<p><strong>ಹಾಸನ: </strong>ನಮ್ಮದು ಪಾಪದ ಸರ್ಕಾರ ಇತ್ತು, ಈಗಪವಿತ್ರ ಸರ್ಕಾರ ಬಂದಿದೆ, ಅವರುಹೇಗೆ ನಡೆಸುತ್ತಾರೆ ನೋಡೋಣ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಶನಿವಾರ ತಿಳಿಸಿದರು.</p>.<p>ಚಿಕ್ಕಮಗಳೂರಿನಿಂದ ಕೆ.ಆರ.ಪೇಟೆಗೆ ಹೋಗುವ ಮಾರ್ಗ ಮಧ್ಯದ ಹಾಸನದ ಪ್ರವಾಸಿ ಮಂದಿರಕ್ಕೆ ಬಂದಿದ್ದ ಕುಮಾರಸ್ವಾಮಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.</p>.<p>ನಾನು ಈಗ ಏನು ಮಾತನಾಡುವುದಿಲ್ಲ, ಜನರು ತೀರ್ಮಾನ ಕೈಗೊಳ್ಳುತ್ತಾರೆ., ಮುಂದೆ ಏನಾಗುತ್ತದೆ ಎಂಬುದನ್ನು ಕಾದು ನೋಡೋಣ ಎಂದು ಕುಮಾರಸ್ವಾಮಿ ಹೇಳಿದರು.</p>.<p>ರಾಜಕೀಯ ನಿವೃತ್ತಿ ತೆಗೆದುಕೊಳ್ಳಬೇಕು ಎಂದು ತೀರ್ಮಾನ ಮಾಡಿದ್ದೆ. ಪ್ರಸ್ತುತ ರಾಜಕೀಯ ಪರಿಸ್ಥಿತಿ ಹದಗೆಟ್ಟಿದೆ ದಯವಿಟ್ಟು ನನ್ನ ಹಾಗೂ ಕುಟುಂಬವನ್ನು ನೆಮ್ಮದಿ ಯಾಗಿ ಇರಲು ಬಿಟ್ಟು ಬಿಡಿ ಎಂದು ಅವರು ಹೇಳಿದರು.</p>.<p>ಉಪಚುನಾವಣೆಯಲ್ಲಿನಿಖಿಲ್, ಪ್ರಜ್ವಲ್ ಸ್ಪರ್ಧೆ ವಿಚಾರ ಕಪೋಲ ಕಲ್ಪಿತವಾಗಿದೆ.ಅಧಿಕಾರಕ್ಕೆ ಅಂಟಿ ಕೂರುವ ಜಾಯಮಾನ ನನ್ನದಲ್ಲ ಎಂದರು.</p>.<p>ನೂತನ ಸರ್ಕಾರ ಬಂದು ಒಂದು ವಾರ ಆಗಿದೆ. ಈಗ ಏನೆನು ನಡೀತಿದೆ ಅನ್ನೋದು ನನಗೆ ಗೊತ್ತು ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ನಮ್ಮದು ಪಾಪದ ಸರ್ಕಾರ ಇತ್ತು, ಈಗಪವಿತ್ರ ಸರ್ಕಾರ ಬಂದಿದೆ, ಅವರುಹೇಗೆ ನಡೆಸುತ್ತಾರೆ ನೋಡೋಣ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಶನಿವಾರ ತಿಳಿಸಿದರು.</p>.<p>ಚಿಕ್ಕಮಗಳೂರಿನಿಂದ ಕೆ.ಆರ.ಪೇಟೆಗೆ ಹೋಗುವ ಮಾರ್ಗ ಮಧ್ಯದ ಹಾಸನದ ಪ್ರವಾಸಿ ಮಂದಿರಕ್ಕೆ ಬಂದಿದ್ದ ಕುಮಾರಸ್ವಾಮಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.</p>.<p>ನಾನು ಈಗ ಏನು ಮಾತನಾಡುವುದಿಲ್ಲ, ಜನರು ತೀರ್ಮಾನ ಕೈಗೊಳ್ಳುತ್ತಾರೆ., ಮುಂದೆ ಏನಾಗುತ್ತದೆ ಎಂಬುದನ್ನು ಕಾದು ನೋಡೋಣ ಎಂದು ಕುಮಾರಸ್ವಾಮಿ ಹೇಳಿದರು.</p>.<p>ರಾಜಕೀಯ ನಿವೃತ್ತಿ ತೆಗೆದುಕೊಳ್ಳಬೇಕು ಎಂದು ತೀರ್ಮಾನ ಮಾಡಿದ್ದೆ. ಪ್ರಸ್ತುತ ರಾಜಕೀಯ ಪರಿಸ್ಥಿತಿ ಹದಗೆಟ್ಟಿದೆ ದಯವಿಟ್ಟು ನನ್ನ ಹಾಗೂ ಕುಟುಂಬವನ್ನು ನೆಮ್ಮದಿ ಯಾಗಿ ಇರಲು ಬಿಟ್ಟು ಬಿಡಿ ಎಂದು ಅವರು ಹೇಳಿದರು.</p>.<p>ಉಪಚುನಾವಣೆಯಲ್ಲಿನಿಖಿಲ್, ಪ್ರಜ್ವಲ್ ಸ್ಪರ್ಧೆ ವಿಚಾರ ಕಪೋಲ ಕಲ್ಪಿತವಾಗಿದೆ.ಅಧಿಕಾರಕ್ಕೆ ಅಂಟಿ ಕೂರುವ ಜಾಯಮಾನ ನನ್ನದಲ್ಲ ಎಂದರು.</p>.<p>ನೂತನ ಸರ್ಕಾರ ಬಂದು ಒಂದು ವಾರ ಆಗಿದೆ. ಈಗ ಏನೆನು ನಡೀತಿದೆ ಅನ್ನೋದು ನನಗೆ ಗೊತ್ತು ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>