<p><strong>ಹಾಸನ: </strong>ಸಕಲೇಶಪುರ ತಾಲ್ಲೂಕಿನ ಉದೇವಾರ ಗ್ರಾಮದ ಮುಖ್ಯ ರಸ್ತೆಯಲ್ಲಿ ಕಾಡಾನೆಯೊಂದು ಸಂಚರಿಸಿದ್ದು, ಅರಣ್ಯ ಇಲಾಖೆಯ ವಾಹನ ಆನೆಯ ಮುಂಭಾಗ ಧ್ವನಿವರ್ಧಕದ ಮೂಲಕ ಜನರಿಗೆ ತಿಳಿವಳಿಕೆ ನೀಡುತ್ತ ಸಾಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.</p>.<p>ಒಂದೆಡೆ ಅರಣ್ಯ ಇಲಾಖೆ ಧ್ವನಿವರ್ಧಕದ ಮೂಲಕ ಎಷ್ಟೇ ಪ್ರಚಾರ ನೀಡಿದರೂ, ಸಾರ್ವಜನಿಕರು ಮಾತ್ರ ಆನೆಯ ಹಿಂದೆಯೇ ನಡೆದುಕೊಂಡು ಬಂದಿದ್ದು, ಮಲೆನಾಡು ಭಾಗದಲ್ಲಿ ಜನರಿಗೆ ಕಾಡಾನೆಗಳ ಭಯವೇ ಇಲ್ಲದಂತಾಗಿದೆ.</p>.<p>ಕೆಲವರು ಈ ವಿಡಿಯೋವನ್ನು ಟ್ರೊಲ್ ಮಾಡಿದ್ದು, ಕಾಡಾನೆ ಸಂಚರಿಸಲು ಅರಣ್ಯ ಇಲಾಖೆ ಎಸ್ಕಾರ್ಟ್ ರೀತಿ ಕಾರ್ಯನಿರ್ವಹಿಸಿದೆ ಎಂದು ಹೇಳಿದ್ದಾರೆ.</p>.<p>ಮತ್ತೊಂದೆಡೆ ಜಿಲ್ಲೆಯ ಬೇಲೂರು ತಾಲ್ಲೂಕಿನ ಅರೇಹಳ್ಳಿಯಲ್ಲಿ ಕಾಡಾನೆಯೊಂದು ಪೊಲೀಸ್ ಠಾಣೆಯ ಎದುರು ಬಂದು ನಿಂತು ಹೋದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.</p>.<p>ಠಾಣೆಯ ಎದುರು ಕೆಲಕಾಲ ನಿಂತಿದ್ದ ಆನೆ, ರಸ್ತೆಯಲ್ಲಿ ಹಾದು ಹೋಗಿದೆ. ಕಾಡಾನೆ ಸಂಚರಿಸುತ್ತಿರುವ ವಿಡಿಯೊ ಅನ್ನು ಸ್ಥಳೀಯರ ಮೊಬೈಲ್ನಲ್ಲಿ ಚಿತ್ರೀಕರಿಸಿದ್ದಾರೆ.</p>.<p>ಇತ್ತೀಚಿನ ದಿನಗಳಲ್ಲಿ ಜನನಿಬಿಡ ಪ್ರದೇಶ, ಪ್ರಮುಖ ರಸ್ತೆಗಳಲ್ಲಿ ಕಾಡಾನೆಗಳು ಸಂಚರಿಸುತ್ತಿವೆ. ಈಚೆಗಷ್ಟೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಬಾರಿ ಆನೆ ಬಂದಿದ್ದು, ಇದೀಗ ಗ್ರಾಮಗಳ ರಸ್ತೆಯಲ್ಲೂ ನಿರ್ಭಯವಾಗಿ ಸಂಚರಿಸುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ಸಕಲೇಶಪುರ ತಾಲ್ಲೂಕಿನ ಉದೇವಾರ ಗ್ರಾಮದ ಮುಖ್ಯ ರಸ್ತೆಯಲ್ಲಿ ಕಾಡಾನೆಯೊಂದು ಸಂಚರಿಸಿದ್ದು, ಅರಣ್ಯ ಇಲಾಖೆಯ ವಾಹನ ಆನೆಯ ಮುಂಭಾಗ ಧ್ವನಿವರ್ಧಕದ ಮೂಲಕ ಜನರಿಗೆ ತಿಳಿವಳಿಕೆ ನೀಡುತ್ತ ಸಾಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.</p>.<p>ಒಂದೆಡೆ ಅರಣ್ಯ ಇಲಾಖೆ ಧ್ವನಿವರ್ಧಕದ ಮೂಲಕ ಎಷ್ಟೇ ಪ್ರಚಾರ ನೀಡಿದರೂ, ಸಾರ್ವಜನಿಕರು ಮಾತ್ರ ಆನೆಯ ಹಿಂದೆಯೇ ನಡೆದುಕೊಂಡು ಬಂದಿದ್ದು, ಮಲೆನಾಡು ಭಾಗದಲ್ಲಿ ಜನರಿಗೆ ಕಾಡಾನೆಗಳ ಭಯವೇ ಇಲ್ಲದಂತಾಗಿದೆ.</p>.<p>ಕೆಲವರು ಈ ವಿಡಿಯೋವನ್ನು ಟ್ರೊಲ್ ಮಾಡಿದ್ದು, ಕಾಡಾನೆ ಸಂಚರಿಸಲು ಅರಣ್ಯ ಇಲಾಖೆ ಎಸ್ಕಾರ್ಟ್ ರೀತಿ ಕಾರ್ಯನಿರ್ವಹಿಸಿದೆ ಎಂದು ಹೇಳಿದ್ದಾರೆ.</p>.<p>ಮತ್ತೊಂದೆಡೆ ಜಿಲ್ಲೆಯ ಬೇಲೂರು ತಾಲ್ಲೂಕಿನ ಅರೇಹಳ್ಳಿಯಲ್ಲಿ ಕಾಡಾನೆಯೊಂದು ಪೊಲೀಸ್ ಠಾಣೆಯ ಎದುರು ಬಂದು ನಿಂತು ಹೋದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.</p>.<p>ಠಾಣೆಯ ಎದುರು ಕೆಲಕಾಲ ನಿಂತಿದ್ದ ಆನೆ, ರಸ್ತೆಯಲ್ಲಿ ಹಾದು ಹೋಗಿದೆ. ಕಾಡಾನೆ ಸಂಚರಿಸುತ್ತಿರುವ ವಿಡಿಯೊ ಅನ್ನು ಸ್ಥಳೀಯರ ಮೊಬೈಲ್ನಲ್ಲಿ ಚಿತ್ರೀಕರಿಸಿದ್ದಾರೆ.</p>.<p>ಇತ್ತೀಚಿನ ದಿನಗಳಲ್ಲಿ ಜನನಿಬಿಡ ಪ್ರದೇಶ, ಪ್ರಮುಖ ರಸ್ತೆಗಳಲ್ಲಿ ಕಾಡಾನೆಗಳು ಸಂಚರಿಸುತ್ತಿವೆ. ಈಚೆಗಷ್ಟೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಬಾರಿ ಆನೆ ಬಂದಿದ್ದು, ಇದೀಗ ಗ್ರಾಮಗಳ ರಸ್ತೆಯಲ್ಲೂ ನಿರ್ಭಯವಾಗಿ ಸಂಚರಿಸುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>