<p> <strong>ಬೇಲೂರು</strong>: ಪುಸ್ತಕದ ಅಂಗಡಿಗಳಿಗಿಂತ ಮಧ್ಯದ ಅಂಗಡಿಗಳು ಹೆಚ್ಚಾಗುತ್ತಿರುವುದು ವಿಷಾದದ ಸಂಗತಿಯಾಗಿದೆ ಎಂದು ಲೇಖಕಿ ಶೈಲಜಾ ಹಾಸನ ಹೇಳಿದರು.</p>.<p>ಇಲ್ಲಿನ ಸರ್ಕಾರಿ ನೌಕರರ ಭವನದಲ್ಲಿ ಈಚೆಗೆ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ವತಿಯಿಂದ ಆಯೋಜಿಸಲಾಗಿದ್ದ, ಕವನ ಸಂಕಲನ ಬಿಡುಗಡೆಗೊಳಿಸಿ ಅವರು ಮಾತನಾಡಿದರು.</p>.<p>ಇಂದಿನ ಮಕ್ಕಳು ಕಂಪ್ಯೂಟರ್, ಮೊಬೈಲ್ಗಳ ಜೊತೆ ಹೆಚ್ಚಿನ ಸಮಯ ಕಳೆಯುತ್ತಿದ್ದು, ಪುಸ್ತಕ ಓದುವ ಹವ್ಯಾಸ ಕಡಿಮೆ ಇರುತ್ತದೆ. ಪೋಷಕರು ಮಕ್ಕಳಿಗೆ ಓದಲು ಪ್ರೇರೆಪಿಸಬೇಕು. ಪೋಷಕರೂ ಓದುವ ಅಭ್ಯಾಸ ಬೆಳೆಸಿಕೊಳ್ಳಲು ಮುಂದಾಗಬೇಕು ಎಂದರು.<br> ಸಾಹಿತಿ ಅವರೇಕಾಡು ವಿಜಯಕುಮಾರ್ ಮಾತನಾಡಿ, ಬರವಣಿಗೆ ಸುಲಭದ ಮಾತಲ್ಲ ಕಾವ್ಯಕ್ಕೆ ತನ್ನದೇ ಅದ ಶಕ್ತಿ ಮತ್ತು ಸ್ವಂತಿಕೆ ಇದೆ ಎಂದರು.</p>.<p>ಮಧುಮಾಲತಿ ರುದ್ರೇಶ್ ಅವರ ‘ಸ್ವಾತಿ ಹನಿ ಪ್ರೀತಿಮುತ್ತಾದಂತೆ’ ಹಾಗೂ ಶಶಿ ಎಂ.ಟಿ.ಮಂಡಲಮನೆ ಅವರ ‘ಬೆಳ್ಳಿ ಬೆಳಕು’ ಕವನ ಸಂಕಲನವನ್ನು ಬಿಡುಗಡೆಗೊಳಿಸಲಾಯಿತು.</p>.<p><br> ಶಿಕ್ಷಕ ಟಿ.ಡಿ.ತಮ್ಮಣ್ಣಗೌಡ, ಸಂಶೋಧಕ ಶಿವತ್ಸ ಎಸ್. ವಟಿ, ಲೇಖಕಿ ಇಂದಿರಮ್ಮ, ಪ್ರಾಂಶುಪಾಲ ಎಸ್.ಗಣೇಶ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಆರ್.ಮಂಜುನಾಥ್, ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ಪದಾಧಿಕಾರಿಗಳಾದ ಬಿ.ಎಲ್.ರಾಜೇಗೌಡ, ಮಾ.ನ.ಮಂಜೇಗೌಡ , ಮಾ.ಶಿವಮೂರ್ತಿ, ಬಿ.ಬಿ.ಶಿವರಾಜು, ಆರ್.ಎಸ್.ಮಹೇಶ್,ಬೊಮ್ಮಡಿಹಳ್ಳಿ ಕುಮಾರಸ್ವಾಮಿ, ಕವಯತ್ರಿ ಮಧುಮಾಲತಿ ರುದ್ರೇಶ್, ಶಶಿ ಎಂ.ಟಿ. ಮಂಡಲಮನೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p> <strong>ಬೇಲೂರು</strong>: ಪುಸ್ತಕದ ಅಂಗಡಿಗಳಿಗಿಂತ ಮಧ್ಯದ ಅಂಗಡಿಗಳು ಹೆಚ್ಚಾಗುತ್ತಿರುವುದು ವಿಷಾದದ ಸಂಗತಿಯಾಗಿದೆ ಎಂದು ಲೇಖಕಿ ಶೈಲಜಾ ಹಾಸನ ಹೇಳಿದರು.</p>.<p>ಇಲ್ಲಿನ ಸರ್ಕಾರಿ ನೌಕರರ ಭವನದಲ್ಲಿ ಈಚೆಗೆ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ವತಿಯಿಂದ ಆಯೋಜಿಸಲಾಗಿದ್ದ, ಕವನ ಸಂಕಲನ ಬಿಡುಗಡೆಗೊಳಿಸಿ ಅವರು ಮಾತನಾಡಿದರು.</p>.<p>ಇಂದಿನ ಮಕ್ಕಳು ಕಂಪ್ಯೂಟರ್, ಮೊಬೈಲ್ಗಳ ಜೊತೆ ಹೆಚ್ಚಿನ ಸಮಯ ಕಳೆಯುತ್ತಿದ್ದು, ಪುಸ್ತಕ ಓದುವ ಹವ್ಯಾಸ ಕಡಿಮೆ ಇರುತ್ತದೆ. ಪೋಷಕರು ಮಕ್ಕಳಿಗೆ ಓದಲು ಪ್ರೇರೆಪಿಸಬೇಕು. ಪೋಷಕರೂ ಓದುವ ಅಭ್ಯಾಸ ಬೆಳೆಸಿಕೊಳ್ಳಲು ಮುಂದಾಗಬೇಕು ಎಂದರು.<br> ಸಾಹಿತಿ ಅವರೇಕಾಡು ವಿಜಯಕುಮಾರ್ ಮಾತನಾಡಿ, ಬರವಣಿಗೆ ಸುಲಭದ ಮಾತಲ್ಲ ಕಾವ್ಯಕ್ಕೆ ತನ್ನದೇ ಅದ ಶಕ್ತಿ ಮತ್ತು ಸ್ವಂತಿಕೆ ಇದೆ ಎಂದರು.</p>.<p>ಮಧುಮಾಲತಿ ರುದ್ರೇಶ್ ಅವರ ‘ಸ್ವಾತಿ ಹನಿ ಪ್ರೀತಿಮುತ್ತಾದಂತೆ’ ಹಾಗೂ ಶಶಿ ಎಂ.ಟಿ.ಮಂಡಲಮನೆ ಅವರ ‘ಬೆಳ್ಳಿ ಬೆಳಕು’ ಕವನ ಸಂಕಲನವನ್ನು ಬಿಡುಗಡೆಗೊಳಿಸಲಾಯಿತು.</p>.<p><br> ಶಿಕ್ಷಕ ಟಿ.ಡಿ.ತಮ್ಮಣ್ಣಗೌಡ, ಸಂಶೋಧಕ ಶಿವತ್ಸ ಎಸ್. ವಟಿ, ಲೇಖಕಿ ಇಂದಿರಮ್ಮ, ಪ್ರಾಂಶುಪಾಲ ಎಸ್.ಗಣೇಶ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಆರ್.ಮಂಜುನಾಥ್, ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ಪದಾಧಿಕಾರಿಗಳಾದ ಬಿ.ಎಲ್.ರಾಜೇಗೌಡ, ಮಾ.ನ.ಮಂಜೇಗೌಡ , ಮಾ.ಶಿವಮೂರ್ತಿ, ಬಿ.ಬಿ.ಶಿವರಾಜು, ಆರ್.ಎಸ್.ಮಹೇಶ್,ಬೊಮ್ಮಡಿಹಳ್ಳಿ ಕುಮಾರಸ್ವಾಮಿ, ಕವಯತ್ರಿ ಮಧುಮಾಲತಿ ರುದ್ರೇಶ್, ಶಶಿ ಎಂ.ಟಿ. ಮಂಡಲಮನೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>