<p><strong>ಅರಸೀಕೆರೆ:</strong> ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ, ಸರ್ಕಾರದಿಂದ ಸಿಗಬೇಕಾದ ಎಲ್ಲಾ ರೀತಿಯ ಭತ್ಯೆಗಳನ್ನು ನಮಗೂ ಕಲ್ಪಿಸಬೇಕೆಂದು ಆಗ್ರಹಿಸಿ ಅರಸೀಕೆರೆಯಲ್ಲಿ ಸಾರಿಗೆ ನೌಕರರು ಶುಕ್ರವಾರ ನಗರದ ಬಸ್ ನಿಲ್ದಾಣದ ದ್ವಾರದಲ್ಲಿ ಪ್ರತಿಭಟನೆ ನಡೆಸಿದರು.</p>.<p>ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನೇತೃತ್ವ ವಹಿಸಿದ್ದ ಓಂಕಾರ ನಾಯ್ಕ್ ಮಾತನಾಡಿ, ‘ನಮ್ಮ ಬೇಡಿಕೆ ಈಡೇರಿಕೆಗಾಗಿ ಬೆಂಗಳೂರಿನಲ್ಲಿ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿತ್ತು. ಆದರೆ, ನಮ್ಮ ಬೇಡಿಕೆಗೆ ಸರ್ಕಾರದವರು ಸ್ಪಂದಿಸಲಿಲ್ಲ. ಅದಕ್ಕಾಗಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ’ ಎಂದರು.</p>.<p>ಪ್ರಸ್ತುತ ಸಾರಿಗೆ ನೌಕರರ ಶೇ 60ರಷ್ಟು ವೇತನ ಕಡಿಮೆಯಾಗಿದೆ. ಆರೋಗ್ಯ ಭದ್ರತೆಯೂ ಇಲ್ಲ, ಕೊರೊನಾ ಸಂದಿಗ್ಧತೆಯಲ್ಲಿ ಸಾರಿಗೆ ನೌಕರರು ಕರ್ತವ್ಯ ನಿರ್ವಹಿಸಿದ್ದಾರೆ. ತಮ್ಮ ಕರ್ತವ್ಯದ ಅವಧಿಯಲ್ಲಿ ಎಷ್ಟೋ ನೌಕರರು ಸೋಂಕಿತರಾಗಿ ಸಾವನ್ನಪ್ಪಿದ್ದಾರೆ, ಕೊರೊನಾದಿಂದ ಮೃತಪಟ್ಟ ಸಾರಿಗೆ ನೌಕರರಿಗೆ ₹ 30 ಲಕ್ಷ ಪರಿಹಾರ ನೀಡುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ ಕೊರೊನಾದಿಂದ ಮೃತಪಟ್ಟವರ ಕುಟುಂಬದವರಿಗೆ ಇಲ್ಲಿಯವರೆಗೂ ಬಿಡಿಗಾಸೂ ಪರಿಹಾರ ಬಂದಿಲ್ಲ’ ಎಂದು ಆರೋಪಿಸಿದರು.</p>.<p>‘ನಮ್ಮ ಬೇಡಿಕೆ ಈಡೇರುವವರೆಗೂ ಹಾಗೂ ರಾಜ್ಯ ಮಟ್ಟದ ನೌಕರರ ಸಂಘದಿಂದ ಸೂಚನೆ ಬರುವವರೆಗೂ ನಾವು ಧರಣಿ ನಡೆಸಲಾಗುವುದು’ ಎಂದರು.</p>.<p>ನಗರದ ಬಸ್ ನಿಲ್ದಾಣದೊಳಗೆ ಬಸ್ಸುಗಳು ಬಾರದ್ದರಿಂದ ದೂರದ ಊರುಗಳಿಗೆ ಪ್ರಯಾಣಿಸುವ ಪ್ರಯಾಣಿಕರು ಕಾದು ಕುಳಿತ್ತಿದ್ದರು. ಬೆಂಗಳೂರು ಮತ್ತು ಶಿವಮೊಗ್ಗದ ಕಡೆಯಿಂದ ಸಂಚರಿಸುತ್ತಿದ್ದ ಕೆಲ ಬಸ್ಸುಗಳು ಬಸ್ ನಿಲ್ದಾಣದೊಳಗೆ ಬಾರದೆ ಹಾಗೆ ಹೋದವು.</p>.<p>ಮನವಿ ಸ್ವೀಕರಿಸಿದ ಶಾಸಕ ಕೆ.ಎಂ.ಶಿವಲಿಂಗೇಗೌಡ ಮಾತನಾಡಿ, ‘ಸಾರಿಗೆ ನೌಕರರು ತುಂಬಾ ಸಂಕಷ್ಟದಲ್ಲಿದ್ದಾರೆ. ಪ್ರತಿದಿನ ಚಳಿ ಮಳೆಯನ್ನು ಲೆಕ್ಕಿಸದೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ, ಅವರ ಬೇಡಿಕೆಗಳನ್ನು ಈಡೇರಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿ. ಈ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಯ ಮಂತ್ರಿಗಳು ಗಮನಹರಿಸಬೇಕು, ಸಾಧ್ಯವಾದರೆ ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಇದರ ಬಗ್ಗೆ ಸದನದ ಗಮನ ಸೆಳೆಯಲಾಗುವುದು’ ಎಂದು ಭರವಸೆ ನೀಡಿದರು.</p>.