<p><strong>ಚನ್ನರಾಯಪಟ್ಟಣ:</strong> ಕನ್ನಡ ನಾಡು, ನುಡಿ ಮೇಲೆ ಸದಾ ಅಭಿಮಾನ ಇರಬೇಕು ಎಂದು ಟೈಮ್ಸ್ ಪಿಯು ಕಾಲೇಜು ಉಪನ್ಯಾಸಕ ಎಚ್.ಎಂ. ಶ್ರೀಕಂಠ ಹೇಳಿದರು.</p>.<p>ಪಟ್ಟಣದ ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಏರ್ಪಡಿಸಿದ್ದ ಕನ್ನಡದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕನ್ನಡ ಪ್ರಾಚೀನ ಭಾಷೆ. ಕನ್ನಡ ನಮ್ಮ ಉಸಿರಾಗಬೇಕು. ನಮ್ಮಭಾವನೆಯನ್ನು ಸಮರ್ಪಕ ರೀತಿಯಲ್ಲಿ ವ್ಯಕ್ತಪಡಿಸಲು ಮಾತೃಭಾಷೆಯಿಂದ ಸಾಧ್ಯ’ ಎಂದರು.</p>.<p>ಕಾಲೇಜು ಪ್ರಾಂಶುಪಾಲ ಎಂ.ಕೆ. ಮಂಜುನಾಥ ಮಾತನಾಡಿ, ಕನ್ನಡ ಹೃದಯದ ಭಾಷೆಯಾಗಬೇಕು ಎಂದರು.</p>.<p>ಸಹಾಯಕ ಪ್ರಾಧ್ಯಾಪಕ ಆರ್.ಕೆ.ಶಿವಪ್ಪ ಮಾತನಾಡಿ, ಕರ್ನಾಟಕ ಏಕೀಕರಣಕ್ಕಾಗಿ ಆಲೂರು ವೆಂಕಟರಾವ್, ಡೆಪ್ಯುಟಿ ಚನ್ನಬಸಪ್ಪ, ಗುದ್ಲೆಪ್ಪ ಹಳ್ಳಿಕೇರಿ ಸೇರಿ ಅನೇಕ ಮಹನೀಯರು ಹೋರಾಟ ಮಾಡಿದ್ದಾರೆ ಎಂದು ಹೇಳಿದರು.</p>.<p>ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ರಂಗೋಲಿ ಸ್ಪರ್ಧೆಯಲ್ಲಿ ಕೀರ್ತನಾ, ಗಗನಾ (ಪ್ರಥಮ), ಚಂದನಶ್ರೀ, ಪವಿತ್ರಾ (ದ್ವಿತೀಯ), ಮಾನ್ಯಾ, ಸುಷ್ಮಾ (ತೃತೀಯ) ಬಹುಮಾನ ಪಡೆದರು. ಸಹಾಯಕ ಪ್ರಾಧ್ಯಾಪಕ ಅಜೇಯ್ ಸೇರಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.</p>.<p>ಸಹಾಯಕ ಪ್ರಾಧ್ಯಾಪಕರಾದ ಎನ್.ಟಿ. ನಾಗರಾಜ, ಬಿ.ಎನ್. ಚಂದ್ರಶೇಖರ್, ಕಲಾವತಿ ಇದ್ದರು. <br /> ವಿದ್ಯಾರ್ಥಿಗಳು ಕನ್ನಡದ ಬಾವುಟ, ಭುವನೇಶ್ವರಿ ತಾಯಿ ಮತ್ತು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರ ಹಿಡಿದು ಮೆರವಣಿಗೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನರಾಯಪಟ್ಟಣ:</strong> ಕನ್ನಡ ನಾಡು, ನುಡಿ ಮೇಲೆ ಸದಾ ಅಭಿಮಾನ ಇರಬೇಕು ಎಂದು ಟೈಮ್ಸ್ ಪಿಯು ಕಾಲೇಜು ಉಪನ್ಯಾಸಕ ಎಚ್.ಎಂ. ಶ್ರೀಕಂಠ ಹೇಳಿದರು.</p>.<p>ಪಟ್ಟಣದ ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಏರ್ಪಡಿಸಿದ್ದ ಕನ್ನಡದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕನ್ನಡ ಪ್ರಾಚೀನ ಭಾಷೆ. ಕನ್ನಡ ನಮ್ಮ ಉಸಿರಾಗಬೇಕು. ನಮ್ಮಭಾವನೆಯನ್ನು ಸಮರ್ಪಕ ರೀತಿಯಲ್ಲಿ ವ್ಯಕ್ತಪಡಿಸಲು ಮಾತೃಭಾಷೆಯಿಂದ ಸಾಧ್ಯ’ ಎಂದರು.</p>.<p>ಕಾಲೇಜು ಪ್ರಾಂಶುಪಾಲ ಎಂ.ಕೆ. ಮಂಜುನಾಥ ಮಾತನಾಡಿ, ಕನ್ನಡ ಹೃದಯದ ಭಾಷೆಯಾಗಬೇಕು ಎಂದರು.</p>.<p>ಸಹಾಯಕ ಪ್ರಾಧ್ಯಾಪಕ ಆರ್.ಕೆ.ಶಿವಪ್ಪ ಮಾತನಾಡಿ, ಕರ್ನಾಟಕ ಏಕೀಕರಣಕ್ಕಾಗಿ ಆಲೂರು ವೆಂಕಟರಾವ್, ಡೆಪ್ಯುಟಿ ಚನ್ನಬಸಪ್ಪ, ಗುದ್ಲೆಪ್ಪ ಹಳ್ಳಿಕೇರಿ ಸೇರಿ ಅನೇಕ ಮಹನೀಯರು ಹೋರಾಟ ಮಾಡಿದ್ದಾರೆ ಎಂದು ಹೇಳಿದರು.</p>.<p>ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ರಂಗೋಲಿ ಸ್ಪರ್ಧೆಯಲ್ಲಿ ಕೀರ್ತನಾ, ಗಗನಾ (ಪ್ರಥಮ), ಚಂದನಶ್ರೀ, ಪವಿತ್ರಾ (ದ್ವಿತೀಯ), ಮಾನ್ಯಾ, ಸುಷ್ಮಾ (ತೃತೀಯ) ಬಹುಮಾನ ಪಡೆದರು. ಸಹಾಯಕ ಪ್ರಾಧ್ಯಾಪಕ ಅಜೇಯ್ ಸೇರಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.</p>.<p>ಸಹಾಯಕ ಪ್ರಾಧ್ಯಾಪಕರಾದ ಎನ್.ಟಿ. ನಾಗರಾಜ, ಬಿ.ಎನ್. ಚಂದ್ರಶೇಖರ್, ಕಲಾವತಿ ಇದ್ದರು. <br /> ವಿದ್ಯಾರ್ಥಿಗಳು ಕನ್ನಡದ ಬಾವುಟ, ಭುವನೇಶ್ವರಿ ತಾಯಿ ಮತ್ತು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರ ಹಿಡಿದು ಮೆರವಣಿಗೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>