<p><strong>ಹಾಸನ</strong>: ಜಿಲ್ಲೆಯಲ್ಲಿ ಕೆರೆಗಳ ಒತ್ತುವರಿ ಪತ್ತೆ ಹಚ್ಚುವುದು, ತೆರವುಗೊಳಿಸುವುದು, ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಕೆರೆ ಒತ್ತುವರಿ ತೆರವು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ನಗರದ ಹುಣಸಿನಕೆರೆ ದಡದಲ್ಲಿ ಸಾರ್ವಜನಿಕರು ಕಸ ವಿಲೇವಾರಿ ಮಾಡುತ್ತಿದ್ದಾರೆ. ಈ ಕೆರೆ ಸುತ್ತ ಬೇಲಿ ನಿರ್ಮಾಣ ಮಾಡಿ, ಸಂರಕ್ಷಣೆ ಮಾಡಬೇಕು. ಜೊತೆಗೆ ಕೆರೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು’ ಎಂದು ಬೃಹತ್ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಕೆರೆಯ ಬಳಿಯಿರುವ ಮನೆಗಳ ಒಳಚರಂಡಿ ನೀರು ಕೆರೆಗೆ ಹರಿಯುವಂತೆ ಸಂಪರ್ಕ ನೀಡಿದ್ದಾರೆ ಇದನ್ನು ಮೊದಲು ತಪ್ಪಿಸಬೇಕು. ಉಪ ಲೋಕಾಯುಕ್ತರು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ನೀಡಿರುವ ನಿರ್ದೇಶನದಂತೆ ಅಧಿಕಾರಿಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಕೂಡಲೇ ಲೋಕಾಯುಕ್ತ ಕಚೇರಿಗೆ ವರದಿ ಕಳುಹಿಸುವಂತೆ’ ಸೂಚಿಸಿದರು.</p>.<p>‘ಪ್ರತಿ ತಾಲ್ಲೂಕಿನಲ್ಲಿ ಕೆರೆ ಒತ್ತುವರಿ ಬಗ್ಗೆ ಸಭೆ ನಡೆಸಿ, ಒತ್ತುವರಿ ಗುರುತಿಸಿ ತೆರವುಗೊಳಿಸಿರುವ ಸಂಖ್ಯೆ, ತೆರವಿಗೆ ಬಾಕಿಯಿರುವ ಸಂಖ್ಯೆ ಮತ್ತು ತೆರವಿಗೆ ಏನು ಸಮಸ್ಯೆ ಇದೆ ಎಂಬುದರ ಬಗ್ಗೆ ವರದಿ ನೀಡಬೇಕು’ ಎಂದು ಸೂಚಿಸಿದರು.</p>.<p>ಜಿಲ್ಲೆಯಲ್ಲಿರುವ ಕೆರೆಗಳು ಪೂರ್ಣ ಪ್ರಮಾಣದಲ್ಲಿ, ಶೇ 50 ರಷ್ಟು, ಶೇ 50 ಕ್ಕಿಂತ ಕಡಿಮೆ ನೀರು ತುಂಬಿರುವ ಹಾಗೂ ನೀರೇ ಇಲ್ಲದಿರುವ ಕೆರೆಗಳ ಬಗ್ಗೆ ಮಾಹಿತಿ ನೀಡುವಂತೆ ತಿಳಿಸಿದರು.</p>.<p>‘ಕೆರೆಗಳ ನೀರಿನ ಮಾದರಿಗಳನ್ನು ಪರೀಕ್ಷೆ ನಡೆಸಬೇಕು. ಬಳಕೆಗೆ ಯೋಗ್ಯವಾಗಿದೆಯೇ ಎಂಬುದರ ಬಗ್ಗೆ ಪರಿಶೀಲಿಸಬೇಕು. ಕಲುಷಿತಗೊಂಡಿರುವ ಬಗ್ಗೆ ಅನುಮಾನಗಳು ಬಂದರೆ ಪರಿಸರ ಇಲಾಖೆ ಗಮನಕ್ಕೆ ತಂದು ನೀರಿನ ಮಾದರಿಗಳನ್ನು ಪರೀಕ್ಷೆ ನಡೆಸುವಂತೆ’ ನಿರ್ದೇಶನ ನೀಡಿದರು.</p>.<p>ಹಿರಿಯ ಸಿವಿಲ್ ನ್ಯಾಯಾಧೀಶೆ ಜಿ.ಕೆ.ದಾಕ್ಷಾಯಿಣಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣಮೂರ್ತಿ, ಸಣ್ಣ ನೀರಾವರಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ರಾಮಚಂದ್ರ, ಯೋಜನಾ ನಿರ್ದೇಶಕ ನಾಗರಾಜ್, ಅಧಿಕಾರಿಗಳು ಭಾಗವಹಿಸಿದ್ದರು.</p>.<p> <strong>ಕೆರೆಗಳ ಹೂಳು ತೆಗೆಯಬೇಕು. ಕೆರೆಗೆ ನೀರು ಸರಾಗವಾಗಿ ಹರಿಯಲು ಕಾಲುವೆಗಳನ್ನು ಸ್ವಚ್ಛಗೊಳಿಸಬೇಕು. ಕೆರೆಗಳ ಮೇಲ್ವಿಚಾರಣೆ ಮಾಡಬೇಕು</strong></p><p><strong>–ಕೆ.