‘ಕೆರೆ ಒತ್ತುವರಿ ಬಗ್ಗೆ2015 ರಿಂದಲೂ ಜಿಲ್ಲಾಧಿಕಾರಿ, ಜಿಲ್ಲಾ ನಗರಾಭಿವೃದ್ಧಿ ಕೋಶ, ಮಳಲಿ ಗ್ರಾಮ ಪಂಚಾಯಿತಿಗೆ ಲಿಖಿತ ದೂರು ನೀಡಲಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾಧಿಕಾರಿ 2016ರ ಜ. 1ರಲ್ಲಿಯೇ ಸೂಚನೆ ನೀಡಿದ್ದರೂ ಮುಖ್ಯಾಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಒತ್ತುವರಿ ತೆರವುಗೊಳಿಸುವ ವರೆಗೂ ಹೋರಾಟ ನಿಲ್ಲದು’ ಎಂದು ಪುರಸಭೆ ಮಾಜಿ ಸದಸ್ಯ ಎಸ್.ಎ. ಮೋಹನ್ ತಿಳಿಸಿದರು.