<p><strong>ಹಾಸನ:</strong> ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು, ಇಲ್ಲಿನ ಹಾಸನ ಮಹಾನಗರ ಪಾಲಿಕೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಸತ್ಯನಾರಾಯಣ ಎಂ.ಸಿ. ಅವರ ನಿವಾಸದ ಮೇಲೆ ಗುರುವಾರ ಬೆಳಗಿನ ಜಾವ ದಾಳಿ ನಡೆಸಿದರು.</p>.<p>ಲೋಕಾಯುಕ್ತ ಡಿವೈಎಸ್ಪಿ ಸುರೇಶ್ ಕುಮಾರ್ ಹಾಗೂ ಇನ್ಸ್ಪೆಕ್ಟರ್ ಶಿಲ್ಪಾ ನೇತೃತ್ವದ ತಂಡವು ನಗರದ ರಕ್ಷಣಾಪುರಂನಲ್ಲಿರುವ ಸತ್ಯನಾರಾಯಣ ಅವರ ಮನೆಗೆ ಬೆಳಗಿನ ಜಾವವೇ ಬಂದಿತ್ತು. ಆದರೆ, ಸತ್ಯನಾರಾಯಣ ಕುಟುಂಬದವರು ಬಾಗಿಲು ತೆರೆಯದೇ ಇರುವದರಿಂದ ನಾಲ್ಕು ಗಂಟೆ ಕಾಯಬೇಕಾಯಿತು.</p>.<p>ಇಲ್ಲಿನ ವಿಜಯನಗರದಲ್ಲಿರುವ ಕಾಂಗ್ರೆಸ್ ಮುಖಂಡ ಜೆಸಿಬಿ ಚಂದ್ರು ಒಡೆತನದ ಪಾಂಡಿತ್ಯ ಯೂರೋ ಸ್ಕೂಲ್ನಲ್ಲಿಯೂ ಲೋಕಾಯುಕ್ತ ತಂಡ ಶೋಧ ಕಾರ್ಯಾಚರಣೆ ನಡೆಸಿ ದಾಖಲೆಗಳ ಪರಿಶೀಲನೆ ಕೈಗೊಂಡಿದೆ.</p>.<p>ಎಂಜಿನಿಯರ್ ಸತ್ಯನಾರಾಯಣ ಅವರು ತಮ್ಮ ಕುಟುಂಬದವರ ಹೆಸರಿನಲ್ಲಿ ಈ ಶಾಲೆಯಲ್ಲಿ ಪಾಲುದಾರಿಕೆ ಹೊಂದಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದು, ಈ ಹಿನ್ನೆಲೆ ಸತ್ಯನಾರಾಯಣ ಹಾಗೂ ಜೆಸಿಬಿ ಚಂದ್ರು ನಡುವಿನ ನಂಟಿನ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.</p>.<p>ಮಹಾನಗರ ಪಾಲಿಕೆಯ ಸತ್ಯನಾರಾಯಣ ಅವರ ಕಚೇರಿಯ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯ ಡ್ರಾಯರ್ಗಳ ತರಿಸಿ, ಕಚೇರಿಯ ಸಂಪೂರ್ಣ ಪರಿಶೀಲನೆ ನಡೆಸಲಾಗಿದೆ.</p>.<p><strong>ಕಾರನ್ನು ಬಿಡಲಿಲ್ಲ:</strong> ಸತ್ಯನಾರಾಯಣ ಅವರ ಮನೆಯನ್ನೆಲ್ಲ ಪರಿಶೀಲನೆ ನಡೆಸಿದ ಬಳಿಕ ಅಧಿಕಾರಿಗಳು, ಮನೆಯ ನೆಲ ಅಂತಸ್ತಿನ ಕಾರಿನ ಶೆಡ್ ಹಾಗೂ ಕಾರುಗಳನ್ನು ಸಂಪೂರ್ಣವಾಗಿ ತಪಾಸಣೆ ನಡೆಸಿದರು.</p>.<p>ಸತ್ಯನಾರಾಯಣ ಅವರಿಗೆ ಬೆಂಗಳೂರು ನಗರದಲ್ಲಿಯೂ ಅನೇಕ ಅಪಾರ್ಟ್ಮೆಂಟ್ ಹಾಗೂ ನಿವೇಶನಗಳು ಇರುವ ಬಗ್ಗೆ ಮಾಹಿತಿ ಲಭ್ಯವಾಗಿರುವುದಾಗಿ ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ. ನಗರ ಸೇರಿದಂತೆ ಇತರೆಡೆಯ ರಿಯಲ್ ಎಸ್ಟೇಟ್ ಉದ್ಯಮಿಗಳೊಂದಿಗೆ ನಂಟು ಹೊಂದಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.</p>.<p>ಸತ್ಯನಾರಾಯಣ ಅವರ ಮನೆಯಲ್ಲಿ ನಿವೇಶನ ಸೇರಿದಂತೆ ಇತರೆ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು, ಇಲ್ಲಿನ ಹಾಸನ ಮಹಾನಗರ ಪಾಲಿಕೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಸತ್ಯನಾರಾಯಣ ಎಂ.ಸಿ. ಅವರ ನಿವಾಸದ ಮೇಲೆ ಗುರುವಾರ ಬೆಳಗಿನ ಜಾವ ದಾಳಿ ನಡೆಸಿದರು.</p>.<p>ಲೋಕಾಯುಕ್ತ ಡಿವೈಎಸ್ಪಿ ಸುರೇಶ್ ಕುಮಾರ್ ಹಾಗೂ ಇನ್ಸ್ಪೆಕ್ಟರ್ ಶಿಲ್ಪಾ ನೇತೃತ್ವದ ತಂಡವು ನಗರದ ರಕ್ಷಣಾಪುರಂನಲ್ಲಿರುವ ಸತ್ಯನಾರಾಯಣ ಅವರ ಮನೆಗೆ ಬೆಳಗಿನ ಜಾವವೇ ಬಂದಿತ್ತು. ಆದರೆ, ಸತ್ಯನಾರಾಯಣ ಕುಟುಂಬದವರು ಬಾಗಿಲು ತೆರೆಯದೇ ಇರುವದರಿಂದ ನಾಲ್ಕು ಗಂಟೆ ಕಾಯಬೇಕಾಯಿತು.</p>.<p>ಇಲ್ಲಿನ ವಿಜಯನಗರದಲ್ಲಿರುವ ಕಾಂಗ್ರೆಸ್ ಮುಖಂಡ ಜೆಸಿಬಿ ಚಂದ್ರು ಒಡೆತನದ ಪಾಂಡಿತ್ಯ ಯೂರೋ ಸ್ಕೂಲ್ನಲ್ಲಿಯೂ ಲೋಕಾಯುಕ್ತ ತಂಡ ಶೋಧ ಕಾರ್ಯಾಚರಣೆ ನಡೆಸಿ ದಾಖಲೆಗಳ ಪರಿಶೀಲನೆ ಕೈಗೊಂಡಿದೆ.</p>.<p>ಎಂಜಿನಿಯರ್ ಸತ್ಯನಾರಾಯಣ ಅವರು ತಮ್ಮ ಕುಟುಂಬದವರ ಹೆಸರಿನಲ್ಲಿ ಈ ಶಾಲೆಯಲ್ಲಿ ಪಾಲುದಾರಿಕೆ ಹೊಂದಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದು, ಈ ಹಿನ್ನೆಲೆ ಸತ್ಯನಾರಾಯಣ ಹಾಗೂ ಜೆಸಿಬಿ ಚಂದ್ರು ನಡುವಿನ ನಂಟಿನ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.</p>.<p>ಮಹಾನಗರ ಪಾಲಿಕೆಯ ಸತ್ಯನಾರಾಯಣ ಅವರ ಕಚೇರಿಯ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯ ಡ್ರಾಯರ್ಗಳ ತರಿಸಿ, ಕಚೇರಿಯ ಸಂಪೂರ್ಣ ಪರಿಶೀಲನೆ ನಡೆಸಲಾಗಿದೆ.</p>.<p><strong>ಕಾರನ್ನು ಬಿಡಲಿಲ್ಲ:</strong> ಸತ್ಯನಾರಾಯಣ ಅವರ ಮನೆಯನ್ನೆಲ್ಲ ಪರಿಶೀಲನೆ ನಡೆಸಿದ ಬಳಿಕ ಅಧಿಕಾರಿಗಳು, ಮನೆಯ ನೆಲ ಅಂತಸ್ತಿನ ಕಾರಿನ ಶೆಡ್ ಹಾಗೂ ಕಾರುಗಳನ್ನು ಸಂಪೂರ್ಣವಾಗಿ ತಪಾಸಣೆ ನಡೆಸಿದರು.</p>.<p>ಸತ್ಯನಾರಾಯಣ ಅವರಿಗೆ ಬೆಂಗಳೂರು ನಗರದಲ್ಲಿಯೂ ಅನೇಕ ಅಪಾರ್ಟ್ಮೆಂಟ್ ಹಾಗೂ ನಿವೇಶನಗಳು ಇರುವ ಬಗ್ಗೆ ಮಾಹಿತಿ ಲಭ್ಯವಾಗಿರುವುದಾಗಿ ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ. ನಗರ ಸೇರಿದಂತೆ ಇತರೆಡೆಯ ರಿಯಲ್ ಎಸ್ಟೇಟ್ ಉದ್ಯಮಿಗಳೊಂದಿಗೆ ನಂಟು ಹೊಂದಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.</p>.<p>ಸತ್ಯನಾರಾಯಣ ಅವರ ಮನೆಯಲ್ಲಿ ನಿವೇಶನ ಸೇರಿದಂತೆ ಇತರೆ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>