<p><strong>ಕೊಣನೂರು(ಹಾಸನ):</strong> ಹಸುವನ್ನು ಮಾರಿ ಶುಲ್ಕ ಪಾವತಿಸಿ, ಮಾಹಿತಿ ಹಕ್ಕು ಕಾಯ್ದೆಯಡಿ ಸುಮಾರು 16,170 ಪುಟಗಳ ದಾಖಲಾತಿ ಪಡೆದ ರಾಮನಾಥಪುರ ಹೋಬಳಿಯ ಬಸವನಹಳ್ಳಿಯ ರೈತ ಬಿ.ಎಸ್. ರವಿ, ಅವುಗಳನ್ನು ಗ್ರಾಮದ ಅಂಚೆ ಕಚೇರಿಯಿಂದ ಗುರುವಾರ ಎತ್ತಿನಗಾಡಿಯಲ್ಲಿ ಮನೆಗೆ ಸಾಗಿಸಿದರು.</p>.<p>2020 ರಿಂದ 2025 ರವರೆಗೆ 15 ನೇ ಹಣಕಾಸು ಯೋಜನೆಯಡಿ ನಡೆದಿರುವ ಕಾಮಗಾರಿಗಳ ವಿವರಗಳನ್ನು ನೀಡುವಂತೆ ಕಾಳೇನಹಳ್ಳಿ ಗ್ರಾಮ ಪಂಚಾಯಿತಿಗೆ ಅವರು ಅರ್ಜಿ ಸಲ್ಲಿಸಿದ್ದರು. ಪರಿಶಿಷ್ಟ ಜಾತಿ, ಪಂಗಡದವರಿಗೆ ಹಾಗೂ ಅಂಗವಿಕಲರಿಗೆ ನೀಡಿದ ಅನುದಾನದ ವಿವರ ಕೋರಿದ್ದರು.</p>.<p>ಪ್ರತಿಯಾಗಿ ನೋಟಿಸ್ ನೀಡಿದ್ದ ಪಿಡಿಒ, ಕಡತಗಳನ್ನು ಪರಿಶೀಲಿಸಲು ತಿಳಿಸಿದ್ದರು. ಬಳಿಕ, ದಾಖಲೆಗಳು 16,370 ಪುಟಗಳಿದ್ದು, ಪ್ರತಿ ಪುಟಕ್ಕೆ ₹ 2 ರಂತೆ ₹ 32,340 ಶುಲ್ಕವನ್ನು ಡಿಡಿ ಮೂಲಕ ಪಾವತಿಸಲು ಸೂಚಿಸಿದ್ದರು. ತಮ್ಮ ಸಿಂಧಿ ಹಸುವನ್ನು ₹25 ಸಾವಿರಕ್ಕೆ ಮಾರಾಟ ಮಾಡಿದ್ದ ರವಿ, ಉಳಿದ ಹಣವನ್ನು ಸ್ನೇಹಿತರ ಬಳಿ ಪಡೆದು, ಡಿಡಿ ಮೂಲಕ ಪಂಚಾಯಿತಿಗೆ ಪಾವತಿಸಿದ್ದರು. ನಂತರ ದಾಖಲೆಗಳನ್ನು ಅಂಚೆ ಮೂಲಕ ರವಾನಿಸಲಾಗಿತ್ತು. </p>.<p>ಈ ಕುರಿತು ‘ಪ್ರಜಾವಾಣಿ’ ಜೊತೆ ಮಾತನಾಡಿದ ಅವರು, ‘ಕೊಟ್ಟಿಗೆ ಮಂಜೂರು ಮಾಡುವಂತೆ ಸಲ್ಲಿಸಿದ್ದ ನನ್ನ ಅರ್ಜಿಯನ್ನು ಪಂಚಾಯಿತಿಯು ತಿರಸ್ಕರಿಸಿತ್ತು. ಆದರೆ, ಬೇರೆಯವರಿಗೆ ಮಂಜೂರು ಮಾಡಿತ್ತು. ಆ ಬಗ್ಗೆ ದಾಖಲೆಗಳನ್ನು ಒದಗಿಸುವಂತೆ ಅರ್ಜಿ ಸಲ್ಲಿಸಿದ್ದೆ. ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸುತ್ತೇನೆ. ತಿಳಿದವರಿಗೂ ತೋರಿಸುತ್ತೇನೆ. ಅವ್ಯವಹಾರ ಕಂಡು ಬಂದಲ್ಲಿ ದೂರು ನೀಡುತ್ತೇನೆ’ ಎಂದರು.</p>.