<p><strong>ಹಾಸನ:</strong> ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆ (ಕೆಪಿಎಂಇ) ಸೇರಿದಂತೆ ಕೆಲ ನಿಯಮ ಪಾಲನೆ ಮಾಡದ ಕಾರಣ ತಾಲ್ಲೂಕಿನ ಶಾಂತಿ ಗ್ರಾಮದ ಹಾಸನಾಂಬ ಕ್ಲಿನಿಕ್ ಬಂದ್ ಮಾಡಿಸಲಾಗಿದೆ.</p>.<p>ತಹಶೀಲ್ದಾರ್ ಶಿವಶಂಕರಪ್ಪ ಹಾಗೂ ತಾಲ್ಲೂಕು ವೈದ್ಯಾಧಿಕಾರಿ ಡಾ ವಿಜಯ್ ನೇತೃತ್ವದಲ್ಲಿ ಗುರುವಾರ ಶಾಂತಿಗ್ರಾಮದ ಹಾಸನಾಂಬ ಕ್ಲಿನಿಕ್ಗೆ ದಿಢೀರ್ ಭೇಟಿ ನೀಡಿ ಪರೀಶೀಲಿಸಲಾಯಿತು.</p>.<p>ಅಂತರ ಕಾಯ್ದುಕೊಳ್ಳದೆ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಅಲ್ಲದೇ ತೀವ್ರ ಉಸಿರಾಟ ಸಮಸ್ಯೆ (ಸಾರಿ), ಶೀತ ಜ್ವರ ಮಾದರಿ ಅನಾರೋಗ್ಯ (ಐಎಲ್ಐ) ಪ್ರಕರಣಗಳಲ್ಲಿ ಗಂಟಲು ಮಾದರಿ ಪರೀಕ್ಷೆ ನಡೆಸದೆ ಚಿಕಿತ್ಸೆ ನೀಡುತ್ತಿರುವುದು ಪತ್ತೆಯಾಯಿತು.</p>.<p>ವೈದ್ಯಕೀಯ ತ್ಯಾಜ್ಯ ನಿರ್ವಾಹಣೆ ಕಾಯ್ದೆ ಸಮರ್ಪಕವಾಗಿ ಅನುಪಾಲನೆ ಮಾಡದೆ ಆಯುಷ್ ಪದ್ದತಿಯಲ್ಲಿ<br />ನೋಂದಾಯಿಸಿ ಅಲೋಪಥಿ ಪದ್ಧತಿಯ ಮಾತ್ರೆಗಳನ್ನು ನೀಡಲಾಗುತ್ತಿತ್ತು. ಹೀಗೆ ಹಲವು ಲೋಪ<br />ದೋಷಗಳು ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯನ್ನು ತಾತ್ಕಾಲಿಕವಾಗಿ ಮುಚ್ಚಿಸುವಂತೆ ತಹಶೀಲ್ದಾರ್<br />ಶಿವಶಂಕರಪ್ಪ ಸೂಚಿಸಿದರು.</p>.<p>ಶಾಂತಿಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವೀಶ್ ಹಾಗೂ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕಾವ್ಯ ನೇತೃತ್ವದಲ್ಲಿ ಆಸ್ಪತ್ರೆ ತಾತ್ಕಾಲಿಕವಾಗಿ ಮುಚ್ಚಿಸಿ, ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆ (ಕೆಪಿಎಂಇ) ಸೇರಿದಂತೆ ಕೆಲ ನಿಯಮ ಪಾಲನೆ ಮಾಡದ ಕಾರಣ ತಾಲ್ಲೂಕಿನ ಶಾಂತಿ ಗ್ರಾಮದ ಹಾಸನಾಂಬ ಕ್ಲಿನಿಕ್ ಬಂದ್ ಮಾಡಿಸಲಾಗಿದೆ.</p>.<p>ತಹಶೀಲ್ದಾರ್ ಶಿವಶಂಕರಪ್ಪ ಹಾಗೂ ತಾಲ್ಲೂಕು ವೈದ್ಯಾಧಿಕಾರಿ ಡಾ ವಿಜಯ್ ನೇತೃತ್ವದಲ್ಲಿ ಗುರುವಾರ ಶಾಂತಿಗ್ರಾಮದ ಹಾಸನಾಂಬ ಕ್ಲಿನಿಕ್ಗೆ ದಿಢೀರ್ ಭೇಟಿ ನೀಡಿ ಪರೀಶೀಲಿಸಲಾಯಿತು.</p>.<p>ಅಂತರ ಕಾಯ್ದುಕೊಳ್ಳದೆ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಅಲ್ಲದೇ ತೀವ್ರ ಉಸಿರಾಟ ಸಮಸ್ಯೆ (ಸಾರಿ), ಶೀತ ಜ್ವರ ಮಾದರಿ ಅನಾರೋಗ್ಯ (ಐಎಲ್ಐ) ಪ್ರಕರಣಗಳಲ್ಲಿ ಗಂಟಲು ಮಾದರಿ ಪರೀಕ್ಷೆ ನಡೆಸದೆ ಚಿಕಿತ್ಸೆ ನೀಡುತ್ತಿರುವುದು ಪತ್ತೆಯಾಯಿತು.</p>.<p>ವೈದ್ಯಕೀಯ ತ್ಯಾಜ್ಯ ನಿರ್ವಾಹಣೆ ಕಾಯ್ದೆ ಸಮರ್ಪಕವಾಗಿ ಅನುಪಾಲನೆ ಮಾಡದೆ ಆಯುಷ್ ಪದ್ದತಿಯಲ್ಲಿ<br />ನೋಂದಾಯಿಸಿ ಅಲೋಪಥಿ ಪದ್ಧತಿಯ ಮಾತ್ರೆಗಳನ್ನು ನೀಡಲಾಗುತ್ತಿತ್ತು. ಹೀಗೆ ಹಲವು ಲೋಪ<br />ದೋಷಗಳು ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯನ್ನು ತಾತ್ಕಾಲಿಕವಾಗಿ ಮುಚ್ಚಿಸುವಂತೆ ತಹಶೀಲ್ದಾರ್<br />ಶಿವಶಂಕರಪ್ಪ ಸೂಚಿಸಿದರು.</p>.<p>ಶಾಂತಿಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವೀಶ್ ಹಾಗೂ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕಾವ್ಯ ನೇತೃತ್ವದಲ್ಲಿ ಆಸ್ಪತ್ರೆ ತಾತ್ಕಾಲಿಕವಾಗಿ ಮುಚ್ಚಿಸಿ, ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>