ವಕೀಲರು ಜಿಲ್ಲಾಧಿಕಾರಿ ಕಚೇರಿ ಎದುರು ವಕೀಲರು ಪ್ರತಿಭಟನೆ ನಡೆಸಿದರು.
45 ನಿಮಿಷ ರಸ್ತೆ ತಡೆ: ಸಾರ್ವಜನಿಕರಿಂದ ಆಕ್ರೋಶ
ವಕೀಲರ ರಸ್ತೆ ತಡೆಯಿಂದಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಸಂಚಾರ ದಟ್ಟಣೆ ಉಂಟಾಗಿತ್ತು. ಪ್ರತಿಭಟನಾ ಸ್ಥಳಕ್ಕೆ ಬಂದ ಕೆಲ ಸಾರ್ವಜನಿಕರು ಪ್ರತಿಭಟನೆ ಮಾಡುತ್ತಿದ್ದ ವಕೀಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ರೀತಿ ರಸ್ತೆ ತಡೆ ಮಾಡುವುದರಿಂದ ಸಾರ್ವಜನಿಕರಿಗೆ ಅನಾನುಕೂಲ ಆಗುತ್ತದೆ ಜಿಲ್ಲಾಧಿಕಾರಿ ಕಚೇರಿಯ ಕಾಂಪೌಂಡ್ ಒಳಗೆ ಪ್ರತಿಭಟನೆ ಮಾಡುವಂತೆ ತಿಳಿಸಿದರು . ಈ ವೇಳೆ ವಕೀಲರು ಹಾಗೂ ಸಾರ್ವಜನಿಕರ ನಡುವೆ ಮಾತಿನ ಚಕಮಕಿ ನಡೆಯಿತು. ನಂತರ ಮಧ್ಯ ಪ್ರವೇಶಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು.