ಸಂಜೆ 5.30ರ ಸಮಯದಲ್ಲಿ ಕಾಂಪೌಂಡ್ ಅಡಿಪಾಯ ದುರಸ್ತಿ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕನ ಮೇಲೆ ಗೋಡೆ ಹಾಗೂ ಮೇಲಿನಿಂದ ಮಣ್ಣು ಕುಸಿದು ಬಿತ್ತು. ಸ್ಥಳದಲ್ಲಿದ್ದ ಇತರ ಕಾರ್ಮಿಕರು ಸಾಕಷ್ಟು ಯತ್ನಿಸಿದರೂ ಮಣ್ಣು ಹಾಗೂ ಕಲ್ಲುಗಳನ್ನು ಸರಿಸಲು ಸಾಧ್ಯವಾಗಲಿಲ್ಲ. ವಿಷಯ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಬಡಾವಣೆ ಠಾಣೆ ಪೊಲೀಸರು ಶವ ಹೊರತೆಗೆದರು.