<p><strong>ಹಾಸನ</strong>: ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದು, ಮತದಾರರು ಬೆಂಬಲ ನೀಡಬೇಕು ಎಂದು ಎ.ವಿ. ಕಾಂತಮ್ಮ ಮಹಿಳಾ ಕಾಲೇಜು ಉಪನ್ಯಾಸಕ ಎಚ್.ಎಲ್. ಮಲ್ಲೇಶ್ಗೌಡ ಮನವಿ ಮಾಡಿದರು.</p>.<p>ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಏನಾದರೂ ಕೊಡುಗೆ ಸಲ್ಲಿಸಬೇಕೆಂಬ ಉದ್ದೇಶದಿಂದ ಸಾಹಿತ್ಯಾಸಕ್ತರ ಒತ್ತಾಯದ ಮೇರೆಗೆ ಸ್ಪರ್ಧೆ ಬಯಸಿದ್ದೇನೆ. ಉಪನ್ಯಾಸಕನಾಗಿ ಕನ್ನಡ ಭಾಷೆ ಬೆಳವಣಿಗೆಗೆ ಸಾಧ್ಯವಾದಷ್ಟು ಕೆಲಸ ಮಾಡಿದ್ದೇನೆ ಎಂದು ಸುದ್ದಿಗೋಷ್ಠಿಯಲ್ಲಿ ಸೋಮವಾರ ಹೇಳಿದರು.</p>.<p>‘ಕನ್ನಡ ಸಾಹಿತ್ಯ ಪರಿಷತ್ ಪ್ರಾತಿನಿಧಿಕ ಸಂಸ್ಥೆಯಾಗಿದ್ದು, ನಾಡು ನುಡಿಗೆ ತೊಂದರೆಯಾದಾಗ ಹೋರಾಡುವ ಗಟ್ಟಿತನ<br />ಉಳಿಸಿಕೊಂಡಿದೆ. ಮಹತ್ವದ ಹುದ್ದೆಗೆ ಪ್ರಜ್ಞಾವಂತರನ್ನು ಆರಿಸಬೇಕೆಂಬುದು ನನ್ನ ಬಯಕೆ. ಈ ಕುರಿತು ಸಾಕಷ್ಟು ಯೋಚನೆ ಮಾಡಿದ್ದೇನೆ ಎಂದರು.</p>.<p>ನಿವೃತ್ತ ಪ್ರಾಂಶುಪಾಲರಾದ ಮಂಜಪ್ಪ, ಲಕ್ಷ್ಮಿನಾರಾಯಣ್, ಚೌಡವಳ್ಳಿ ಪುಟ್ಟರಾಜು, ಡಿ.ಜಿ. ಕೃಷ್ಣೇಗೌಡ, ಉಪನ್ಯಾಸಕ ಸೀ.ಚ. ಯತೀಶ್ವರ್, ಬಿ.ಎಸ್. ದೇವರಾಜು, ಎಚ್.ಎಸ್. ಅನೀಲ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದು, ಮತದಾರರು ಬೆಂಬಲ ನೀಡಬೇಕು ಎಂದು ಎ.ವಿ. ಕಾಂತಮ್ಮ ಮಹಿಳಾ ಕಾಲೇಜು ಉಪನ್ಯಾಸಕ ಎಚ್.ಎಲ್. ಮಲ್ಲೇಶ್ಗೌಡ ಮನವಿ ಮಾಡಿದರು.</p>.<p>ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಏನಾದರೂ ಕೊಡುಗೆ ಸಲ್ಲಿಸಬೇಕೆಂಬ ಉದ್ದೇಶದಿಂದ ಸಾಹಿತ್ಯಾಸಕ್ತರ ಒತ್ತಾಯದ ಮೇರೆಗೆ ಸ್ಪರ್ಧೆ ಬಯಸಿದ್ದೇನೆ. ಉಪನ್ಯಾಸಕನಾಗಿ ಕನ್ನಡ ಭಾಷೆ ಬೆಳವಣಿಗೆಗೆ ಸಾಧ್ಯವಾದಷ್ಟು ಕೆಲಸ ಮಾಡಿದ್ದೇನೆ ಎಂದು ಸುದ್ದಿಗೋಷ್ಠಿಯಲ್ಲಿ ಸೋಮವಾರ ಹೇಳಿದರು.</p>.<p>‘ಕನ್ನಡ ಸಾಹಿತ್ಯ ಪರಿಷತ್ ಪ್ರಾತಿನಿಧಿಕ ಸಂಸ್ಥೆಯಾಗಿದ್ದು, ನಾಡು ನುಡಿಗೆ ತೊಂದರೆಯಾದಾಗ ಹೋರಾಡುವ ಗಟ್ಟಿತನ<br />ಉಳಿಸಿಕೊಂಡಿದೆ. ಮಹತ್ವದ ಹುದ್ದೆಗೆ ಪ್ರಜ್ಞಾವಂತರನ್ನು ಆರಿಸಬೇಕೆಂಬುದು ನನ್ನ ಬಯಕೆ. ಈ ಕುರಿತು ಸಾಕಷ್ಟು ಯೋಚನೆ ಮಾಡಿದ್ದೇನೆ ಎಂದರು.</p>.<p>ನಿವೃತ್ತ ಪ್ರಾಂಶುಪಾಲರಾದ ಮಂಜಪ್ಪ, ಲಕ್ಷ್ಮಿನಾರಾಯಣ್, ಚೌಡವಳ್ಳಿ ಪುಟ್ಟರಾಜು, ಡಿ.ಜಿ. ಕೃಷ್ಣೇಗೌಡ, ಉಪನ್ಯಾಸಕ ಸೀ.ಚ. ಯತೀಶ್ವರ್, ಬಿ.ಎಸ್. ದೇವರಾಜು, ಎಚ್.ಎಸ್. ಅನೀಲ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>