<p>ರಮೇಶ್, ರವಿ, ಮಂಜುನಾಥ್, ಯಶವಂತ್, ಕಲ್ಲೇಶ್ , ಕೆಎಸ್ಆರ್ಟಿಸಿ ಕೆಲವು ನೌಕರರು ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಸೀಕೆರೆ:</strong> ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ, ಸರ್ಕಾರದಿಂದ ಸಿಗಬೇಕಾದ ಎಲ್ಲಾ ರೀತಿಯ ಭತ್ಯೆಗಳನ್ನು ನಮಗೂ ಕಲ್ಪಿಸಬೇಕೆಂದು ಆಗ್ರಹಿಸಿ ಅರಸೀಕೆರೆಯಲ್ಲಿ ಸಾರಿಗೆ ನೌಕರರು ಶುಕ್ರವಾರ ನಗರದ ಬಸ್ ನಿಲ್ದಾಣದ ದ್ವಾರದಲ್ಲಿ ಪ್ರತಿಭಟನೆ ನಡೆಸಿದರು.</p>.<p>ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನೇತೃತ್ವ ವಹಿಸಿದ್ದ ಓಂಕಾರ ನಾಯ್ಕ್ ಮಾತನಾಡಿ, ‘ನಮ್ಮ ಬೇಡಿಕೆ ಈಡೇರಿಕೆಗಾಗಿ ಬೆಂಗಳೂರಿನಲ್ಲಿ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿತ್ತು. ಆದರೆ, ನಮ್ಮ ಬೇಡಿಕೆಗೆ ಸರ್ಕಾರದವರು ಸ್ಪಂದಿಸಲಿಲ್ಲ. ಅದಕ್ಕಾಗಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ’ ಎಂದರು.</p>.<p>ಪ್ರಸ್ತುತ ಸಾರಿಗೆ ನೌಕರರ ಶೇ 60ರಷ್ಟು ವೇತನ ಕಡಿಮೆಯಾಗಿದೆ. ಆರೋಗ್ಯ ಭದ್ರತೆಯೂ ಇಲ್ಲ, ಕೊರೊನಾ ಸಂದಿಗ್ಧತೆಯಲ್ಲಿ ಸಾರಿಗೆ ನೌಕರರು ಕರ್ತವ್ಯ ನಿರ್ವಹಿಸಿದ್ದಾರೆ. ತಮ್ಮ ಕರ್ತವ್ಯದ ಅವಧಿಯಲ್ಲಿ ಎಷ್ಟೋ ನೌಕರರು ಸೋಂಕಿತರಾಗಿ ಸಾವನ್ನಪ್ಪಿದ್ದಾರೆ, ಕೊರೊನಾದಿಂದ ಮೃತಪಟ್ಟ ಸಾರಿಗೆ ನೌಕರರಿಗೆ ₹ 30 ಲಕ್ಷ ಪರಿಹಾರ ನೀಡುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ ಕೊರೊನಾದಿಂದ ಮೃತಪಟ್ಟವರ ಕುಟುಂಬದವರಿಗೆ ಇಲ್ಲಿಯವರೆಗೂ ಬಿಡಿಗಾಸೂ ಪರಿಹಾರ ಬಂದಿಲ್ಲ’ ಎಂದು ಆರೋಪಿಸಿದರು.</p>.<p>‘ನಮ್ಮ ಬೇಡಿಕೆ ಈಡೇರುವವರೆಗೂ ಹಾಗೂ ರಾಜ್ಯ ಮಟ್ಟದ ನೌಕರರ ಸಂಘದಿಂದ ಸೂಚನೆ ಬರುವವರೆಗೂ ನಾವು ಧರಣಿ ನಡೆಸಲಾಗುವುದು’ ಎಂದರು.</p>.<p>ನಗರದ ಬಸ್ ನಿಲ್ದಾಣದೊಳಗೆ ಬಸ್ಸುಗಳು ಬಾರದ್ದರಿಂದ ದೂರದ ಊರುಗಳಿಗೆ ಪ್ರಯಾಣಿಸುವ ಪ್ರಯಾಣಿಕರು ಕಾದು ಕುಳಿತ್ತಿದ್ದರು. ಬೆಂಗಳೂರು ಮತ್ತು ಶಿವಮೊಗ್ಗದ ಕಡೆಯಿಂದ ಸಂಚರಿಸುತ್ತಿದ್ದ ಕೆಲ ಬಸ್ಸುಗಳು ಬಸ್ ನಿಲ್ದಾಣದೊಳಗೆ ಬಾರದೆ ಹಾಗೆ ಹೋದವು.</p>.<p>ಮನವಿ ಸ್ವೀಕರಿಸಿದ ಶಾಸಕ ಕೆ.ಎಂ.ಶಿವಲಿಂಗೇಗೌಡ ಮಾತನಾಡಿ, ‘ಸಾರಿಗೆ ನೌಕರರು ತುಂಬಾ ಸಂಕಷ್ಟದಲ್ಲಿದ್ದಾರೆ. ಪ್ರತಿದಿನ ಚಳಿ ಮಳೆಯನ್ನು ಲೆಕ್ಕಿಸದೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ, ಅವರ ಬೇಡಿಕೆಗಳನ್ನು ಈಡೇರಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿ. ಈ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಯ ಮಂತ್ರಿಗಳು ಗಮನಹರಿಸಬೇಕು, ಸಾಧ್ಯವಾದರೆ ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಇದರ ಬಗ್ಗೆ ಸದನದ ಗಮನ ಸೆಳೆಯಲಾಗುವುದು’ ಎಂದು ಭರವಸೆ ನೀಡಿದರು.</p>.<p>ರಮೇಶ್, ರವಿ, ಮಂಜುನಾಥ್, ಯಶವಂತ್, ಕಲ್ಲೇಶ್ , ಕೆಎಸ್ಆರ್ಟಿಸಿ ಕೆಲವು ನೌಕರರು ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>