ಅರಕಲಗೂಡು: ತಾಲ್ಲೂಕಿನ ಕಣಿಯಾರು ಗ್ರಾಮದಲ್ಲಿ ಬುಧವಾರ ಸಂಜೆ ಚಿರತೆ ದಾಳಿಗೆ ಮೇಕೆ ಬಲಿಯಾಗಿದೆ.
ಗ್ರಾಮದ ಪುಟ್ಟಶೆಟ್ಟಿ ಎಂಬುವವರು ಜಮೀನಿನ ಬಳಿ ಮೇಯಲು ಬಿಟ್ಟಿದ್ದ ಮೇಕೆಯ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿದೆ. ವಲಯ ಅರಣ್ಯಾಧಿಕಾರಿ ಕಾವ್ಯಶ್ರೀ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಚಿರತೆ ಹಿಡಿಯಲು ಎರಡು ಸ್ಥಳದಲ್ಲಿ ಬೋನನ್ನು ಇರಿಸಿ ಕ್ರಮ ಕೈಗೊಂಡಿರುವುದಾಗಿ ತಿಳಿಸಿದರು.