<p><strong>ಹಾಸನ</strong>: ‘ಜನತಾ ಜಲಧಾರೆ ಆರಂಭಿಸಿರುವುದು ರಾಜಕೀಯಕ್ಕಾಗಿ ಅಲ್ಲ ಎಂಬುದನ್ನು ಕಾಂಗ್ರೆಸ್, ಬಿಜೆಪಿ ಅರ್ಥ ಮಾಡಿಕೊಳ್ಳಬೇಕು. ನೀರಿನ ಹೋರಾಟವಿಚಾರದಲ್ಲಿ ಒಗ್ಗಟ್ಟಿನ ಕೊರತೆಯಿಂದ ರಾಜ್ಯ ಕೆಟ್ಟ ಸನ್ನಿವೇಶ ಎದುರಿಸುತ್ತಿದೆ’ ಎಂದು ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಅಸಮಾಧಾನವ್ಯಕ್ತಪಡಿಸಿದರು.</p>.<p>ನಗರದಲ್ಲಿ ಗುರುವಾರ ನಡೆದ ಜನತಾ ಜಲಧಾರೆ ಸಮಾವೇಶ ಉದ್ಘಾಟಿಸಿಮಾತನಾಡಿದ ಅವರು, ‘ನೀರಾವರಿ ವಿಚಾರದಲ್ಲಿ ಒಗ್ಗಟ್ಟಿಲ್ಲದ ಕಾರಣ ನಮ್ಮಕೂಗಿಗೆ ಸ್ಪಂದನೆ ಸಿಗುತ್ತಿಲ್ಲ. ತಮಿಳುನಾಡಿನ 40 ಸಂಸದರು ಒಟ್ಟಾಗುತ್ತಾರೆ. ಎಲ್ಲಿಯವರೆಗೆ ನಮ್ಮಲ್ಲಿ ಏಕತೆ ಮೂಡುವುದಿಲ್ಲವೋ ಅಲ್ಲಿವರೆಗೂ ರಾಜ್ಯಕ್ಕೆ ಒಳಿತಾಗುವುದಿಲ್ಲ’ ಎಂದು ಎಚ್ಚರಿಸಿದರು.</p>.<p>‘ಚುನಾವಣೆ ಬೇರೆ. ನೀರಿನ ಹೋರಾಟದಲ್ಲಿ ಎಲ್ಲರೂ ಒಂದಾಗಬೇಕು. ಇಲ್ಲವಾದರೆ ತಮಿಳರಹೊಡೆತ ತಡೆಯಲು ಆಗಲ್ಲ. ಸುಪ್ರೀಂಕೋರ್ಟ್ ಹಾಗೂ ನ್ಯಾಯಾಧಿಕರಣದತೀರ್ಮಾನಕ್ಕೆ ವಿರುದ್ಧವಾಗಿ ಕುಡಿಯುವ ನೀರಿನ ನೆಪದಲ್ಲಿ ತಮಿಳುನಾಡಿನಲ್ಲಿಅನೇಕ ನೀರಾವರಿ ಯೋಜನೆಗಳು ನಡೆಯುತ್ತಿವೆ. ಆದರೆ, ನಮ್ಮಲ್ಲಿ ಏನಾಗಿದೆ ಎಂಬುದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು’ ಎಂದರು.</p>.<p>‘ಮೇಕೆದಾಟಿನಿಂದ ನೀರು ತರುತ್ತೇವೆಂದು ಕಾಂಗ್ರೆಸ್ ಪಾದಯಾತ್ರೆನಡೆಸಿತು. ನೀರು ತಂದರೆ ಸಂತೋಷ. ರಾಜ್ಯ ಸರ್ಕಾರದವರು ಕೇಂದ್ರದಿಂದಶೀಘ್ರ ಮಂಜೂರಾತಿ ಪಡೆಯುತ್ತೇವೆ ಅಂತಿದ್ದಾರೆ. ಆದರೆ, ಇದು ನಿಜವಲ್ಲ. ಜನರ<br />ಮುಂದೆ ಸತ್ಯ ಹೇಳುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು’ ಎಂದು ಹೇಳಿದರು.</p>.<p>‘1962ರಲ್ಲಿ ಬಂಡಾಯ ಕಾಂಗ್ರೆಸ್ನಿಂದ ಗೆದ್ದು ಕರ್ನಾಟಕವಿಧಾನಸಭೆಗೆ ಹೋದೆ. ರಾಜ್ಯಕ್ಕೆ ಏನೇ ಅನ್ಯಾಯವಾದರೂ ವಾಸ್ತವಾಂಶಅರಿಯಲು ತಜ್ಞರ ಜೊತೆ ಮಾತನಾಡಿ ನಂತರ ವಿಧಾನಸಭೆಯಲ್ಲಿ ಮಂಡನೆ<br />ಮಾಡಿದೆ. ಅಲ್ಲಿಂದ ಆರಂಭವಾದ ಹೋರಾಟ ಇಂದು ಕೊನೆ ಘಟ್ಟಕ್ಕೆ ಬಂದಿದ್ದು,ಮತ್ತೆ ಹೋರಾಟ ಮಾಡುವ ಶಕ್ತಿ ನನ್ನಲ್ಲಿಲ್ಲ’ ಎಂದರು.</p>.<p>‘ಲಘುವಾಗಿ ಮಾತನಾಡುವ ಕೆಲ ರಾಜಕಾರಣಿಗಳಿದ್ದಾರೆ. ಆದರೆ, ಜಲಧಾರೆಕಾರ್ಯಕ್ರಮ ಮಗ ಅಥವಾ ಮೊಮ್ಮಗ ಸಿ.ಎಂ ಆಗಲು ಅಲ್ಲ. ಅಧಿಕಾರಕೊಡುವವರು ಜನ. ಸರಿಯಾಗಿ ನಡೆದುಕೊಂಡರೆ ಜನ ಸಹಾಯ ಮಾಡುತ್ತಾರೆ’<br />ಎಂದು ಟೀಕಾಕಾರರಿಗೆ ತಿರುಗೇಟು ನೀಡಿದರು.</p>.<p>‘ನಾನು ಮಂತ್ರಿಯಾಗಲು 22 ವರ್ಷ ಕಾಯಬೇಕಾಯಿತು. ಆದರೆ, ಈಗಿನಶಾಸಕರು ಆರಂಭದಲ್ಲೇ ಸಚಿವರಾಗಬೇಕು ಅಂತಾರೆ. ಏನು ಮಾಡೋದು’ಎಂದರು.</p>.<p>ಶಾಸಕ ಎಚ್.ಡಿ.ರೇವಣ್ಣ ಮಾತನಾಡಿ, ‘ರಾಜ್ಯದಲ್ಲಿ ನೀರಾವರಿ ಯೋಜನೆ ಪೂರ್ಣಗೊಳಿಸಲು ₹4 ಲಕ್ಷ ಕೋಟಿ ಅಗತ್ಯವಿದೆ. ಐದು ದಶಕ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಅನುದಾನ ನೀಡಿದ್ದು ತೀರಾ ಕಡಿಮೆ. ಈಗ ಮೇಕೆದಾಟು ಹಿಡಿದಿದ್ದಾರೆ’ ಎಂದು ವ್ಯಂಗ್ಯವಾಡಿದರು.</p>.<p>ಸಮಾವೇಶದಲ್ಲಿ ಶಾಸಕ ಕೆ.ಎಸ್.ಲಿಂಗೇಶ್, ಸಂಸದೀಯ ಮಂಡಳಿ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಮಾತನಾಡಿದರು.</p>.<p>ಶಾಸಕ ಸಿ.ಎನ್.ಬಾಲಕೃಷ್ಣ ಸ್ವಾಗತಿಸಿದರು. ಸಂಸದ ಪ್ರಜ್ವಲ್ ರೇವಣ್ಣ, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ, ಎಚ್ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸೋಮನಹಳ್ಳಿ ನಾಗರಾಜ್, ಮುಖಂಡರಾದ ಎಚ್.ಪಿ.ಸ್ವರೂಪ್, ಮಳಲಿ ಜಯರಾಮ್, ಪರಮ ದೇವರಾಜೇಗೌಡ, ಮೋಹನ್, ಗುಪ್ತ, ಪ್ರಸಾದ್, ಬಾಗೂರು ಶಿವಣ್ಣ, ರಾಜೇಗೌಡ, ಬಿ.ವಿ.ಕರೀಗೌಡ, ಹೊನ್ನವಳ್ಳಿ ಸತೀಶ್, ಇಂದ್ರೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ‘ಜನತಾ ಜಲಧಾರೆ ಆರಂಭಿಸಿರುವುದು ರಾಜಕೀಯಕ್ಕಾಗಿ ಅಲ್ಲ ಎಂಬುದನ್ನು ಕಾಂಗ್ರೆಸ್, ಬಿಜೆಪಿ ಅರ್ಥ ಮಾಡಿಕೊಳ್ಳಬೇಕು. ನೀರಿನ ಹೋರಾಟವಿಚಾರದಲ್ಲಿ ಒಗ್ಗಟ್ಟಿನ ಕೊರತೆಯಿಂದ ರಾಜ್ಯ ಕೆಟ್ಟ ಸನ್ನಿವೇಶ ಎದುರಿಸುತ್ತಿದೆ’ ಎಂದು ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಅಸಮಾಧಾನವ್ಯಕ್ತಪಡಿಸಿದರು.</p>.<p>ನಗರದಲ್ಲಿ ಗುರುವಾರ ನಡೆದ ಜನತಾ ಜಲಧಾರೆ ಸಮಾವೇಶ ಉದ್ಘಾಟಿಸಿಮಾತನಾಡಿದ ಅವರು, ‘ನೀರಾವರಿ ವಿಚಾರದಲ್ಲಿ ಒಗ್ಗಟ್ಟಿಲ್ಲದ ಕಾರಣ ನಮ್ಮಕೂಗಿಗೆ ಸ್ಪಂದನೆ ಸಿಗುತ್ತಿಲ್ಲ. ತಮಿಳುನಾಡಿನ 40 ಸಂಸದರು ಒಟ್ಟಾಗುತ್ತಾರೆ. ಎಲ್ಲಿಯವರೆಗೆ ನಮ್ಮಲ್ಲಿ ಏಕತೆ ಮೂಡುವುದಿಲ್ಲವೋ ಅಲ್ಲಿವರೆಗೂ ರಾಜ್ಯಕ್ಕೆ ಒಳಿತಾಗುವುದಿಲ್ಲ’ ಎಂದು ಎಚ್ಚರಿಸಿದರು.</p>.<p>‘ಚುನಾವಣೆ ಬೇರೆ. ನೀರಿನ ಹೋರಾಟದಲ್ಲಿ ಎಲ್ಲರೂ ಒಂದಾಗಬೇಕು. ಇಲ್ಲವಾದರೆ ತಮಿಳರಹೊಡೆತ ತಡೆಯಲು ಆಗಲ್ಲ. ಸುಪ್ರೀಂಕೋರ್ಟ್ ಹಾಗೂ ನ್ಯಾಯಾಧಿಕರಣದತೀರ್ಮಾನಕ್ಕೆ ವಿರುದ್ಧವಾಗಿ ಕುಡಿಯುವ ನೀರಿನ ನೆಪದಲ್ಲಿ ತಮಿಳುನಾಡಿನಲ್ಲಿಅನೇಕ ನೀರಾವರಿ ಯೋಜನೆಗಳು ನಡೆಯುತ್ತಿವೆ. ಆದರೆ, ನಮ್ಮಲ್ಲಿ ಏನಾಗಿದೆ ಎಂಬುದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು’ ಎಂದರು.</p>.<p>‘ಮೇಕೆದಾಟಿನಿಂದ ನೀರು ತರುತ್ತೇವೆಂದು ಕಾಂಗ್ರೆಸ್ ಪಾದಯಾತ್ರೆನಡೆಸಿತು. ನೀರು ತಂದರೆ ಸಂತೋಷ. ರಾಜ್ಯ ಸರ್ಕಾರದವರು ಕೇಂದ್ರದಿಂದಶೀಘ್ರ ಮಂಜೂರಾತಿ ಪಡೆಯುತ್ತೇವೆ ಅಂತಿದ್ದಾರೆ. ಆದರೆ, ಇದು ನಿಜವಲ್ಲ. ಜನರ<br />ಮುಂದೆ ಸತ್ಯ ಹೇಳುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು’ ಎಂದು ಹೇಳಿದರು.</p>.