ರಾಮಕೃಷ್ಣ ವಿದ್ಯಾಲಯ ಹಾಗೂ ಹೋಲಿ ಮದರ್ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಹಾಗೂ ಪ್ರಾಂಶುಪಾಲರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿರುವ ಸಿ.ಎಸ್. ಕೃಷ್ಣಸ್ವಾಮಿ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು. ಹಿರಿಯ ನಾಗರಿಕರ ವೇದಿಕೆ ಮೂಲಕ ನಗರದ ಕೆರೆ, ಕಟ್ಟೆಗಳ ಸಂರಕ್ಷಣೆಗೆ ಹೋರಾಟ ರೂಪಿಸಿದ್ದರು. ಮಲೆನಾಡು ತಾಂತ್ರಿಕ ಶಿಕ್ಷಣ ಸಂಸ್ಥೆ ಸಂಸ್ಥಾಪಕರಲ್ಲಿ ಒಬ್ಬರಾಗಿ ಸಂಸ್ಥೆಯ ಖಜಾಂಚಿಯಾಗಿ ಸೇವೆ ಸಲ್ಲಿಸಿದ್ದರು. ಜಿಲ್ಲಾ ಬ್ರಾಹ್ಮಣ ಸಂಘ, ಗಾಯತ್ರಿ ಪತ್ತಿನ ಸಂಘದಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿ ಉತ್ತಮ ಆಡಳಿತಗಾರರಾಗಿ ಹೆಸರು ಪಡೆದಿದ್ದರು. ಪಿಟಿಐ ಸುದ್ದಿ ಸಂಸ್ಥೆಯ ಹಿರಿಯ ವರದಿಗಾರರಾಗಿಯೂ ಕೆಲಸ ಮಾಡಿದ್ದಾರೆ. ನೆರವು ಕೋರಿ ಯಾರೇ ಬಂದರೂ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದ ಸಾತ್ವಿಕ ಸ್ವಭಾವದ ವ್ಯಕ್ತಿ ಅವರಾಗಿದ್ದರು.