ಕಟ್ಟಿನಕೆರೆ ಮಾರುಕಟ್ಟೆ, ಹೂವು, ತರಕಾರಿ ಮಾರುಕಟ್ಟೆ, ಕಸ್ತೂರಬಾ ರಸ್ತೆ, ಮಹಾವೀರ್ ವೃತ್ತ, ಎನ್.ಆರ್. ವೃತ್ತ ಬದಿಯಲ್ಲಿ ಜನಜಾತ್ರೆಯೇ ನೆರೆದಿತ್ತು. ಕಸ್ತೂರ ಬಾ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡಿದರು. ಎಲ್ಲೆಂದರಲ್ಲಿ ದ್ವಿಚಕ್ರ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ನಿಲ್ಲಿಸಿದ್ದರು.