<p><strong>ಬೇಲೂರು:</strong> ಇಲ್ಲಿನ ಶ್ರೀಚನ್ನಕೇಶವಸ್ವಾಮಿ ದೇಗುಲದ ಪ್ರಧಾನ ಅರ್ಚಕ ಕೃಷ್ಣಸ್ವಾಮಿ ಭಟ್ಟರ್ (ಪಾಚು ಭಟ್ಟರ್) 63 ವರ್ಷ ಮಂಗಳವಾರ ಬೆಳಿಗ್ಗೆ ತಮಿಳುನಾಡಿನ ಕಂಚಿಯಲ್ಲಿ ಹೃದಯಾಘಾತದಿಂದ ನಿಧನರಾದರು.</p>.<p>ಮೇಲುಕೋಟೆಯ ಚೆಲುವನಾರಾಯಣಸ್ವಾಮಿ ದೇಗುಲದಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸಿ, ನಂತರ ಬೇಲೂರಿನ ಚನ್ನಕೇಶವ ಸ್ವಾಮಿ ದೇಗುಲದಲ್ಲಿ ಕಳೆದ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಾ. ಇಲ್ಲಿಯೇ ವಾಸವಿದ್ದರು. ತಮಿಳುನಾಡಿನ ಕಂಚಿ ರಥೋತ್ಸವದಲ್ಲಿ ಭಾಗವಹಿಸಲು ಸೋಮವಾರ ಹೋಗಿದ್ದ ಅವರು ಮಂಗಳವಾರ ಕಂಚಿಯಲ್ಲೇ ಹೃದಯಾಘಾತಕ್ಕೆ ಒಳಗಾಗಿದ್ದಾರೆ.</p>.<p>ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರ ಇದ್ದಾರೆ.</p>.<p>ಅಂತ್ಯಕ್ರಿಯೆ ಅವರ ಸ್ವಂತ ಊರಾದ ಮೇಲುಕೋಟೆಯಲ್ಲಿ ಮಂಗಳವಾರ ರಾತ್ರಿ ನೆರವೇರಿಸಲಾಗುವುದು ಎನ್ನಲಾಗಿದೆ.</p>.<p>ಮೃತರ ಗೌರವಾರ್ಥ ಚನ್ನಕೇಶವಸ್ವಾಮಿ ದೇಗುಲದ ಗರ್ಭಗುಡಿ ಹಾಗೂ ಅನ್ನ ದಾಸೋಹವನ್ನು ಮಂಗಳವಾರ ಬಂದ್ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು:</strong> ಇಲ್ಲಿನ ಶ್ರೀಚನ್ನಕೇಶವಸ್ವಾಮಿ ದೇಗುಲದ ಪ್ರಧಾನ ಅರ್ಚಕ ಕೃಷ್ಣಸ್ವಾಮಿ ಭಟ್ಟರ್ (ಪಾಚು ಭಟ್ಟರ್) 63 ವರ್ಷ ಮಂಗಳವಾರ ಬೆಳಿಗ್ಗೆ ತಮಿಳುನಾಡಿನ ಕಂಚಿಯಲ್ಲಿ ಹೃದಯಾಘಾತದಿಂದ ನಿಧನರಾದರು.</p>.<p>ಮೇಲುಕೋಟೆಯ ಚೆಲುವನಾರಾಯಣಸ್ವಾಮಿ ದೇಗುಲದಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸಿ, ನಂತರ ಬೇಲೂರಿನ ಚನ್ನಕೇಶವ ಸ್ವಾಮಿ ದೇಗುಲದಲ್ಲಿ ಕಳೆದ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಾ. ಇಲ್ಲಿಯೇ ವಾಸವಿದ್ದರು. ತಮಿಳುನಾಡಿನ ಕಂಚಿ ರಥೋತ್ಸವದಲ್ಲಿ ಭಾಗವಹಿಸಲು ಸೋಮವಾರ ಹೋಗಿದ್ದ ಅವರು ಮಂಗಳವಾರ ಕಂಚಿಯಲ್ಲೇ ಹೃದಯಾಘಾತಕ್ಕೆ ಒಳಗಾಗಿದ್ದಾರೆ.</p>.<p>ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರ ಇದ್ದಾರೆ.</p>.<p>ಅಂತ್ಯಕ್ರಿಯೆ ಅವರ ಸ್ವಂತ ಊರಾದ ಮೇಲುಕೋಟೆಯಲ್ಲಿ ಮಂಗಳವಾರ ರಾತ್ರಿ ನೆರವೇರಿಸಲಾಗುವುದು ಎನ್ನಲಾಗಿದೆ.</p>.<p>ಮೃತರ ಗೌರವಾರ್ಥ ಚನ್ನಕೇಶವಸ್ವಾಮಿ ದೇಗುಲದ ಗರ್ಭಗುಡಿ ಹಾಗೂ ಅನ್ನ ದಾಸೋಹವನ್ನು ಮಂಗಳವಾರ ಬಂದ್ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>