ಬಿಸಿಲಿನ ತಾಪಮಾನದಿಂದ ಈಗಾಗಲೇ ಕಾವೇರಿ ನದಿಯಲ್ಲಿ ನೀರು ಸಂಪೂರ್ಣ ಕ್ಷೀಣಗೊಂಡಿದೆ. ನದಿ ದಂಡೆ ಮೇಲಿರುವ ಗ್ರಾಮಗಳ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಇದರ ಮಧ್ಯೆ ಕುಶಾಲನಗರ ಪಟ್ಟಣದಲ್ಲಿ ನಿತ್ಯ ಉತ್ಪತ್ತಿಯಾಗುವ ಕೊಳಚೆ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ. ಅಲ್ಲಲ್ಲಿ ನಿಂತಿರುವ ನೀರು ಕೊಳಚೆ ನೀರು ಮಿಶ್ರಣಗೊಂಡು ಜಲಚರ ಪ್ರಾಣಿಗಳು ಆಮ್ಲಜನಕ, ಆಹಾರದ ಕೊರತೆಯಿಂದ ಸಾವನ್ನಪ್ಪುತ್ತಿವೆ. ಜೊತೆಗೆ ದುರ್ವಾಸನೆ ಕೂಡ ಬೀರುತ್ತಿದೆ.