<p><strong>ಸಕಲೇಶಪುರ: </strong>ಬಯಲು ಸೀಮೆ ಜಿಲ್ಲೆಗಳಿಗೆ ನೀರು ಒದಗಿಸುವ ಎತ್ತಿನ ಹೊಳೆ ಯೋಜನೆಗೆ ವಿರೋಧ ವ್ಯಕ್ತಪಡಿಸಿಲ್ಲ.ಆದರೆ, ಯೋಜನೆ ಆರಂಭವಾಗಿ ಹಲವು ವರ್ಷಗಳು ಕಳೆದಿದೆ. ಎಷ್ಟು ದಿನ ಜನರಿಗೆ ಕೊಳಚೆ ನೀರು ಕುಡಿಸುತ್ತೀರಾ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರವನ್ನು ಪ್ರಶ್ನಿಸಿದರು.</p>.<p>ಎತ್ತಿನಹೊಳೆ ಯೋಜನೆ ಕಾಮಗಾರಿ ಪರಿಶೀಲನೆಗೆ ಆಗಮಿಸಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ₹8ಸಾವಿರ ಕೋಟಿ ಯೋಜನೆ ₹23ಸಾವಿರ ಕೋಟಿ ತಲುಪಿದೆ. ಮೊದಲ ಕಾಮಗಾರಿ ಪೂರ್ಣಗೊಳಿಸಿ ಪ್ರಾಯೋಗಿಕವಾಗಿ ನೀರು ಮೇಲೆತ್ತುವ ಕಾರ್ಯ ಆಗಬೇಕು. ಯಾವುದೇ ಯೋಜನೆಗೆ ಡಿಪಿಆರ್ ತಯಾರಿಸಬೇಕು. ಆದರೆ ಈ ಯೋಜನೆಯಲ್ಲಿ ಕೇವಲ ಲೈನ್ ಎಸ್ಟಿಮೆಟ್ ಆಗುತ್ತಿದೆ. ಇದರಿಂದಾಗಿ ಹಣ ಹೆಚ್ಚಾಗುತ್ತಿದೆ . ಯೋಜನೆಗೆ ವೇಗ ನೀಡಲು ನೋಡಲ್ ಅಧಿಕಾರಿ ನೇಮಿಸಬೇಕು ಎಂದು ಒತ್ತಾಯಿಸಿದರು.</p>.<p>ಭೂಮಿ ನೀಡಿದ ರೈತರಿಗೆ ಪರಿಹಾರ ನೀಡಲು ಸರ್ಕಾರದ ಬಳಿ ಹಣವಿಲ್ಲ. ಆದರೆ ಗುತ್ತಿಗೆದಾರರಿಗೆ ನಿಗದಿತ ಸಮಯದಲ್ಲಿ ಹಣ ನೀಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು,ಯೋಜನೆ ಮೊದಲ ಹಂತದಲ್ಲಿ ಬಾಕಿ ಇರುವ ಒಂಬತ್ತು ಕಿ.ಮೀ. ಭೂಸ್ವಾಧೀನ ವಿವಾದ ಬಗೆಹರಿಸಬೇಕು ಎಂದರು.</p>.<p>ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಅವರನ್ನ ಕೆಳಗಿಳಸಲು ಆರ್ ಎಸ್ ಎಸ್ ಕಾರಣ. ಅದರ ಬಗ್ಗೆ ಚರ್ಚೆಯಾಗಲಿ. ನಾನು ಯಾರನ್ನೂ ಮೆಚ್ಚಿಸಲು ಹೇಳಿಕೆ ನೀಡಿಲ್ಲ. ಇದು ಆರಂಭ ಅಷ್ಟೇ. ಸತ್ಯಾಂಶ ಹೊರಬರಬೇಕು. ಆರ್ ಎಸ್ ಎಸ್ ಪ್ರಚಾರಕರು ಹೇಳಿರುವುದನ್ನು ತಿಳಿಸಿದ್ದೇನೆ ಅಷ್ಟೇ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಕಲೇಶಪುರ: </strong>ಬಯಲು ಸೀಮೆ ಜಿಲ್ಲೆಗಳಿಗೆ ನೀರು ಒದಗಿಸುವ ಎತ್ತಿನ ಹೊಳೆ ಯೋಜನೆಗೆ ವಿರೋಧ ವ್ಯಕ್ತಪಡಿಸಿಲ್ಲ.