<p><strong>ಕೊಣನೂರು</strong>: ‘ಕನ್ನಡವು ಉಳಿದಿರುವುದೇ ನಮ್ಮ ಸಂಸ್ಕೃತಿ, ನಡೆ, ನುಡಿಗಳಿಂದ. ಅದನ್ನು ನಾವುಗಳೆಲ್ಲರೂ ಉಳಿಸಿ ಬೆಳೆಸಿಕೊಂಡು ಹೋಗಬೇಕು.ಭಾಷೆ ಉಳಿವಿಗೆ ಶ್ರಮಿಸಿದ ಮಹನೀಯರ ಸ್ಮರಿಸಬೇಕು’ ಎಂದು ಬರಹಗಾರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸುಂದರೇಶ್ ಡಿ. ಉಡುವಾರೆ ಹೇಳಿದರು.</p>.<p>ಪಟ್ಟಣದ ಗಣಪತಿ ಪೆಂಡಾಲ್ ಆವರಣದಲ್ಲಿ ತಾಲ್ಲೂಕು ಎಚ್.ಡಿ.ರೇವಣ್ಣ ಅಭಿಮಾನಿಗಳ ಸಂಘದ ವತಿಯಿಂದ ಹಮ್ಮಿಕೊಂಡಿದ್ದ 70ನೇ ಕನ್ನಡ ರಾಜ್ಯೋತ್ಸವ ಹಾಗೂ 2024-25 ನೇ ಸಾಲಿನ ಹತ್ತನೆ ತರಗತಿ ಪರೀಕ್ಷೆಯ ಕನ್ನಡ ಭಾಷೆಯಲ್ಲಿ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಹಾಸನ ಹಾಲು ಒಕ್ಕೂಟ ಮಹಾಮಂಡಳದ ನಿರ್ದೇಶಕ ಹೊನ್ನವಳ್ಳಿ ಸತೀಶ್ ಮಾತನಾಡಿ, ‘ಕನ್ನಡ ನಾಡಿಗೆ ಹೆಮ್ಮೆ ತರುವಂತಹ ಸಾಧನೆಗಳನ್ನು ಮಾಡುವ ಮೂಲಕ ನಾಡಿನ ಋಣವನ್ನು ತೀರಿಸಬೇಕು’ ಎಂದರು.</p>.<p>ಜಿ.ಪಂ ಮಾಜಿ ಅಧ್ಯಕ್ಷ ವಿ.ಎ.ನಂಜುಂಡಸ್ವಾಮಿ, ತಾ.ಪಂ ಮಾಜಿ ಅಧ್ಯಕ್ಷ ಯೋಗೇಶ್, ಜೆಡಿಎಸ್ ಮುಖಂಡ ಎಂ.ಎಸ್.ರಮೇಶ್, ಬಿವಿಎಂ ಬಾಲಿಕಾ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಕೆ.ಎಲ್.ಜಗದೀಶ್, ಗ್ರಾ.ಪಂ ಮಾಜಿ ಸದಸ್ಯ ಕೆ. ಮಹೇಶ್ ಕನ್ನಡ ನಾಡು ನುಡಿಯ ಬಗ್ಗೆ ಮಾತನಾಡಿದರು.</p>.<p>ಕನ್ನಡ ಭಾಷೆಯಲ್ಲಿ ಗರಿಷ್ಠ ಅಂಕ ಪಡೆದ 6 ಮಂದಿ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು. ಎಚ್.ಡಿ. ರೇವಣ್ಣ ಅಭಿಮಾನಿಗಳ ಸಂಘದ ಅಧ್ಯಕ್ಷ ಕಾರ್ಬಾಬು, ಶಿಕ್ಷಕ ಬಿ.ಇ.ಕೃಷ್ಣಪ್ಪ, ಉಪನ್ಯಾಸಕಿ ಯಶಸ್ವಿನಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಣನೂರು</strong>: ‘ಕನ್ನಡವು ಉಳಿದಿರುವುದೇ ನಮ್ಮ ಸಂಸ್ಕೃತಿ, ನಡೆ, ನುಡಿಗಳಿಂದ. ಅದನ್ನು ನಾವುಗಳೆಲ್ಲರೂ ಉಳಿಸಿ ಬೆಳೆಸಿಕೊಂಡು ಹೋಗಬೇಕು.ಭಾಷೆ ಉಳಿವಿಗೆ ಶ್ರಮಿಸಿದ ಮಹನೀಯರ ಸ್ಮರಿಸಬೇಕು’ ಎಂದು ಬರಹಗಾರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸುಂದರೇಶ್ ಡಿ. ಉಡುವಾರೆ ಹೇಳಿದರು.</p>.<p>ಪಟ್ಟಣದ ಗಣಪತಿ ಪೆಂಡಾಲ್ ಆವರಣದಲ್ಲಿ ತಾಲ್ಲೂಕು ಎಚ್.ಡಿ.ರೇವಣ್ಣ ಅಭಿಮಾನಿಗಳ ಸಂಘದ ವತಿಯಿಂದ ಹಮ್ಮಿಕೊಂಡಿದ್ದ 70ನೇ ಕನ್ನಡ ರಾಜ್ಯೋತ್ಸವ ಹಾಗೂ 2024-25 ನೇ ಸಾಲಿನ ಹತ್ತನೆ ತರಗತಿ ಪರೀಕ್ಷೆಯ ಕನ್ನಡ ಭಾಷೆಯಲ್ಲಿ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಹಾಸನ ಹಾಲು ಒಕ್ಕೂಟ ಮಹಾಮಂಡಳದ ನಿರ್ದೇಶಕ ಹೊನ್ನವಳ್ಳಿ ಸತೀಶ್ ಮಾತನಾಡಿ, ‘ಕನ್ನಡ ನಾಡಿಗೆ ಹೆಮ್ಮೆ ತರುವಂತಹ ಸಾಧನೆಗಳನ್ನು ಮಾಡುವ ಮೂಲಕ ನಾಡಿನ ಋಣವನ್ನು ತೀರಿಸಬೇಕು’ ಎಂದರು.</p>.<p>ಜಿ.ಪಂ ಮಾಜಿ ಅಧ್ಯಕ್ಷ ವಿ.ಎ.ನಂಜುಂಡಸ್ವಾಮಿ, ತಾ.ಪಂ ಮಾಜಿ ಅಧ್ಯಕ್ಷ ಯೋಗೇಶ್, ಜೆಡಿಎಸ್ ಮುಖಂಡ ಎಂ.ಎಸ್.ರಮೇಶ್, ಬಿವಿಎಂ ಬಾಲಿಕಾ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಕೆ.ಎಲ್.ಜಗದೀಶ್, ಗ್ರಾ.ಪಂ ಮಾಜಿ ಸದಸ್ಯ ಕೆ. ಮಹೇಶ್ ಕನ್ನಡ ನಾಡು ನುಡಿಯ ಬಗ್ಗೆ ಮಾತನಾಡಿದರು.</p>.<p>ಕನ್ನಡ ಭಾಷೆಯಲ್ಲಿ ಗರಿಷ್ಠ ಅಂಕ ಪಡೆದ 6 ಮಂದಿ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು. ಎಚ್.ಡಿ. ರೇವಣ್ಣ ಅಭಿಮಾನಿಗಳ ಸಂಘದ ಅಧ್ಯಕ್ಷ ಕಾರ್ಬಾಬು, ಶಿಕ್ಷಕ ಬಿ.ಇ.ಕೃಷ್ಣಪ್ಪ, ಉಪನ್ಯಾಸಕಿ ಯಶಸ್ವಿನಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>