<p><strong>ಹಾಸನ</strong>: ರಾಜ್ಯದಲ್ಲಿ ಅತೀ ಕಡಿಮೆ ಕುಷ್ಠರೋಗ ಹೊಂದಿರುವ ಜಿಲ್ಲೆಗಳಲ್ಲಿ ಹಾಸನವೂ ಒಂದಾಗಿದೆ ಎಂದು ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಆರ್. ಪೂರ್ಣಿಮಾ ತಿಳಿಸಿದರು.</p>.<p>ಜಿಲ್ಲೆಯಾದ್ಯಂತ ನ.24 ರಿಂದ ಡಿ.9 ರವರೆಗೆ ಆಯ್ದ ಪ್ರದೇಶಗಳಲ್ಲಿ ಹಮ್ಮಿಕೊಂಡಿರುವ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ 2025-26 ಆಂದೋಲನದ ಆರೋಗ್ಯ ಶಿಕ್ಷಣ ಮತ್ತು ಸಂವಹನದ (ಐಇಸಿ) ಪರಿಕರಗಳನ್ನು ಶುಕ್ರವಾರ ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬಿಡುಗಡೆ ಮಾಡಿ ಅವರು ಮಾತನಾಡಿದರು.</p>.<p>ಜಿಲ್ಲೆಯಲ್ಲಿ ಅತೀ ಕಡಿಮೆ ಕುಷ್ಠರೋಗ ಪ್ರಕರಣಗಳಿದ್ದು, 2025-26ನೇ ಸಾಲಿನಲ್ಲಿ ಕೇವಲ 6 ಪ್ರಕರಣ ಪತ್ತೆಯಾಗಿವೆ. ಮುಂದಿನ ದಿನಗಳಲ್ಲಿ ಹಾಸನ ಜಿಲ್ಲೆಯನ್ನು ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದರು.</p>.<p>ಕುಷ್ಠರೋಗವನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚುವುದರಿಂದ ರೋಗದಿಂದಾಗುವ ಅಂಗವೈಕಲ್ಯಗಳನ್ನು ಸಂಪೂರ್ಣವಾಗಿ ತಡೆಗಟ್ಟಬಹುದು. ಬೇರೆಯವರಿಗೆ ಹರಡುವುದನ್ನೂ ತಡೆಗಟ್ಟಬಹುದಾಗಿದೆ ಎಂದರು.</p>.<p>ಈ ಆಂದೋಲನದಲ್ಲಿ ಆಶಾ ಕಾರ್ಯಕರ್ತೆಯರು ಮತ್ತು ಪುರುಷ ಸ್ವಯಂಸೇವಕರು, ತಾಲ್ಲೂಕು ಮೇಲ್ವಿಚಾರಕರು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳು, ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಬರುವ ಮೇಲ್ವಿಚಾರಕರು ಮತ್ತು ವೈದ್ಯಾಧಿಕಾರಿಗಳು ಭಾಗವಹಿಸುವರು. ಅವಶ್ಯವಿರುವ ಪಟ್ಟಣ ಪ್ರದೇಶಗಳ ವ್ಯಾಪ್ತಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳನ್ನೂ ಬಳಸಿಕೊಳ್ಳಲಾಗುತ್ತಿದೆ. ಈ ದಿನಗಳಲ್ಲಿ ಮನೆಗಳಿಗೆ ಭೇಟಿ ನೀಡುವ ಇಲಾಖೆ ಸಿಬ್ಬಂದಿಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಜನರಿಗೆ ಮನವಿ ಮಾಡಿದರು.</p>.<p>ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಶಿವಶಂಕರ್ ಕೆ.ಬಿ., ಆರೋಗ್ಯ ನಿರೀಕ್ಷಕ ಅಪ್ಪಾಜಿಗೌಡ, ಜಿಲ್ಲಾ ಕಾರ್ಯಕ್ರಮ ಸಹಾಯಕ ವೆಂಕಟೇಶ್ ಬಿ.ಎಸ್. ಉಪಸ್ಥಿತರಿದ್ದರು.</p>.<p>ಜಿಲ್ಲೆಯಲ್ಲಿ ಕೇವಲ 3 ಪ್ರಕರಣ ಪತ್ತೆ ಈ ವರ್ಷ ಪತ್ತೆಯಾದ 6 ಕುಷ್ಠರೋಗ ಪ್ರಕರಣಗಳಲ್ಲಿ 3 ಪ್ರಕರಣಗಳು ಹೊರ ರಾಜ್ಯದ್ದಾಗಿದ್ದು ಉಳಿದ 3 ಪ್ರಕರಣಗಳು ಮಾತ್ರ ಜಿಲ್ಲೆಯದ್ದು ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ನಾಗೇಶ್ ಆರಾಧ್ಯ ಹೇಳಿದರು. 5 ವರ್ಷಗಳಲ್ಲಿ ಕುಷ್ಠರೋಗ ಪತ್ತೆಯಾಗಿದ್ದ ಊರುಗಳಲ್ಲಿ ಸಮೀಕ್ಷಾ ತಂಡವು ಮನೆ-ಮನೆಗೆ ಭೇಟಿ ನೀಡಿ ಕುಷ್ಠರೋಗದ ಚಿನ್ಹೆ ಇರುವ ವ್ಯಕ್ತಿಗಳನ್ನು ಗುರುತಿಸಿ ಸಂಭಾವ್ಯ ಕುಷ್ಠರೋಗಿಗಳನ್ನು ಪರೀಕ್ಷೆಗೆ ಒಳಪಡಿಸಲಾಗುವುದು. ಕುಷ್ಠರೋಗ ಕಂಡು ಬಂದಲ್ಲಿ ಅಂತಹ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುವುದು ಆಂದೋಲನದ ಉದ್ದೇಶ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ರಾಜ್ಯದಲ್ಲಿ ಅತೀ ಕಡಿಮೆ ಕುಷ್ಠರೋಗ ಹೊಂದಿರುವ ಜಿಲ್ಲೆಗಳಲ್ಲಿ ಹಾಸನವೂ ಒಂದಾಗಿದೆ ಎಂದು ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಆರ್. ಪೂರ್ಣಿಮಾ ತಿಳಿಸಿದರು.