ಎತ್ತಿನಹೊಳೆ ಯೋಜನೆ ಕಾಮಗಾರಿ ಪರಿಶೀಲನೆಗೆ ಆಗಮಿಸಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ₹8ಸಾವಿರ ಕೋಟಿ ಯೋಜನೆ ₹23ಸಾವಿರ ಕೋಟಿ ತಲುಪಿದೆ. ಮೊದಲ ಕಾಮಗಾರಿ ಪೂರ್ಣಗೊಳಿಸಿ ಪ್ರಾಯೋಗಿಕವಾಗಿ ನೀರು ಮೇಲೆತ್ತುವ ಕಾರ್ಯ ಆಗಬೇಕು. ಯಾವುದೇ ಯೋಜನೆಗೆ ಡಿಪಿಆರ್ ತಯಾರಿಸಬೇಕು. ಆದರೆ ಈ ಯೋಜನೆಯಲ್ಲಿ ಕೇವಲ ಲೈನ್ ಎಸ್ಟಿಮೆಟ್ ಆಗುತ್ತಿದೆ. ಇದರಿಂದಾಗಿ ಹಣ ಹೆಚ್ಚಾಗುತ್ತಿದೆ . ಯೋಜನೆಗೆ ವೇಗ ನೀಡಲು ನೋಡಲ್ ಅಧಿಕಾರಿ ನೇಮಿಸಬೇಕು ಎಂದು ಒತ್ತಾಯಿಸಿದರು.