<p>‘1962ರಲ್ಲಿ ಬಂಡಾಯ ಕಾಂಗ್ರೆಸ್ನಿಂದ ಗೆದ್ದು ಕರ್ನಾಟಕವಿಧಾನಸಭೆಗೆ ಹೋದೆ. ರಾಜ್ಯಕ್ಕೆ ಏನೇ ಅನ್ಯಾಯವಾದರೂ ವಾಸ್ತವಾಂಶಅರಿಯಲು ತಜ್ಞರ ಜೊತೆ ಮಾತನಾಡಿ ನಂತರ ವಿಧಾನಸಭೆಯಲ್ಲಿ ಮಂಡನೆ<br />ಮಾಡಿದೆ. ಅಲ್ಲಿಂದ ಆರಂಭವಾದ ಹೋರಾಟ ಇಂದು ಕೊನೆ ಘಟ್ಟಕ್ಕೆ ಬಂದಿದ್ದು,ಮತ್ತೆ ಹೋರಾಟ ಮಾಡುವ ಶಕ್ತಿ ನನ್ನಲ್ಲಿಲ್ಲ’ ಎಂದರು.</p>.<p>‘ಲಘುವಾಗಿ ಮಾತನಾಡುವ ಕೆಲ ರಾಜಕಾರಣಿಗಳಿದ್ದಾರೆ. ಆದರೆ, ಜಲಧಾರೆಕಾರ್ಯಕ್ರಮ ಮಗ ಅಥವಾ ಮೊಮ್ಮಗ ಸಿ.ಎಂ ಆಗಲು ಅಲ್ಲ. ಅಧಿಕಾರಕೊಡುವವರು ಜನ. ಸರಿಯಾಗಿ ನಡೆದುಕೊಂಡರೆ ಜನ ಸಹಾಯ ಮಾಡುತ್ತಾರೆ’<br />ಎಂದು ಟೀಕಾಕಾರರಿಗೆ ತಿರುಗೇಟು ನೀಡಿದರು.</p>.<p>‘ನಾನು ಮಂತ್ರಿಯಾಗಲು 22 ವರ್ಷ ಕಾಯಬೇಕಾಯಿತು. ಆದರೆ, ಈಗಿನಶಾಸಕರು ಆರಂಭದಲ್ಲೇ ಸಚಿವರಾಗಬೇಕು ಅಂತಾರೆ. ಏನು ಮಾಡೋದು’ಎಂದರು.</p>.<p>ಶಾಸಕ ಎಚ್.ಡಿ.ರೇವಣ್ಣ ಮಾತನಾಡಿ, ‘ರಾಜ್ಯದಲ್ಲಿ ನೀರಾವರಿ ಯೋಜನೆ ಪೂರ್ಣಗೊಳಿಸಲು ₹4 ಲಕ್ಷ ಕೋಟಿ ಅಗತ್ಯವಿದೆ. ಐದು ದಶಕ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಅನುದಾನ ನೀಡಿದ್ದು ತೀರಾ ಕಡಿಮೆ. ಈಗ ಮೇಕೆದಾಟು ಹಿಡಿದಿದ್ದಾರೆ’ ಎಂದು ವ್ಯಂಗ್ಯವಾಡಿದರು.</p>.<p>ಸಮಾವೇಶದಲ್ಲಿ ಶಾಸಕ ಕೆ.ಎಸ್.ಲಿಂಗೇಶ್, ಸಂಸದೀಯ ಮಂಡಳಿ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಮಾತನಾಡಿದರು.</p>.<p>ಶಾಸಕ ಸಿ.ಎನ್.ಬಾಲಕೃಷ್ಣ ಸ್ವಾಗತಿಸಿದರು. ಸಂಸದ ಪ್ರಜ್ವಲ್ ರೇವಣ್ಣ, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ, ಎಚ್ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸೋಮನಹಳ್ಳಿ ನಾಗರಾಜ್, ಮುಖಂಡರಾದ ಎಚ್.ಪಿ.ಸ್ವರೂಪ್, ಮಳಲಿ ಜಯರಾಮ್, ಪರಮ ದೇವರಾಜೇಗೌಡ, ಮೋಹನ್, ಗುಪ್ತ, ಪ್ರಸಾದ್, ಬಾಗೂರು ಶಿವಣ್ಣ, ರಾಜೇಗೌಡ, ಬಿ.ವಿ.ಕರೀಗೌಡ, ಹೊನ್ನವಳ್ಳಿ ಸತೀಶ್, ಇಂದ್ರೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>