ಆದರೆ, ಯೋಜನೆ ಆರಂಭವಾಗಿ ಹಲವು ವರ್ಷಗಳು ಕಳೆದಿದೆ. ಎಷ್ಟು ದಿನ ಜನರಿಗೆ ಕೊಳಚೆ ನೀರು ಕುಡಿಸುತ್ತೀರಾ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರವನ್ನು ಪ್ರಶ್ನಿಸಿದರು.</p>.<p>ಎತ್ತಿನಹೊಳೆ ಯೋಜನೆ ಕಾಮಗಾರಿ ಪರಿಶೀಲನೆಗೆ ಆಗಮಿಸಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ₹8ಸಾವಿರ ಕೋಟಿ ಯೋಜನೆ ₹23ಸಾವಿರ ಕೋಟಿ ತಲುಪಿದೆ. ಮೊದಲ ಕಾಮಗಾರಿ ಪೂರ್ಣಗೊಳಿಸಿ ಪ್ರಾಯೋಗಿಕವಾಗಿ ನೀರು ಮೇಲೆತ್ತುವ ಕಾರ್ಯ ಆಗಬೇಕು. ಯಾವುದೇ ಯೋಜನೆಗೆ ಡಿಪಿಆರ್ ತಯಾರಿಸಬೇಕು. ಆದರೆ ಈ ಯೋಜನೆಯಲ್ಲಿ ಕೇವಲ ಲೈನ್ ಎಸ್ಟಿಮೆಟ್ ಆಗುತ್ತಿದೆ. ಇದರಿಂದಾಗಿ ಹಣ ಹೆಚ್ಚಾಗುತ್ತಿದೆ . ಯೋಜನೆಗೆ ವೇಗ ನೀಡಲು ನೋಡಲ್ ಅಧಿಕಾರಿ ನೇಮಿಸಬೇಕು ಎಂದು ಒತ್ತಾಯಿಸಿದರು.</p>.<p>ಭೂಮಿ ನೀಡಿದ ರೈತರಿಗೆ ಪರಿಹಾರ ನೀಡಲು ಸರ್ಕಾರದ ಬಳಿ ಹಣವಿಲ್ಲ. ಆದರೆ ಗುತ್ತಿಗೆದಾರರಿಗೆ ನಿಗದಿತ ಸಮಯದಲ್ಲಿ ಹಣ ನೀಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು,ಯೋಜನೆ ಮೊದಲ ಹಂತದಲ್ಲಿ ಬಾಕಿ ಇರುವ ಒಂಬತ್ತು ಕಿ.ಮೀ. ಭೂಸ್ವಾಧೀನ ವಿವಾದ ಬಗೆಹರಿಸಬೇಕು ಎಂದರು.</p>.<p>ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಅವರನ್ನ ಕೆಳಗಿಳಸಲು ಆರ್ ಎಸ್ ಎಸ್ ಕಾರಣ. ಅದರ ಬಗ್ಗೆ ಚರ್ಚೆಯಾಗಲಿ. ನಾನು ಯಾರನ್ನೂ ಮೆಚ್ಚಿಸಲು ಹೇಳಿಕೆ ನೀಡಿಲ್ಲ. ಇದು ಆರಂಭ ಅಷ್ಟೇ. ಸತ್ಯಾಂಶ ಹೊರಬರಬೇಕು. ಆರ್ ಎಸ್ ಎಸ್ ಪ್ರಚಾರಕರು ಹೇಳಿರುವುದನ್ನು ತಿಳಿಸಿದ್ದೇನೆ ಅಷ್ಟೇ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>