</p>.<p>ಜಿಲ್ಲೆಯಾದ್ಯಂತ ನ.24 ರಿಂದ ಡಿ.9 ರವರೆಗೆ ಆಯ್ದ ಪ್ರದೇಶಗಳಲ್ಲಿ ಹಮ್ಮಿಕೊಂಡಿರುವ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ 2025-26 ಆಂದೋಲನದ ಆರೋಗ್ಯ ಶಿಕ್ಷಣ ಮತ್ತು ಸಂವಹನದ (ಐಇಸಿ) ಪರಿಕರಗಳನ್ನು ಶುಕ್ರವಾರ ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬಿಡುಗಡೆ ಮಾಡಿ ಅವರು ಮಾತನಾಡಿದರು.</p>.<p>ಜಿಲ್ಲೆಯಲ್ಲಿ ಅತೀ ಕಡಿಮೆ ಕುಷ್ಠರೋಗ ಪ್ರಕರಣಗಳಿದ್ದು, 2025-26ನೇ ಸಾಲಿನಲ್ಲಿ ಕೇವಲ 6 ಪ್ರಕರಣ ಪತ್ತೆಯಾಗಿವೆ. ಮುಂದಿನ ದಿನಗಳಲ್ಲಿ ಹಾಸನ ಜಿಲ್ಲೆಯನ್ನು ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದರು.</p>.<p>ಕುಷ್ಠರೋಗವನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚುವುದರಿಂದ ರೋಗದಿಂದಾಗುವ ಅಂಗವೈಕಲ್ಯಗಳನ್ನು ಸಂಪೂರ್ಣವಾಗಿ ತಡೆಗಟ್ಟಬಹುದು. ಬೇರೆಯವರಿಗೆ ಹರಡುವುದನ್ನೂ ತಡೆಗಟ್ಟಬಹುದಾಗಿದೆ ಎಂದರು.</p>.<p>ಈ ಆಂದೋಲನದಲ್ಲಿ ಆಶಾ ಕಾರ್ಯಕರ್ತೆಯರು ಮತ್ತು ಪುರುಷ ಸ್ವಯಂಸೇವಕರು, ತಾಲ್ಲೂಕು ಮೇಲ್ವಿಚಾರಕರು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳು, ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಬರುವ ಮೇಲ್ವಿಚಾರಕರು ಮತ್ತು ವೈದ್ಯಾಧಿಕಾರಿಗಳು ಭಾಗವಹಿಸುವರು. ಅವಶ್ಯವಿರುವ ಪಟ್ಟಣ ಪ್ರದೇಶಗಳ ವ್ಯಾಪ್ತಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳನ್ನೂ ಬಳಸಿಕೊಳ್ಳಲಾಗುತ್ತಿದೆ. ಈ ದಿನಗಳಲ್ಲಿ ಮನೆಗಳಿಗೆ ಭೇಟಿ ನೀಡುವ ಇಲಾಖೆ ಸಿಬ್ಬಂದಿಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಜನರಿಗೆ ಮನವಿ ಮಾಡಿದರು.</p>.<p>ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಶಿವಶಂಕರ್ ಕೆ.ಬಿ., ಆರೋಗ್ಯ ನಿರೀಕ್ಷಕ ಅಪ್ಪಾಜಿಗೌಡ, ಜಿಲ್ಲಾ ಕಾರ್ಯಕ್ರಮ ಸಹಾಯಕ ವೆಂಕಟೇಶ್ ಬಿ.ಎಸ್. ಉಪಸ್ಥಿತರಿದ್ದರು.</p>.<p>ಜಿಲ್ಲೆಯಲ್ಲಿ ಕೇವಲ 3 ಪ್ರಕರಣ ಪತ್ತೆ ಈ ವರ್ಷ ಪತ್ತೆಯಾದ 6 ಕುಷ್ಠರೋಗ ಪ್ರಕರಣಗಳಲ್ಲಿ 3 ಪ್ರಕರಣಗಳು ಹೊರ ರಾಜ್ಯದ್ದಾಗಿದ್ದು ಉಳಿದ 3 ಪ್ರಕರಣಗಳು ಮಾತ್ರ ಜಿಲ್ಲೆಯದ್ದು ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ನಾಗೇಶ್ ಆರಾಧ್ಯ ಹೇಳಿದರು. 5 ವರ್ಷಗಳಲ್ಲಿ ಕುಷ್ಠರೋಗ ಪತ್ತೆಯಾಗಿದ್ದ ಊರುಗಳಲ್ಲಿ ಸಮೀಕ್ಷಾ ತಂಡವು ಮನೆ-ಮನೆಗೆ ಭೇಟಿ ನೀಡಿ ಕುಷ್ಠರೋಗದ ಚಿನ್ಹೆ ಇರುವ ವ್ಯಕ್ತಿಗಳನ್ನು ಗುರುತಿಸಿ ಸಂಭಾವ್ಯ ಕುಷ್ಠರೋಗಿಗಳನ್ನು ಪರೀಕ್ಷೆಗೆ ಒಳಪಡಿಸಲಾಗುವುದು. ಕುಷ್ಠರೋಗ ಕಂಡು ಬಂದಲ್ಲಿ ಅಂತಹ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುವುದು ಆಂದೋಲನದ ಉದ್ದೇಶ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>