<p>ಈ ಕುರಿತು ಪ್ರತಿಕ್ರಿಯೆ ಪಡೆಯಲು ಪಿಡಿಒ ಲೋಕೇಶ್ ಅವರನ್ನು ಸಂಪರ್ಕಿಸಲು ಯತ್ನಿಸಿದರೂ ಲಭ್ಯರಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಣನೂರು(ಹಾಸನ):</strong> ಹಸುವನ್ನು ಮಾರಿ ಶುಲ್ಕ ಪಾವತಿಸಿ, ಮಾಹಿತಿ ಹಕ್ಕು ಕಾಯ್ದೆಯಡಿ ಸುಮಾರು 16,170 ಪುಟಗಳ ದಾಖಲಾತಿ ಪಡೆದ ರಾಮನಾಥಪುರ ಹೋಬಳಿಯ ಬಸವನಹಳ್ಳಿಯ ರೈತ ಬಿ.ಎಸ್. ರವಿ, ಅವುಗಳನ್ನು ಗ್ರಾಮದ ಅಂಚೆ ಕಚೇರಿಯಿಂದ ಗುರುವಾರ ಎತ್ತಿನಗಾಡಿಯಲ್ಲಿ ಮನೆಗೆ ಸಾಗಿಸಿದರು.</p>.<p>2020 ರಿಂದ 2025 ರವರೆಗೆ 15 ನೇ ಹಣಕಾಸು ಯೋಜನೆಯಡಿ ನಡೆದಿರುವ ಕಾಮಗಾರಿಗಳ ವಿವರಗಳನ್ನು ನೀಡುವಂತೆ ಕಾಳೇನಹಳ್ಳಿ ಗ್ರಾಮ ಪಂಚಾಯಿತಿಗೆ ಅವರು ಅರ್ಜಿ ಸಲ್ಲಿಸಿದ್ದರು. ಪರಿಶಿಷ್ಟ ಜಾತಿ, ಪಂಗಡದವರಿಗೆ ಹಾಗೂ ಅಂಗವಿಕಲರಿಗೆ ನೀಡಿದ ಅನುದಾನದ ವಿವರ ಕೋರಿದ್ದರು.</p>.<p>ಪ್ರತಿಯಾಗಿ ನೋಟಿಸ್ ನೀಡಿದ್ದ ಪಿಡಿಒ, ಕಡತಗಳನ್ನು ಪರಿಶೀಲಿಸಲು ತಿಳಿಸಿದ್ದರು. ಬಳಿಕ, ದಾಖಲೆಗಳು 16,370 ಪುಟಗಳಿದ್ದು, ಪ್ರತಿ ಪುಟಕ್ಕೆ ₹ 2 ರಂತೆ ₹ 32,340 ಶುಲ್ಕವನ್ನು ಡಿಡಿ ಮೂಲಕ ಪಾವತಿಸಲು ಸೂಚಿಸಿದ್ದರು. ತಮ್ಮ ಸಿಂಧಿ ಹಸುವನ್ನು ₹25 ಸಾವಿರಕ್ಕೆ ಮಾರಾಟ ಮಾಡಿದ್ದ ರವಿ, ಉಳಿದ ಹಣವನ್ನು ಸ್ನೇಹಿತರ ಬಳಿ ಪಡೆದು, ಡಿಡಿ ಮೂಲಕ ಪಂಚಾಯಿತಿಗೆ ಪಾವತಿಸಿದ್ದರು. ನಂತರ ದಾಖಲೆಗಳನ್ನು ಅಂಚೆ ಮೂಲಕ ರವಾನಿಸಲಾಗಿತ್ತು. </p>.<p>ಈ ಕುರಿತು ‘ಪ್ರಜಾವಾಣಿ’ ಜೊತೆ ಮಾತನಾಡಿದ ಅವರು, ‘ಕೊಟ್ಟಿಗೆ ಮಂಜೂರು ಮಾಡುವಂತೆ ಸಲ್ಲಿಸಿದ್ದ ನನ್ನ ಅರ್ಜಿಯನ್ನು ಪಂಚಾಯಿತಿಯು ತಿರಸ್ಕರಿಸಿತ್ತು. ಆದರೆ, ಬೇರೆಯವರಿಗೆ ಮಂಜೂರು ಮಾಡಿತ್ತು. ಆ ಬಗ್ಗೆ ದಾಖಲೆಗಳನ್ನು ಒದಗಿಸುವಂತೆ ಅರ್ಜಿ ಸಲ್ಲಿಸಿದ್ದೆ. ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸುತ್ತೇನೆ. ತಿಳಿದವರಿಗೂ ತೋರಿಸುತ್ತೇನೆ. ಅವ್ಯವಹಾರ ಕಂಡು ಬಂದಲ್ಲಿ ದೂರು ನೀಡುತ್ತೇನೆ’ ಎಂದರು.</p>.<p>ಈ ಕುರಿತು ಪ್ರತಿಕ್ರಿಯೆ ಪಡೆಯಲು ಪಿಡಿಒ ಲೋಕೇಶ್ ಅವರನ್ನು ಸಂಪರ್ಕಿಸಲು ಯತ್ನಿಸಿದರೂ ಲಭ್ಯರಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>