3–4 ವರ್ಷಗಳಿಂದ ಕಾಡಾನೆ ಉಪಟಳ ಈ ಭಾಗದಲ್ಲಿ ಹೆಚ್ಚಿದ್ದು, ಜನರು ತಮ್ಮ ಕುಟುಂಬ ಸದಸ್ಯರನ್ನು ಕಳೆದುಕೊಂಡಿದ್ದಾರೆ. ಇನ್ನೂ ಕೆಲವರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳನ್ನು ಹಿಂಪಡೆಯದೇ ನಷ್ಟ ಹೊಂದಿದ್ದು, ತಮ್ಮ ಜಮೀನನ್ನು ಪಾಳು ಬಿಟ್ಟಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕಾಡಾನೆ ಉಪಟಳದ ಜೊತೆಗೆ ತಾಲ್ಲೂಕಿನ ಕೆಲವು ಭಾಗಗಳಲ್ಲಿ ಚಿರತೆಗಳು ಕಾಣಿಸಿಕೊಳ್ಳುತ್ತಿದ್ದು, ಜನಸಾಮಾನ್ಯರ ನಿದ್ದೆಗಡಿಸಿದೆ.