<p><strong>ಚನ್ನರಾಯಪಟ್ಟಣ (ಹಾಸನ):</strong> ಅಪಘಾತದಲ್ಲಿ ಮೃತಪಟ್ಟಿದ್ದ ಇಬ್ಬರ ಕುಟುಂಬಕ್ಕೆ ಪರಿಹಾರ ನೀಡದ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಿಕ್ಕಮಗಳೂರು ವಿಭಾಗದ ಎರಡು ಬಸ್ಗಳನ್ನು ಪಟ್ಟಣದಲ್ಲಿ ಜಪ್ತಿ ಮಾಡಲಾಯಿತು.</p>.<p>ಶುಕ್ರವಾರ ಶೃಂಗೇರಿಯಿಂದ ಬೆಂಗಳೂರು ಹಾಗೂ ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ಬಸ್ಗಳನ್ನು ತಡೆಹಿಡಿದ ಕೋರ್ಟ್ ಸಿಬ್ಬಂದಿ, ಪ್ರಯಾಣಿಕರನ್ನು ಇಳಿಸಿ, ಜಪ್ತಿ ಮಾಡಿದರು. ಸಿಬ್ಬಂದಿಯ ಈ ನಡೆಗೆ ಪ್ರಯಾಣಿಕರು ಆಕ್ಷೇಪ ವ್ಯಕ್ತಪಡಿಸಿದರು.</p>.<p>ಚನ್ನರಾಯಪಟ್ಟಣ ತಾಲ್ಲೂಕಿನ ಬೇಡಿಗನಹಳ್ಳಿ ಬಳಿ ಸಂಸ್ಥೆಯ ಬಸ್ ಮತ್ತು ಬೈಕ್ ನಡುವೆ 2023ರ ಏಪ್ರಿಲ್ 23 ರಂದು ನಡೆದಿದ್ದ ಅಪಘಾತದಲ್ಲಿ ರವಿಕಿರಣ್ (19) ಮತ್ತು ರೇಣುಕಪ್ಪ (52) ಸ್ಥಳದಲ್ಲಿ ಮೃತಪಟ್ಟಿದ್ದರು. ಕುಟುಂಬದವರು ವಕೀಲ ದರ್ಶನ್ ಪಟೇಲ್ ಮೂಲಕ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು..</p>.<p>4ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ, ರವಿಕಿರಣ್ ಕುಟುಂಬಕ್ಕೆ ₹19.93 ಲಕ್ಷ ಮತ್ತು ರೇಣುಕಪ್ಪ ಕುಟುಂಬಕ್ಕೆ ₹12.41 ಲಕ್ಷ ಪರಿಹಾರ ನೀಡುವಂತೆ ಚಿಕ್ಕಮಗಳೂರು ವಿಭಾಗಕ್ಕೆ ಸೂಚಿಸಿತ್ತು.</p>.<p>‘ಪರಿಹಾರ ನೀಡದ್ದರಿಂದ ಬಸ್ಗಳನ್ನು ಜಪ್ತಿ ಮಾಡಿದ್ದರು. ₹16 ಲಕ್ಷ ಪರಿಹಾರದ ಮೊತ್ತದ ಚೆಕ್ ಅನ್ನು ಕೋರ್ಟ್ಗೆ ನೀಡಿದ್ದರಿಂದ ಬಸ್ಗಳನ್ನು ಬಿಡುಗಡೆ ಮಾಡಲಾಗಿದೆ. ಬಾಕಿ ಮೊತ್ತವನ್ನು ಫೆ.28ರೊಳಗೆ ಪಾವತಿಸುವಂತೆ ನ್ಯಾಯಾಲಯ ಆದೇಶ ನೀಡಿದೆ’ ಎಂದು ವಕೀಲ ದರ್ಶನ್ ಪಟೇಲ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನರಾಯಪಟ್ಟಣ (ಹಾಸನ):</strong> ಅಪಘಾತದಲ್ಲಿ ಮೃತಪಟ್ಟಿದ್ದ ಇಬ್ಬರ ಕುಟುಂಬಕ್ಕೆ ಪರಿಹಾರ ನೀಡದ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಿಕ್ಕಮಗಳೂರು ವಿಭಾಗದ ಎರಡು ಬಸ್ಗಳನ್ನು ಪಟ್ಟಣದಲ್ಲಿ ಜಪ್ತಿ ಮಾಡಲಾಯಿತು.</p>.<p>ಶುಕ್ರವಾರ ಶೃಂಗೇರಿಯಿಂದ ಬೆಂಗಳೂರು ಹಾಗೂ ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ಬಸ್ಗಳನ್ನು ತಡೆಹಿಡಿದ ಕೋರ್ಟ್ ಸಿಬ್ಬಂದಿ, ಪ್ರಯಾಣಿಕರನ್ನು ಇಳಿಸಿ, ಜಪ್ತಿ ಮಾಡಿದರು. ಸಿಬ್ಬಂದಿಯ ಈ ನಡೆಗೆ ಪ್ರಯಾಣಿಕರು ಆಕ್ಷೇಪ ವ್ಯಕ್ತಪಡಿಸಿದರು.</p>.<p>ಚನ್ನರಾಯಪಟ್ಟಣ ತಾಲ್ಲೂಕಿನ ಬೇಡಿಗನಹಳ್ಳಿ ಬಳಿ ಸಂಸ್ಥೆಯ ಬಸ್ ಮತ್ತು ಬೈಕ್ ನಡುವೆ 2023ರ ಏಪ್ರಿಲ್ 23 ರಂದು ನಡೆದಿದ್ದ ಅಪಘಾತದಲ್ಲಿ ರವಿಕಿರಣ್ (19) ಮತ್ತು ರೇಣುಕಪ್ಪ (52) ಸ್ಥಳದಲ್ಲಿ ಮೃತಪಟ್ಟಿದ್ದರು. ಕುಟುಂಬದವರು ವಕೀಲ ದರ್ಶನ್ ಪಟೇಲ್ ಮೂಲಕ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು..</p>.<p>4ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ, ರವಿಕಿರಣ್ ಕುಟುಂಬಕ್ಕೆ ₹19.93 ಲಕ್ಷ ಮತ್ತು ರೇಣುಕಪ್ಪ ಕುಟುಂಬಕ್ಕೆ ₹12.41 ಲಕ್ಷ ಪರಿಹಾರ ನೀಡುವಂತೆ ಚಿಕ್ಕಮಗಳೂರು ವಿಭಾಗಕ್ಕೆ ಸೂಚಿಸಿತ್ತು.</p>.<p>‘ಪರಿಹಾರ ನೀಡದ್ದರಿಂದ ಬಸ್ಗಳನ್ನು ಜಪ್ತಿ ಮಾಡಿದ್ದರು. ₹16 ಲಕ್ಷ ಪರಿಹಾರದ ಮೊತ್ತದ ಚೆಕ್ ಅನ್ನು ಕೋರ್ಟ್ಗೆ ನೀಡಿದ್ದರಿಂದ ಬಸ್ಗಳನ್ನು ಬಿಡುಗಡೆ ಮಾಡಲಾಗಿದೆ. ಬಾಕಿ ಮೊತ್ತವನ್ನು ಫೆ.28ರೊಳಗೆ ಪಾವತಿಸುವಂತೆ ನ್ಯಾಯಾಲಯ ಆದೇಶ ನೀಡಿದೆ’ ಎಂದು ವಕೀಲ ದರ್ಶನ್ ಪಟೇಲ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>