<p><strong>ಹಾಸನ</strong>: ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರು ನಡೆಸಿದ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕಾರವಾಗಿರುವ 1,069 ಅರ್ಜಿಗಳನ್ನು ವಿಲೇವಾರಿ ಮಾಡಿರುವ ಕುರಿತು ವರದಿ ನೀಡಬೇಕು. ಜೊತೆಗೆ ಈಗ ಸ್ವೀಕರಿಸಿರುವ 135 ಅರ್ಜಿಗಳ ವಿಲೇವಾರಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಜನಸ್ಪಂದನ ಸಭೆಯಲ್ಲಿ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಸಾರ್ವಜನಿಕರ ಸ್ವಂತ ಜಮೀನು ಒತ್ತುವರಿ ಆಗಿದ್ದಲ್ಲಿ ನ್ಯಾಯಾಲಯದ ನಿರ್ದೇಶನವಿದ್ದರೆ ಮಾತ್ರ ಬಿಡಿಸಲು ಅವಕಾಶ ಇರುತ್ತದೆ ಎಂದು ತಿಳಿಸಿದರು.</p>.<p>20 ವರ್ಷದಿಂದ ಪಡಿತರ ಚೀಟಿ ಹೊಂದಿದ್ದು, ಆದಾಯ ಹೆಚ್ಚಳವಾಗಿದೆ ಎಂದು ಕಂಪ್ಯೂಟರ್ನಲ್ಲಿ ತೋರಿಸುತ್ತಿರುವುದರಿಂದ 5 ವರ್ಷದಿಂದ ಪಡಿತರ ಚೀಟಿ ರದ್ದಾಗಿದೆ ಎಂಬ ಅಹವಾಲು ಸ್ವೀಕರಿಸಿದ ಅವರು, ಇದನ್ನು ಸರಿಪಡಿಸಲು ಆಹಾರ ಇಲಾಖೆ ಜಂಟಿ ನಿರ್ದೇಶಕರಿಗೆ ಸೂಚಿಸಿದರು.</p>.<p>ಅರಕಲಗೂಡು ತಾಲ್ಲೂಕಿನ ಮಾದಿಹಳ್ಳಿಯಲ್ಲಿ ಏತ ನೀರಾವರಿಗೆ ಭೂಸ್ವಾಧೀನವಾಗಿದ್ದು, ಪರಿಹಾರ ಕೋರಿ ಬಂದ ಮನವಿಗೆ ಸ್ಪಂದಿಸಿದ ಅವರು, ಖುದ್ದು ತಹಶೀಲ್ದಾರ್ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದರು.</p>.<p>ಆಕಾರ ಬಂದು ತಿದ್ದುಪಡಿ ಮಾಡಿರುವವರ ಮೇಲೆ ಎಫ್ಐಆರ್ ದಾಖಲಿಸುವಂತೆ ಸೂಚಿಸಿದ ಅವರು, ವಿದ್ಯುತ್ ಮಾರ್ಗ ಹಾದು ಹೋಗಿರುವ ಸ್ಥಳಕ್ಕೆ ಪರಿಹಾರ ನೀಡಲು ಒಂದು ಸಭೆ ನಡೆಸುವಂತೆ ಸೂಚಿಸಿದರು.</p>.<p>ಕಟ್ಟಾಯ ಗ್ರಾಮದಲ್ಲಿ ಸ್ಮಶಾನ ಜಾಗ ಒತ್ತುವರಿ ತೆರವುಗೊಳಿಸಲು, ವಸತಿ ಯೋಜನೆಯಡಿ ಮಂಜೂರಾದ ಮನೆಗೆ ಅಂತಿಮ ಬಿಲ್ ಹಣ ಪಾವತಿ ಮಾಡುವಂತೆ ಸೂಚಿಸಿದ ಅವರು, ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ಶೆಡ್ ಹಾಕಿರುವುದನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲು ನಿರ್ದೇಶನ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್.