<p><strong>ಹಾಸನ</strong>: ‘ಸಿದ್ದರಾಮಯ್ಯ ಅವರೇ ಐದು ವರ್ಷಗಳವರೆಗೆ ಮುಖ್ಯಮಂತ್ರಿ ಅಗಿರುತ್ತಾರೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಲಿ. ಇಲ್ಲವೇ ದೆಹಲಿಯಲ್ಲಿ ಡಿ.ಕೆ. ಶಿವಕುಮಾರ್ ಅವರೇ ಪತ್ರಿಕಾಗೋಷ್ಠಿ ನಡೆಸಿ ತಿಳಿಸಲಿ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸವಾಲು ಹಾಕಿದರು.</p>.<p>ಜಿಲ್ಲೆಯ ಆಲೂರು ತಾಲ್ಲೂಕಿನ ಧರ್ಮಪುರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ನವರು ಸ್ಪಷ್ಟಪಡಿಸಿಬಿಟ್ಟರೆ, ಅಶೋಕ್ನದ್ದು ಗಿಳಿಶಾಸ್ತ್ರನೂ ಇಲ್ಲ, ಕವಡೆ ಶಾಸ್ತ್ರನೂ ಇಲ್ಲ, ಎಲೆಶಾಸ್ತ್ರನೂ ಇಲ್ಲ ಎಂದುಕೊಂಡು ಬಿಟ್ಟು ಬಿಡುತ್ತೇನೆ’ ಎಂದರು.</p>.<p>‘ನಾನು ಹೇಳಿದ್ದು ನಿಜ ಆಗುತ್ತಿದೆ. ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ’ ಎಂದರು.</p>.<p>‘ಸಿದ್ದರಾಮಯ್ಯ ಅವರನ್ನು ದೆಹಲಿಗೆ ಎತ್ತಂಗಡಿ ಮಾಡಲು ಯೋಜನೆ ಸಿದ್ಧವಾಗಿದೆ. ಅವರು ಇಲ್ಲಿಯೇ ಇದ್ದರೆ ಕಿರುಕುಳ ನೀಡುತ್ತಾರೆ. ಸುಮ್ಮನೆ ಮನೆಯಲ್ಲಿ ಕೂರಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ, ಅವರೇ ಎಲ್ಲರನ್ನೂ ಬಿಜೆಪಿ ಹೋಗಿ ಎಂದು ಕಳುಹಿಸಿ, ವಿರೋಧ ಪಕ್ಷದ ನಾಯಕನಾಗಿ ಆರಾಮಾಗಿದ್ದರು’ ಎಂದು ಟೀಕಿಸಿದರು.</p>.<p>‘ಹಾಸನದಲ್ಲಿ ಹೃದಯಾಘಾತದಿಂದ ಜನ ಸಾಯುತ್ತಿದ್ದಾರೆ. ಮೆಕ್ಕೆಜೋಳಕ್ಕೆ ರೋಗ ಬಂದು ರೈತರು ತತ್ತರಿಸಿದ್ದಾರೆ. ಆದರೆ, ಸರ್ಕಾರ ಎಚ್ಚರ ತಪ್ಪಿದ್ದು, ಕೋಮಾ ಸ್ಥಿತಿಯಲ್ಲಿದೆ’ ಎಂದು ದೂರಿದರು.</p>.<p>‘ಅಧಿಕಾರ ಹಸ್ತಾಂತರ, ಮುಂದೆ ಯಾರು ಮುಖ್ಯಮಂತ್ರಿ ಆಗಬೇಕು, ಎಟಿಎಂ ತೆಗೆದುಕೊಂಡು ದೆಹಲಿಗೆ ಯಾರ್ಯಾರಿಗೆ ಎಷ್ಟೆಷ್ಟು ಕೊಡಬೇಕು, ಇದೇ ಮಂತ್ರಿಗಳನ್ನು ಇಡುತ್ತಾರಾ, ಬೇರೆಯವರಿಗೆ ಕೊಡುತ್ತಾರಾ, ಸಚಿವ ಸ್ಥಾನದ ಬೆಲೆ ಎಷ್ಟು? ಎಂಬುದರಲ್ಲೇ ಇಡೀ ಸರ್ಕಾರ ಮುಳುಗಿದೆ. ಜನರು ಕಂಗಾಲಾಗಿದ್ದಾರೆ’ ಎಂದು ಆಪಾದಿಸಿದರು.</p>.