ಬಳ್ಳಾರಿ ಜಿಲ್ಲೆಯ ಕೊಟ್ಟೂರಿನವರಾದ ಶ್ರೀನಿವಾಸ್ ದಶಕಗಳಿಂದ ಹಾಸನದಲ್ಲಿಯೇ ನೆಲೆಸಿದ್ದರು. ದಲಿತ, ರೈತ ಸಂಘಟನೆ, ಸಾಕ್ಷರತಾ ಆಂದೋಲನಾ ಮತ್ತು ಪ್ರಗತಿಪರ ಚಳವಳಿಯಲ್ಲಿ ಗುರುತಿಸಿಕೊಂಡಿದ್ದರು. ಅಲ್ಲದೇ ರೈತ ನಾಯಕ ಪ್ರೊ. ಎಂ.ಡಿ.ನಂಜುಂಡಸ್ವಾಮಿ ಅವರಿಂದ ಸ್ಪೂರ್ತಿ ಪಡೆದು ಹಲವು ಹೋರಾಟಗಳ ನೇತೃತ್ವ ವಹಿಸಿದ್ದರು. ಜಿಲ್ಲೆಯಲ್ಲಿ ನಡೆದ ನೀರಾ ಚಳುವಳಿ, ಆನ್ ಲೈನ್ ಲಾಟರಿ, ಪಂಪ್ ಸೆಟ್ ಮೀಟರ್ ಅಳವಡಿಕೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು ಜೈಲುವಾಸ ಅನುಭವಿಸಿದ್ದರು.