<p><strong>ಹಾಸನ</strong>: ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದ ಅಪಘಾತಕ್ಕೆ ಸಂಬಂಧಿಸಿದಂತೆ ಪರಿಹಾರ ನೀಡಲು ವಿಳಂಬ ಮಾಡಿದ್ದರಿಂದ ಕೆಎಸ್ಆರ್ಟಿಸಿ ಚಿಕ್ಕಮಗಳೂರು ಡಿಪೊ ಬಸ್ ಅನ್ನು ಜಪ್ತಿ ಮಾಡಿ, ಚನ್ನರಾಯಪಟ್ಟಣ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.</p>.<p>ತಾಲ್ಲೂಕಿನ ಪೂಮಡಿಹಳ್ಳಿ ಗ್ರಾಮದ ರಾಮಚಂದ್ರ ಮತ್ತು ವಸಂತ ದಂಪತಿ ಪುತ್ರಿ 15 ವರ್ಷಗಳ ಹಿಂದೆ ಸಂಭವಿಸಿದ್ದ ಸಾರಿಗೆ ಬಸ್ ಅಪಘಾತದಲ್ಲಿ ಮೃತಪಟ್ಟಿದ್ದರು. ಪೋಷಕರು ಪರಿಹಾರಕ್ಕಾಗಿ ಚನ್ನರಾಯಪಟ್ಟಣ ನ್ಯಾಯಾಲಯದ ಮೊರೆ ಹೋಗಿದ್ದರು. ಅಲ್ಲದೇ ಹೆಚ್ಚಿನ ಪರಿಹಾರಕ್ಕಾಗಿ ಹೈಕೋರ್ಟ್ ಮೆಟ್ಟಿಲೇರಿದ್ದರು.</p>.<p>ಈ ಬಗ್ಗೆ ಇಲಾಖೆಗೆ ಹಲವು ಬಾರಿ ನೋಟಿಸ್ ನೀಡಿದ್ದರೂ ಪರಿಹಾರ ನೀಡದೇ ಕಾಲಹರಣ ಮಾಡುತ್ತಿದ್ದುದರಿಂದ ಬಸ್ ಜಪ್ತಿ ಮಾಡುವಂತೆ ಚನ್ನರಾಯಪಟ್ಟಣ ನ್ಯಾಯಾಲಯ ಆದೇಶ ಹೊರಡಿಸಿತ್ತು.</p>.<p>ಅದರಂತೆ ಬೇಲಿಫ್ಗಳ ಸಹಾಯದಿಂದ ಚಿಕ್ಕಮಗಳೂರು ಡಿಪೊಗೆ ಸೇರಿದ ಕೆಎಸ್ಆರ್ಟಿಸಿ ಬಸ್ ಅನ್ನು ಜಪ್ತಿ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದ ಅಪಘಾತಕ್ಕೆ ಸಂಬಂಧಿಸಿದಂತೆ ಪರಿಹಾರ ನೀಡಲು ವಿಳಂಬ ಮಾಡಿದ್ದರಿಂದ ಕೆಎಸ್ಆರ್ಟಿಸಿ ಚಿಕ್ಕಮಗಳೂರು ಡಿಪೊ ಬಸ್ ಅನ್ನು ಜಪ್ತಿ ಮಾಡಿ, ಚನ್ನರಾಯಪಟ್ಟಣ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.</p>.<p>ತಾಲ್ಲೂಕಿನ ಪೂಮಡಿಹಳ್ಳಿ ಗ್ರಾಮದ ರಾಮಚಂದ್ರ ಮತ್ತು ವಸಂತ ದಂಪತಿ ಪುತ್ರಿ 15 ವರ್ಷಗಳ ಹಿಂದೆ ಸಂಭವಿಸಿದ್ದ ಸಾರಿಗೆ ಬಸ್ ಅಪಘಾತದಲ್ಲಿ ಮೃತಪಟ್ಟಿದ್ದರು. ಪೋಷಕರು ಪರಿಹಾರಕ್ಕಾಗಿ ಚನ್ನರಾಯಪಟ್ಟಣ ನ್ಯಾಯಾಲಯದ ಮೊರೆ ಹೋಗಿದ್ದರು. ಅಲ್ಲದೇ ಹೆಚ್ಚಿನ ಪರಿಹಾರಕ್ಕಾಗಿ ಹೈಕೋರ್ಟ್ ಮೆಟ್ಟಿಲೇರಿದ್ದರು.</p>.<p>ಈ ಬಗ್ಗೆ ಇಲಾಖೆಗೆ ಹಲವು ಬಾರಿ ನೋಟಿಸ್ ನೀಡಿದ್ದರೂ ಪರಿಹಾರ ನೀಡದೇ ಕಾಲಹರಣ ಮಾಡುತ್ತಿದ್ದುದರಿಂದ ಬಸ್ ಜಪ್ತಿ ಮಾಡುವಂತೆ ಚನ್ನರಾಯಪಟ್ಟಣ ನ್ಯಾಯಾಲಯ ಆದೇಶ ಹೊರಡಿಸಿತ್ತು.</p>.<p>ಅದರಂತೆ ಬೇಲಿಫ್ಗಳ ಸಹಾಯದಿಂದ ಚಿಕ್ಕಮಗಳೂರು ಡಿಪೊಗೆ ಸೇರಿದ ಕೆಎಸ್ಆರ್ಟಿಸಿ ಬಸ್ ಅನ್ನು ಜಪ್ತಿ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>