ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

40 ಹಾಸಿಗೆಗಳ ಕೋವಿಡ್‌ ಕೇರ್‌ ಕೇಂದ್ರ ಆರಂಭ

ಶೇ 50ರಷ್ಟು ಕೋವಿಡ್‌ ಸಾವು ತಡವಾಗಿ ದಾಖಲು ಕಾರಣ: ಡಿ.ಸಿ ಗಿರೀಶ್‌
Last Updated 11 ಮೇ 2021, 14:14 IST
ಅಕ್ಷರ ಗಾತ್ರ

ಹಾಸನ: ನ್ಯಾಷನಲ್ ಹ್ಯೂಮನ್ ರೈಟ್ಸ್ ವೆಲ್ಫೇರ್ ಸಂಸ್ಥೆ ವತಿಯಿಂದ ನಗರದ ಕೆ.ಆರ್. ಪುರಂ ಮುಸ್ಲಿಂ ಹಾಸ್ಟೆಲ್ ನಲ್ಲಿ 40 ಬೆಡ್ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್ (ಸಿಸಿಸಿ)ತೆರೆಯಲಾಗಿದೆ.

ಸೆಂಟರ್ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಆರ್.ಗಿರೀಶ್‌, ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಜಿಲ್ಲೆಯಲ್ಲಿ ಇದೇ ರೀತಿ ಹೆಚ್ಚು ಕೋವಿಡ್ ಕೇರ್ ಕೇಂದ್ರ ಸ್ಥಾಪನೆಯಾದರೆಸೋಂಕಿತರಿಗೆ ಚಿಕಿತ್ಸೆ ನೀಡಲು ಅನುಕೂಲವಾಗುತ್ತದೆ. ತಡವಾಗಿ ಆಸ್ಪತ್ರೆಗೆ ದಾಖಲು ಆಗುತ್ತಿರುವುದರಿಂದ ಶೇಕಡಾ 50 ರಷ್ಟು ಕೋವಿಡ್ ಸಾವು ಆಗುತ್ತಿದೆ. ರೋಗದ ಲಕ್ಷಣಗಳು ಕಂಡು ಬಂದರೆ ಪ್ರಾರ್ಥಮಿಕ ಹಂತದಲ್ಲೇ ಕೋವಿಡ್ ಕೇರ್ ಕೇಂದ್ರಗಳಿಗೆ ದಾಖಲಾಗಿ, ಚಿಕಿತ್ಸೆ ಪಡೆದರೆ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ ಎಂದು ತಿಳಿಸಿದರು.

ಸಾರ್ವಜನಿಕರು ರೋಗದ ಬಗ್ಗೆ ನಿರ್ಲಕ್ಷ್ಯ ತೋರಬಾರದು. ಸಂಘ-ಸಂಸ್ಥೆಗಳು ಧೈರ್ಯದಿಂದ ಮುಂದೆ ಬಂದು ಈ ರೀತಿ ಕೋವಿಡ್ ಕೇಂದ್ರ ಸ್ಥಾಪಿಸಬೇಕು ಎಂದು ವೆಲ್ಫೇರ್ ಸಂಸ್ಥೆಯಪ್ರಯತ್ನವನ್ನು ಶ್ಲಾಘಿಸಿದರು.

ಸಾಮಾಜಿಕ ಕಾರ್ಯಕರ್ತ ಪಾಷಾ ಮಾತನಾಡಿ, ಸಿಸಿಸಿ ಸ್ಥಾಪನೆಯಿಂದ ಜನರ ಪ್ರಾಣ ಉಳಿಸಬಹುದು. ಶೀಘ್ರದಲ್ಲೇ ಹಳೆ ಈದ್ಗಾ ಮೈದಾನದ ಬಳಿ 100 ಹಾಸಿಗೆ ಸಾಮರ್ಥ್ಯದ ಕೋವಿಡ್ ಕೇರ್ ಕೇಂದ್ರವನ್ನು ಸಮುದಾಯದ ವತಿಯಿಂದ ಪ್ರಾರಂಭಿಸಲಾಗುವುದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಕಾರ ನೀಡುತ್ತಿದೆ ಎಂದರು.

ನ್ಯಾಷನಲ್ ಹ್ಯೂಮನ್ ರೈಟ್ಸ್ ವೆಲ್ಫೇರ್ ಸಂಸ್ಥೆಯ ಕಾರ್ಯದರ್ಶಿ ಇಮ್ರಾನ್ ಖಾನ್, ಜಿಲ್ಲಾ ಕಾರ್ಯದರ್ಶಿ ರೆಹಮಾನ್ ಖಾನ್, ಉಪಾದ್ಯಕ್ಷ ಫರ್‍ಹಾನ್, ಭಾರತಿಯ ರೆಡ್ ಕ್ರಾ್ಸ್ ಸಂಸ್ಥೆಯ ಜಿಲ್ಲಾ ಶಾಖೆ ಅಧ್ಯಕ್ಷ ಎಚ್.ಪಿ. ಮೋಹನ್, ನಗರಸಭೆ ಅಧ್ಯಕ್ಷ ಮೋಹನ್ ಕುಮಾರ್, ಜಿಲ್ಲಾ ವಾರ್ತಾಧಿಕಾರಿ ವಿನೋದ್ ಚಂದ್ರ, ಜನಪ್ರಿಯ ಆಸ್ಪತ್ರೆಯ ಡಾ. ಬಷೀರ್, ಮುಸ್ಲಿಂ ಹಾಸ್ಟೆಲ್‍ ಕಾರ್ಯದರ್ಶಿ ಸುಫಿಯಾನ್ ಹುಸೇನ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT