ರಾಜ್ಯದಲ್ಲಿ 2020-21ನೇ ಸಾಲಿಗೆ 25,30,300 ರೈತರಿಗೆ ಅಲ್ಪಾವಧಿ ಮತ್ತು ದೀರ್ಘಾವಧಿ ಸಾಲವಾಗಿ ₹15,900 ಕೋಟಿ ನೀಡುವ ಗುರಿ ಹೊಂದಿದ್ದು, ಪ್ರಸ್ತುತ ಕೇವಲ 71,391 ರೈತರಿಗೆ ₹ 472.64 ಕೋಟಿ ಸಾಲ ಮಾತ್ರ ನೀಡಲಾಗಿದೆ. ಉಳಿದ ಮೊತ್ತವನ್ನು ಕೇಂದ್ರ ಬ್ಯಾಂಕ್ಗಳ ಮುಖಾಂತರ ರೈತರಿಗೆ ಸಾಲ ನೀಡಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಬಹುಮತ ಪಡೆದು ಬಿಜೆಪಿ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲ ಮೂಲಕ ಹಿಂದಿನ ಬಾಗಿಲಿನಿಂದ ಅಧಿಕಾರಕ್ಕೆ ಬಂದ ‘ಆಪರೇಷನ್ ಸರ್ಕಾರ’ ಎಂದು ವ್ಯಂಗ್ಯವಾಡಿದ ಅವರು, ‘ಲಾಕ್ಡೌನ್ ನಿಂದ ಸಂಕಷ್ಟದಲ್ಲಿರುವ ರೈತರ ಸಾಲ ಮನ್ನಾ ಮಾಡಿದಿದ್ದರೆ ಜನರು ಎಂದಿಗೂ ಕ್ಷಮಿಸುವುದಿಲ್ಲ’ ಎಂದರು.