ಬೆಳಿಗ್ಗೆಯಿಂದ ಜಿಲ್ಲೆಯ ಬೇಲೂರು, ಸಕಲೇಶಪುರ, ಅರಕಲಗೂಡು, ಜಾವಗಲ್, ಹೊಳೆನರಸೀಪುರ, ಶ್ರವಣಬೆಳಗೊಳ, ಅರಸೀಕೆರೆ, ಆಲೂರು, ಹಳೇಬೀಡಿಗೆ ಸಾರಿಗೆ ಸಂಸ್ಥೆ ಬಸ್ಗಳು ಸಂಚಾರ ಆರಂಭಿಸಿವೆ. ಉಳಿದಂತೆ ಬೆಂಗಳೂರು ಮತ್ತು ಮೈಸೂರು ಜಿಲ್ಲೆಗಳಿಗೆ ತಡೆರಹಿತ ಬಸ್ಗಳು ಸಂಚಾರ ನಡೆಸಿದವು ಎಂದು ಕೆಎಸ್ಆರ್ಟಿಸಿ ಹಾಸನ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಮಾಹಿತಿ ನೀಡಿದರು.