ಪೂರ್ಣಿಮಾ, ಹೆಚ್ಚುವರಿ ವರಿಷ್ಠಾಧಿಕಾರಿ ತಮ್ಮಯ್ಯ, ಉಪ ವಿಭಾಗಾಧಿಕಾರಿ ಜಗದೀಶ್ ಗಂಗಣ್ಣನವರ ಮತ್ತಿತರ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರು ನಡೆಸಿದ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕಾರವಾಗಿರುವ 1,069 ಅರ್ಜಿಗಳನ್ನು ವಿಲೇವಾರಿ ಮಾಡಿರುವ ಕುರಿತು ವರದಿ ನೀಡಬೇಕು. ಜೊತೆಗೆ ಈಗ ಸ್ವೀಕರಿಸಿರುವ 135 ಅರ್ಜಿಗಳ ವಿಲೇವಾರಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಜನಸ್ಪಂದನ ಸಭೆಯಲ್ಲಿ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಸಾರ್ವಜನಿಕರ ಸ್ವಂತ ಜಮೀನು ಒತ್ತುವರಿ ಆಗಿದ್ದಲ್ಲಿ ನ್ಯಾಯಾಲಯದ ನಿರ್ದೇಶನವಿದ್ದರೆ ಮಾತ್ರ ಬಿಡಿಸಲು ಅವಕಾಶ ಇರುತ್ತದೆ ಎಂದು ತಿಳಿಸಿದರು.</p>.<p>20 ವರ್ಷದಿಂದ ಪಡಿತರ ಚೀಟಿ ಹೊಂದಿದ್ದು, ಆದಾಯ ಹೆಚ್ಚಳವಾಗಿದೆ ಎಂದು ಕಂಪ್ಯೂಟರ್ನಲ್ಲಿ ತೋರಿಸುತ್ತಿರುವುದರಿಂದ 5 ವರ್ಷದಿಂದ ಪಡಿತರ ಚೀಟಿ ರದ್ದಾಗಿದೆ ಎಂಬ ಅಹವಾಲು ಸ್ವೀಕರಿಸಿದ ಅವರು, ಇದನ್ನು ಸರಿಪಡಿಸಲು ಆಹಾರ ಇಲಾಖೆ ಜಂಟಿ ನಿರ್ದೇಶಕರಿಗೆ ಸೂಚಿಸಿದರು.</p>.<p>ಅರಕಲಗೂಡು ತಾಲ್ಲೂಕಿನ ಮಾದಿಹಳ್ಳಿಯಲ್ಲಿ ಏತ ನೀರಾವರಿಗೆ ಭೂಸ್ವಾಧೀನವಾಗಿದ್ದು, ಪರಿಹಾರ ಕೋರಿ ಬಂದ ಮನವಿಗೆ ಸ್ಪಂದಿಸಿದ ಅವರು, ಖುದ್ದು ತಹಶೀಲ್ದಾರ್ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದರು.</p>.<p>ಆಕಾರ ಬಂದು ತಿದ್ದುಪಡಿ ಮಾಡಿರುವವರ ಮೇಲೆ ಎಫ್ಐಆರ್ ದಾಖಲಿಸುವಂತೆ ಸೂಚಿಸಿದ ಅವರು, ವಿದ್ಯುತ್ ಮಾರ್ಗ ಹಾದು ಹೋಗಿರುವ ಸ್ಥಳಕ್ಕೆ ಪರಿಹಾರ ನೀಡಲು ಒಂದು ಸಭೆ ನಡೆಸುವಂತೆ ಸೂಚಿಸಿದರು.</p>.<p>ಕಟ್ಟಾಯ ಗ್ರಾಮದಲ್ಲಿ ಸ್ಮಶಾನ ಜಾಗ ಒತ್ತುವರಿ ತೆರವುಗೊಳಿಸಲು, ವಸತಿ ಯೋಜನೆಯಡಿ ಮಂಜೂರಾದ ಮನೆಗೆ ಅಂತಿಮ ಬಿಲ್ ಹಣ ಪಾವತಿ ಮಾಡುವಂತೆ ಸೂಚಿಸಿದ ಅವರು, ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ಶೆಡ್ ಹಾಕಿರುವುದನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲು ನಿರ್ದೇಶನ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್.ಪೂರ್ಣಿಮಾ, ಹೆಚ್ಚುವರಿ ವರಿಷ್ಠಾಧಿಕಾರಿ ತಮ್ಮಯ್ಯ, ಉಪ ವಿಭಾಗಾಧಿಕಾರಿ ಜಗದೀಶ್ ಗಂಗಣ್ಣನವರ ಮತ್ತಿತರ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>