ಎಸ್. ಲತಾಕುಮಾರಿ ಜಿಲ್ಲಾಧಿಕಾರಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಜಿಲ್ಲೆಯಲ್ಲಿ ಕೆರೆಗಳ ಒತ್ತುವರಿ ಪತ್ತೆ ಹಚ್ಚುವುದು, ತೆರವುಗೊಳಿಸುವುದು, ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಕೆರೆ ಒತ್ತುವರಿ ತೆರವು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ನಗರದ ಹುಣಸಿನಕೆರೆ ದಡದಲ್ಲಿ ಸಾರ್ವಜನಿಕರು ಕಸ ವಿಲೇವಾರಿ ಮಾಡುತ್ತಿದ್ದಾರೆ. ಈ ಕೆರೆ ಸುತ್ತ ಬೇಲಿ ನಿರ್ಮಾಣ ಮಾಡಿ, ಸಂರಕ್ಷಣೆ ಮಾಡಬೇಕು. ಜೊತೆಗೆ ಕೆರೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು’ ಎಂದು ಬೃಹತ್ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಕೆರೆಯ ಬಳಿಯಿರುವ ಮನೆಗಳ ಒಳಚರಂಡಿ ನೀರು ಕೆರೆಗೆ ಹರಿಯುವಂತೆ ಸಂಪರ್ಕ ನೀಡಿದ್ದಾರೆ ಇದನ್ನು ಮೊದಲು ತಪ್ಪಿಸಬೇಕು. ಉಪ ಲೋಕಾಯುಕ್ತರು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ನೀಡಿರುವ ನಿರ್ದೇಶನದಂತೆ ಅಧಿಕಾರಿಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಕೂಡಲೇ ಲೋಕಾಯುಕ್ತ ಕಚೇರಿಗೆ ವರದಿ ಕಳುಹಿಸುವಂತೆ’ ಸೂಚಿಸಿದರು.</p>.<p>‘ಪ್ರತಿ ತಾಲ್ಲೂಕಿನಲ್ಲಿ ಕೆರೆ ಒತ್ತುವರಿ ಬಗ್ಗೆ ಸಭೆ ನಡೆಸಿ, ಒತ್ತುವರಿ ಗುರುತಿಸಿ ತೆರವುಗೊಳಿಸಿರುವ ಸಂಖ್ಯೆ, ತೆರವಿಗೆ ಬಾಕಿಯಿರುವ ಸಂಖ್ಯೆ ಮತ್ತು ತೆರವಿಗೆ ಏನು ಸಮಸ್ಯೆ ಇದೆ ಎಂಬುದರ ಬಗ್ಗೆ ವರದಿ ನೀಡಬೇಕು’ ಎಂದು ಸೂಚಿಸಿದರು.</p>.<p>ಜಿಲ್ಲೆಯಲ್ಲಿರುವ ಕೆರೆಗಳು ಪೂರ್ಣ ಪ್ರಮಾಣದಲ್ಲಿ, ಶೇ 50 ರಷ್ಟು, ಶೇ 50 ಕ್ಕಿಂತ ಕಡಿಮೆ ನೀರು ತುಂಬಿರುವ ಹಾಗೂ ನೀರೇ ಇಲ್ಲದಿರುವ ಕೆರೆಗಳ ಬಗ್ಗೆ ಮಾಹಿತಿ ನೀಡುವಂತೆ ತಿಳಿಸಿದರು.</p>.<p>‘ಕೆರೆಗಳ ನೀರಿನ ಮಾದರಿಗಳನ್ನು ಪರೀಕ್ಷೆ ನಡೆಸಬೇಕು. ಬಳಕೆಗೆ ಯೋಗ್ಯವಾಗಿದೆಯೇ ಎಂಬುದರ ಬಗ್ಗೆ ಪರಿಶೀಲಿಸಬೇಕು. ಕಲುಷಿತಗೊಂಡಿರುವ ಬಗ್ಗೆ ಅನುಮಾನಗಳು ಬಂದರೆ ಪರಿಸರ ಇಲಾಖೆ ಗಮನಕ್ಕೆ ತಂದು ನೀರಿನ ಮಾದರಿಗಳನ್ನು ಪರೀಕ್ಷೆ ನಡೆಸುವಂತೆ’ ನಿರ್ದೇಶನ ನೀಡಿದರು.</p>.<p>ಹಿರಿಯ ಸಿವಿಲ್ ನ್ಯಾಯಾಧೀಶೆ ಜಿ.ಕೆ.ದಾಕ್ಷಾಯಿಣಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣಮೂರ್ತಿ, ಸಣ್ಣ ನೀರಾವರಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ರಾಮಚಂದ್ರ, ಯೋಜನಾ ನಿರ್ದೇಶಕ ನಾಗರಾಜ್, ಅಧಿಕಾರಿಗಳು ಭಾಗವಹಿಸಿದ್ದರು.</p>.<p> <strong>ಕೆರೆಗಳ ಹೂಳು ತೆಗೆಯಬೇಕು. ಕೆರೆಗೆ ನೀರು ಸರಾಗವಾಗಿ ಹರಿಯಲು ಕಾಲುವೆಗಳನ್ನು ಸ್ವಚ್ಛಗೊಳಿಸಬೇಕು. ಕೆರೆಗಳ ಮೇಲ್ವಿಚಾರಣೆ ಮಾಡಬೇಕು</strong></p><p><strong>–ಕೆ.ಎಸ್. ಲತಾಕುಮಾರಿ ಜಿಲ್ಲಾಧಿಕಾರಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>