<p>‘ಯಾರಾದರೂ ಮುಖ್ಯಮಂತ್ರಿ ಆಗಲಿ, ನಾವಂತೂ ಈ ಸರ್ಕಾರ ಬೀಳಿಸಲು ಹೋಗುವುದಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ‘ಸಿದ್ದರಾಮಯ್ಯ ಅವರೇ ಐದು ವರ್ಷಗಳವರೆಗೆ ಮುಖ್ಯಮಂತ್ರಿ ಅಗಿರುತ್ತಾರೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಲಿ. ಇಲ್ಲವೇ ದೆಹಲಿಯಲ್ಲಿ ಡಿ.ಕೆ. ಶಿವಕುಮಾರ್ ಅವರೇ ಪತ್ರಿಕಾಗೋಷ್ಠಿ ನಡೆಸಿ ತಿಳಿಸಲಿ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸವಾಲು ಹಾಕಿದರು.</p>.<p>ಜಿಲ್ಲೆಯ ಆಲೂರು ತಾಲ್ಲೂಕಿನ ಧರ್ಮಪುರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ನವರು ಸ್ಪಷ್ಟಪಡಿಸಿಬಿಟ್ಟರೆ, ಅಶೋಕ್ನದ್ದು ಗಿಳಿಶಾಸ್ತ್ರನೂ ಇಲ್ಲ, ಕವಡೆ ಶಾಸ್ತ್ರನೂ ಇಲ್ಲ, ಎಲೆಶಾಸ್ತ್ರನೂ ಇಲ್ಲ ಎಂದುಕೊಂಡು ಬಿಟ್ಟು ಬಿಡುತ್ತೇನೆ’ ಎಂದರು.</p>.<p>‘ನಾನು ಹೇಳಿದ್ದು ನಿಜ ಆಗುತ್ತಿದೆ. ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ’ ಎಂದರು.</p>.<p>‘ಸಿದ್ದರಾಮಯ್ಯ ಅವರನ್ನು ದೆಹಲಿಗೆ ಎತ್ತಂಗಡಿ ಮಾಡಲು ಯೋಜನೆ ಸಿದ್ಧವಾಗಿದೆ. ಅವರು ಇಲ್ಲಿಯೇ ಇದ್ದರೆ ಕಿರುಕುಳ ನೀಡುತ್ತಾರೆ. ಸುಮ್ಮನೆ ಮನೆಯಲ್ಲಿ ಕೂರಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ, ಅವರೇ ಎಲ್ಲರನ್ನೂ ಬಿಜೆಪಿ ಹೋಗಿ ಎಂದು ಕಳುಹಿಸಿ, ವಿರೋಧ ಪಕ್ಷದ ನಾಯಕನಾಗಿ ಆರಾಮಾಗಿದ್ದರು’ ಎಂದು ಟೀಕಿಸಿದರು.</p>.<p>‘ಹಾಸನದಲ್ಲಿ ಹೃದಯಾಘಾತದಿಂದ ಜನ ಸಾಯುತ್ತಿದ್ದಾರೆ. ಮೆಕ್ಕೆಜೋಳಕ್ಕೆ ರೋಗ ಬಂದು ರೈತರು ತತ್ತರಿಸಿದ್ದಾರೆ. ಆದರೆ, ಸರ್ಕಾರ ಎಚ್ಚರ ತಪ್ಪಿದ್ದು, ಕೋಮಾ ಸ್ಥಿತಿಯಲ್ಲಿದೆ’ ಎಂದು ದೂರಿದರು.</p>.<p>‘ಅಧಿಕಾರ ಹಸ್ತಾಂತರ, ಮುಂದೆ ಯಾರು ಮುಖ್ಯಮಂತ್ರಿ ಆಗಬೇಕು, ಎಟಿಎಂ ತೆಗೆದುಕೊಂಡು ದೆಹಲಿಗೆ ಯಾರ್ಯಾರಿಗೆ ಎಷ್ಟೆಷ್ಟು ಕೊಡಬೇಕು, ಇದೇ ಮಂತ್ರಿಗಳನ್ನು ಇಡುತ್ತಾರಾ, ಬೇರೆಯವರಿಗೆ ಕೊಡುತ್ತಾರಾ, ಸಚಿವ ಸ್ಥಾನದ ಬೆಲೆ ಎಷ್ಟು? ಎಂಬುದರಲ್ಲೇ ಇಡೀ ಸರ್ಕಾರ ಮುಳುಗಿದೆ. ಜನರು ಕಂಗಾಲಾಗಿದ್ದಾರೆ’ ಎಂದು ಆಪಾದಿಸಿದರು.</p>.<p>‘ಯಾರಾದರೂ ಮುಖ್ಯಮಂತ್ರಿ ಆಗಲಿ, ನಾವಂತೂ ಈ ಸರ್ಕಾರ ಬೀಳಿಸಲು ಹೋಗುವುದಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>