<p><strong>ಚನ್ನರಾಯಪಟ್ಟಣ:</strong> ತಾಲ್ಲೂಕಿನ ಗುಲಸಿಂದ ಬಳಿಯ ರಾಷ್ಟ್ರೀಯ ಹೆದ್ದಾರಿ 75 ಬೈಪಾಸ್ ರಸ್ತೆಯಲ್ಲಿ 5-6 ವರ್ಷದ ಗಂಡು ಚಿರತೆಯೊಂದು ಮಂಗಳವಾರ ಮೃತಪಟ್ಟಿದ್ದು, ಅಪಘಾತದಿಂದ ಸತ್ತಿರುವುದಾಗಿ ಅಧಿಕಾರಿಗಳು ಶಂಕಿಸಿದ್ದಾರೆ.</p>.<p>ಚಿರತೆ ಮೃತದೇಹ ಕಂಡ ಸ್ಥಳೀಯರು ಕೂಡಲೇ ಅರಣ್ಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಡಿಸಿಎಫ್ ಸೌರಭ್ ಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಲಂದರ್, ಎನ್ಸಿಎಫ್ ಕ್ಷೇತ್ರ ನಿರ್ದೇಶಕ ನಿಸಾರ್ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.</p>.<p>‘ರಸ್ತೆ ಪಕ್ಕದಲ್ಲಿ ಬಿದ್ದಿದ್ದ ಚಿರತೆಯ ದೇಹದ ಹೊರಭಾಗದಲ್ಲಿ ಗಾಯವಾಗಿರುವ ಕುರುಹುಗಳಿಲ್ಲ. ಒಳ ಭಾಗದಲ್ಲಿ ಪೆಟ್ಟು ಬಿದ್ದಿದೆ. ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಘಟನೆ ನಡೆದಿದೆ ಎನ್ನಲಾಗಿದೆ’ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.</p>.<p>ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿ ಬೆಲಸಿಂದ ಪ್ರಕೃತಿ ವನದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು. ಪ್ರಕರಣ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನರಾಯಪಟ್ಟಣ:</strong> ತಾಲ್ಲೂಕಿನ ಗುಲಸಿಂದ ಬಳಿಯ ರಾಷ್ಟ್ರೀಯ ಹೆದ್ದಾರಿ 75 ಬೈಪಾಸ್ ರಸ್ತೆಯಲ್ಲಿ 5-6 ವರ್ಷದ ಗಂಡು ಚಿರತೆಯೊಂದು ಮಂಗಳವಾರ ಮೃತಪಟ್ಟಿದ್ದು, ಅಪಘಾತದಿಂದ ಸತ್ತಿರುವುದಾಗಿ ಅಧಿಕಾರಿಗಳು ಶಂಕಿಸಿದ್ದಾರೆ.</p>.<p>ಚಿರತೆ ಮೃತದೇಹ ಕಂಡ ಸ್ಥಳೀಯರು ಕೂಡಲೇ ಅರಣ್ಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಡಿಸಿಎಫ್ ಸೌರಭ್ ಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಲಂದರ್, ಎನ್ಸಿಎಫ್ ಕ್ಷೇತ್ರ ನಿರ್ದೇಶಕ ನಿಸಾರ್ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.</p>.<p>‘ರಸ್ತೆ ಪಕ್ಕದಲ್ಲಿ ಬಿದ್ದಿದ್ದ ಚಿರತೆಯ ದೇಹದ ಹೊರಭಾಗದಲ್ಲಿ ಗಾಯವಾಗಿರುವ ಕುರುಹುಗಳಿಲ್ಲ. ಒಳ ಭಾಗದಲ್ಲಿ ಪೆಟ್ಟು ಬಿದ್ದಿದೆ. ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಘಟನೆ ನಡೆದಿದೆ ಎನ್ನಲಾಗಿದೆ’ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.</p>.<p>ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿ ಬೆಲಸಿಂದ ಪ್ರಕೃತಿ ವನದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು. ಪ್ರಕರಣ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>