<p><strong>ಹಾಸನ:</strong> ಜಿಲ್ಲೆಯ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ಶನಿವಾರ ನೂರಾರು ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ನಗರದ ಹೇಮಾವತಿ ಪ್ರತಿಮೆ ಎದುರು ಸಂಘಟಿತರಾದ ರೈತರು ಮತ್ತು ಸಂಘದ ಮುಖಂಡರು, ಮೆರವಣಿಗೆಯಲ್ಲಿ ಎನ್.ಆರ್. ವೃತ್ತದ ಮೂಲಕ ಸಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.</p>.<p>ರೈತ ಸಂಘದ ಮುಖಂಡ ಆನೆಕೆರೆ ರವಿ ಮಾತನಾಡಿ, ಬೀರನಹಳ್ಳಿ ಕೆರೆ ಪ್ರದೇಶದಲ್ಲಿ 2007ರಲ್ಲಿ ಬಡವರಿಗೆ ನೀಡಿದ್ದ ನಿವೇಶನಗಳನ್ನು, ನಂತರ ಹಿಂಪಡೆದಿರುವುದು ಅನ್ಯಾಯ. ಹಿಂಪಡೆಯಲಾದ ನಿವೇಶನಗಳಿಗೆ ಪರ್ಯಾಯವಾಗಿ ತಕ್ಷಣವೇ ನಿವೇಶನ ನೀಡಬೇಕು ಎಂದು ಆಗ್ರಹಿಸಿದರು.</p>.<p>ಬೇಲೂರು ತಾಲ್ಲೂಕಿನ ಬಂಟೆನಹಳ್ಳಿ ಗ್ರಾಮದಲ್ಲಿ ವಿವಿಧ ಸಮುದಾಯಗಳ 400ಕ್ಕೂ ಹೆಚ್ಚು ಕುಟುಂಬಗಳಿಗೆ ನಿವೇಶನ ನೀಡದೇ ವಂಚನೆ ಮಾಡಲಾಗುತ್ತಿದೆ. ಸರ್ಕಾರ ಕೂಡಲೇ ಎಚ್ಚೆತ್ತು ಬಡವರಿಗೆ ನಿವೇಶನ ಕಲ್ಪಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಘೇರಾವ್ ಹಾಕಲಾಗುವುದು ಎಂದು ಎಚ್ಚರಿಸಿದರು.</p>.<p>ಜಿಲ್ಲೆಯ ವಿವಿಧ ಭಾಗಗಳಲ್ಲಿ ಅಕ್ರಮ–ಸಕ್ರಮ ಯೋಜನೆಯಡಿ ನೀಡಲಾದ ಹಕ್ಕುಪತ್ರಗಳನ್ನು ತಡೆಹಿಡಿಯಲಾಗುತ್ತಿದೆ. ಇದು ಬಡವರಿಗೆ ವಂಚನೆಯಾಗಿದ್ದು, ಸರ್ಕಾರ ತಕ್ಷಣವೇ ಈ ಅವ್ಯವಹಾರಗಳಿಗೆ ಕಡಿವಾಣ ಹಾಕಬೇಕು. ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ರೈತ ಸಂಘ ತನ್ನದೇ ರೀತಿಯಲ್ಲಿ ಪ್ರತಿರೋಧ ನಡೆಸಲಿದೆ ಎಂದು ತಿಳಿಸಿದರು.</p>.<p>ಜಿಲ್ಲೆಯಾದ್ಯಂತ ಬಡ ರೈತರ ಸಾಲದ ಹೆಸರಿನಲ್ಲಿ ಆನ್ಲೈನ್ ಮೂಲಕ ಆಸ್ತಿಗಳನ್ನು ಹರಾಜು ಮಾಡುವ ಪ್ರಕ್ರಿಯೆ ನಡೆಯುತ್ತಿರುವುದು ಖಂಡನೀಯ. ಸರ್ಕಾರ ಮಧ್ಯಪ್ರವೇಶಿಸಿ ಈ ಹರಾಜು ಪ್ರಕ್ರಿಯೆ ನಿಲ್ಲಿಸಬೇಕು. ಮಾಹಿತಿ ಇಲ್ಲದೇ ರೈತರ ಆಸ್ತಿಪಾಸ್ತಿ ಬ್ಯಾಂಕ್ ಪಾಲಾಗುತ್ತಿರುವುದು ಸರಿಯಲ್ಲ. ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.</p>.<p>ರಾಷ್ಟ್ರೀಕೃತ ಬ್ಯಾಂಕ್ಗಳು ಗೌರವಯುತವಾಗಿ ಸಾಲ ವಸೂಲಿ ಮಾಡಬೇಕು. ಆನ್ಲೈನ್ ಹರಾಜು ಮೂಲಕ ರೈತರನ್ನು ವಂಚಿಸುವ ಕ್ರಮ ಮುಂದುವರಿದರೆ ರೈತ ಸಂಘ ಸಹಿಸುವುದಿಲ್ಲ ಎಂದು ಹೇಳಿದರು.</p>.<p>ಬಾಬು, ಮೊಹಮ್ಮದ್ ಸಾದಿಕ್, ವಿಠಲ, ಪುಟ್ಟರಾಜು, ಕಾಳಕ್ಕ, ಪವಿತ್ರಾ, ಕವಿತಾ ಸೇರಿದಂತೆ ಅನೇಕ ರೈತರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಜಿಲ್ಲೆಯ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ಶನಿವಾರ ನೂರಾರು ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ನಗರದ ಹೇಮಾವತಿ ಪ್ರತಿಮೆ ಎದುರು ಸಂಘಟಿತರಾದ ರೈತರು ಮತ್ತು ಸಂಘದ ಮುಖಂಡರು, ಮೆರವಣಿಗೆಯಲ್ಲಿ ಎನ್.ಆರ್. ವೃತ್ತದ ಮೂಲಕ ಸಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.</p>.<p>ರೈತ ಸಂಘದ ಮುಖಂಡ ಆನೆಕೆರೆ ರವಿ ಮಾತನಾಡಿ, ಬೀರನಹಳ್ಳಿ ಕೆರೆ ಪ್ರದೇಶದಲ್ಲಿ 2007ರಲ್ಲಿ ಬಡವರಿಗೆ ನೀಡಿದ್ದ ನಿವೇಶನಗಳನ್ನು, ನಂತರ ಹಿಂಪಡೆದಿರುವುದು ಅನ್ಯಾಯ. ಹಿಂಪಡೆಯಲಾದ ನಿವೇಶನಗಳಿಗೆ ಪರ್ಯಾಯವಾಗಿ ತಕ್ಷಣವೇ ನಿವೇಶನ ನೀಡಬೇಕು ಎಂದು ಆಗ್ರಹಿಸಿದರು.</p>.<p>ಬೇಲೂರು ತಾಲ್ಲೂಕಿನ ಬಂಟೆನಹಳ್ಳಿ ಗ್ರಾಮದಲ್ಲಿ ವಿವಿಧ ಸಮುದಾಯಗಳ 400ಕ್ಕೂ ಹೆಚ್ಚು ಕುಟುಂಬಗಳಿಗೆ ನಿವೇಶನ ನೀಡದೇ ವಂಚನೆ ಮಾಡಲಾಗುತ್ತಿದೆ. ಸರ್ಕಾರ ಕೂಡಲೇ ಎಚ್ಚೆತ್ತು ಬಡವರಿಗೆ ನಿವೇಶನ ಕಲ್ಪಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಘೇರಾವ್ ಹಾಕಲಾಗುವುದು ಎಂದು ಎಚ್ಚರಿಸಿದರು.</p>.<p>ಜಿಲ್ಲೆಯ ವಿವಿಧ ಭಾಗಗಳಲ್ಲಿ ಅಕ್ರಮ–ಸಕ್ರಮ ಯೋಜನೆಯಡಿ ನೀಡಲಾದ ಹಕ್ಕುಪತ್ರಗಳನ್ನು ತಡೆಹಿಡಿಯಲಾಗುತ್ತಿದೆ. ಇದು ಬಡವರಿಗೆ ವಂಚನೆಯಾಗಿದ್ದು, ಸರ್ಕಾರ ತಕ್ಷಣವೇ ಈ ಅವ್ಯವಹಾರಗಳಿಗೆ ಕಡಿವಾಣ ಹಾಕಬೇಕು. ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ರೈತ ಸಂಘ ತನ್ನದೇ ರೀತಿಯಲ್ಲಿ ಪ್ರತಿರೋಧ ನಡೆಸಲಿದೆ ಎಂದು ತಿಳಿಸಿದರು.</p>.<p>ಜಿಲ್ಲೆಯಾದ್ಯಂತ ಬಡ ರೈತರ ಸಾಲದ ಹೆಸರಿನಲ್ಲಿ ಆನ್ಲೈನ್ ಮೂಲಕ ಆಸ್ತಿಗಳನ್ನು ಹರಾಜು ಮಾಡುವ ಪ್ರಕ್ರಿಯೆ ನಡೆಯುತ್ತಿರುವುದು ಖಂಡನೀಯ. ಸರ್ಕಾರ ಮಧ್ಯಪ್ರವೇಶಿಸಿ ಈ ಹರಾಜು ಪ್ರಕ್ರಿಯೆ ನಿಲ್ಲಿಸಬೇಕು. ಮಾಹಿತಿ ಇಲ್ಲದೇ ರೈತರ ಆಸ್ತಿಪಾಸ್ತಿ ಬ್ಯಾಂಕ್ ಪಾಲಾಗುತ್ತಿರುವುದು ಸರಿಯಲ್ಲ. ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.</p>.<p>ರಾಷ್ಟ್ರೀಕೃತ ಬ್ಯಾಂಕ್ಗಳು ಗೌರವಯುತವಾಗಿ ಸಾಲ ವಸೂಲಿ ಮಾಡಬೇಕು. ಆನ್ಲೈನ್ ಹರಾಜು ಮೂಲಕ ರೈತರನ್ನು ವಂಚಿಸುವ ಕ್ರಮ ಮುಂದುವರಿದರೆ ರೈತ ಸಂಘ ಸಹಿಸುವುದಿಲ್ಲ ಎಂದು ಹೇಳಿದರು.</p>.<p>ಬಾಬು, ಮೊಹಮ್ಮದ್ ಸಾದಿಕ್, ವಿಠಲ, ಪುಟ್ಟರಾಜು, ಕಾಳಕ್ಕ, ಪವಿತ್ರಾ, ಕವಿತಾ ಸೇರಿದಂತೆ ಅನೇಕ ರೈತರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>