 2 ತಹಶೀಲ್ದಾರ್ ಸಿ.ಸ್ವಾಮಿ, ಶಿರಸ್ತೇದಾರ್ ಡಿ. ಸೋಮಶೇಖರ್, ಉಪ ತಹಶೀಲ್ದಾರ್ ರವಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪವನಕುಮಾರಿ, ಗ್ರಾಮ ಪಂಚಾಯಿತಿ ಸದಸ್ಯರು, ಮತ್ತು ರಾಜಸ್ವ ನಿರೀಕ್ಷಕ ಭಾಸ್ಕರ್, ಬಲರಾಮ್, ವಸಂತ್ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕುಮಾರಸ್ವಾಮಿ ,ಅಧಿಕಾರಿಗಳು, ರೈತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಣನೂರು</strong>: ಪೌತಿ ಖಾತಾ ಆಂದೋಲನದ ಮೂಖೇನ ನಿಮ್ಮ ಜಮೀನಿನ ದಾಖಲಾತಿಗಳನ್ನು ಸರಿಪಡಿಸಿಕೊಳ್ಳಿ ಎಂದು ಶಾಸಕ ಎ.ಮಂಜು ತಿಳಿಸಿದರು.<br><br> ರಾಮನಾಥಪುರ ಗ್ರಾಮ ಪಂಚಾಯಿತಿ ಅವರಣದಲ್ಲಿ ನಡೆದ ತಾಲ್ಲೂಕುಮಟ್ಟದ ಪೌತಿಖಾತೆ ಅಂದೋಲನದಲ್ಲಿ ಅರ್ಜಿಗಳನ್ನು ಸ್ವೀಕರಿಸಿ ಅವರು ಮಾತನಾಡಿದರು. ರೈತರು ವಂಶವೃಕ್ಷ, ಮರಣ ಧೃಢೀಕರಣ ಮುಂತಾದ ದಾಖಲಾತಿ ಸಲ್ಲಿಸಿ ಪೌತಿ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.</p>.<p>ತಹಶೀಲ್ದಾರ್ ಕೆ.ಸಿ. ಸೌಮ್ಯ ಮಾತನಾಡಿ, ತಾಲ್ಲೂಕು ಕಚೇರಿಯಲ್ಲಿ ಯಾವುದೇ ಕೆಲಸದಲ್ಲೂ ವಿಳಂಬವಾದಲ್ಲಿ, ರೈತರು ಹಾಗೂ ಸಾರ್ವಜನಿಕರು ನೇರವಾಗಿ ಅಥವಾ ದೂರವಾಣಿ ಮೂಲಕ ದೂರು ಸಲ್ಲಿಸಿದರೆ ವಿಳಂಬ ಮಾಡಿದ ಅಧಿಕಾರಿ ವಿರುದ್ಧ ಕ್ರಮಕ್ಕೆ ಮೇಲಾಧಿಕಾರಿ ಗೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.</p>.<p>ಅಕ್ರಮಸಕ್ರಮ ಮನೆಗಳಿಗೆ 94 ಸಿ ಅಡಿಯಲ್ಲಿ ಹಕ್ಕು ಪತ್ರ ಹಾಗೂ ವಿವಿಧ ಪಿಂಚಣಿ ಯೋಜನೆಗಳ ಆದೇಶ ಪ್ರತಿಗಳನ್ನು ಶಾಸಕ ವಿತರಿಸಿದರು.</p><p> ಗ್ರೇಡ್ 2 ತಹಶೀಲ್ದಾರ್ ಸಿ.ಸ್ವಾಮಿ, ಶಿರಸ್ತೇದಾರ್ ಡಿ. ಸೋಮಶೇಖರ್, ಉಪ ತಹಶೀಲ್ದಾರ್ ರವಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪವನಕುಮಾರಿ, ಗ್ರಾಮ ಪಂಚಾಯಿತಿ ಸದಸ್ಯರು, ಮತ್ತು ರಾಜಸ್ವ ನಿರೀಕ್ಷಕ ಭಾಸ್ಕರ್, ಬಲರಾಮ್, ವಸಂತ್ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕುಮಾರಸ್ವಾಮಿ ,ಅಧಿಕಾರಿಗಳು, ರೈತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>