ಟಿಕೆಟ್ ಘೋಷಣೆ ಆದ ಮೇಲೆ ಎರಡೂ ಪಕ್ಷದವರು ಸೇರಿ ಎಲ್ಲ ಭಾಗಗಳಲ್ಲೂ ಸಭೆ ನಡೆಸುತ್ತೇವೆ. ಯಾವುದೇ ಗೊಂದಲಗಳಿದ್ದರೂ ಬಗೆಹರಿಸಿಕೊಳ್ಳುತ್ತೇವೆ.
ಪ್ರಜ್ವಲ್ ರೇವಣ್ಣ ಸಂಸದ
ಜಿಲ್ಲೆಯಲ್ಲಿ ಬಿಜೆಪಿ ಸದೃಢವಾಗಿದ್ದು ಪಕ್ಷದ ಅಭ್ಯರ್ಥಿ ಹಾಕಲು ವರಿಷ್ಠರನ್ನು ಕೇಳಿದ್ದೇವೆ. ಮೈತ್ರಿ ಬಗ್ಗೆ ನಮ್ಮ ನಾಯಕರು ಯಾವುದೇ ಸೂಚನೆ ನೀಡಿಲ್ಲ.
ಸಿದ್ಧೇಶ್ ನಾಗೇಂದ್ರ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ
ಮಾಜಿ ಪ್ರಧಾನಿ ದೇವೇಗೌಡರ ಕುಟುಂಬಕ್ಕೆ ಸಾಕಷ್ಟು ಅಧಿಕಾರ ನೀಡಿದ್ದೀರಿ. ನಿಮ್ಮ ಸೇವೆ ಸಲ್ಲಿಸಲು ನನಗೂ ಒಂದು ಅವಕಾಶ ಕೊಡಿ ಎಂದು ಕೇಳುತ್ತಿದ್ದೇನೆ.
ಶ್ರೇಯಸ್ ಪಟೇಲ್ ಕಾಂಗ್ರೆಸ್ ಅಭ್ಯರ್ಥಿ
ಓಡಾಟ ಚುರುಕು
ಟಿಕೆಟ್ ಘೋಷಣೆ ಆಗುತ್ತಿದ್ದಂತೆಯೇ ಕಾಂಗ್ರೆಸ್ ನಾಯಕರು ಕ್ಷೇತ್ರದಲ್ಲಿ ಚುರುಕಿನ ಓಡಾಟ ಆರಂಭಿಸಿದ್ದಾರೆ. ಶ್ರೇಯಸ್ ಪಟೇಲ್ ಅವರು ಶನಿವಾರ ಚನ್ನರಾಯಪಟ್ಟಣಕ್ಕೆ ಭೇಟಿ ನೀಡಿ ಪ್ರಮುಖ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿ ಬೆಂಬಲ ಕೋರಿದರು. ಅರಸೀಕೆರೆ ಕ್ಷೇತ್ರಕ್ಕೂ ಭೇಟಿ ನೀಡಿದ ಶ್ರೇಯಸ್ ಪಟೇಲ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಬೆಂಬಲ ಕೋರಿದ್ದಲ್ಲದೇ ಮತಯಾಚನೆಯನ್ನೂ ಆರಂಭಿಸಿದ್ದಾರೆ.