ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆರೆಗೆ ಉರುಳಿದ ಲಾರಿ; ಅಪಾಯದಿಂದ ಪಾರು

Last Updated 18 ಸೆಪ್ಟೆಂಬರ್ 2020, 2:55 IST
ಅಕ್ಷರ ಗಾತ್ರ

ಬೇಲೂರು: ತಾಲ್ಲೂಕಿನ ಹೆಬ್ಬಾಳು ಗ್ರಾಮದ ಕೆರೆಗೆ ಚಾಲಕನ ನಿಯಂತ್ರಣ ತಪ್ಪಿ ಕಾಫಿ ಹೊಟ್ಟು ತುಂಬಿದ ಲಾರಿ ಪಲ್ಟಿಯಾಗಿದ್ದು, ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಬೇಲೂರಿನಿಂದ ಬಾಣಾವಾರಕ್ಕೆ ಕಾಫಿ ಹೊಟ್ಟಿನ ಚೀಲಗಳನ್ನು ತುಂಬಿಕೊಂಡು ಹೋಗುವ ಸಂದರ್ಭದಲ್ಲಿ ಹೆಬ್ಬಾಳಿನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಕೆರೆಗೆ ಬಿದ್ದಿದ್ದು, ಲಾರಿಯಲ್ಲಿ ತುಂಬಿದ ಕಾಫಿ ಹೊಟ್ಟಿನ ಚೀಲಗಳು ಚೆಲ್ಲಾಪಿಲ್ಲಿಯಾಗಿವೆ. ಚೀಲವನ್ನು ಇನ್ನೊಂದು ಲಾರಿಗೆ ತುಂಬಲಾಗಿದ್ದು, ಪಲ್ಟಿಯಾಗಿ ಬಿದ್ದಿದ್ದ ಲಾರಿಯನ್ನು ಕ್ರೇನ್ ಮೂಲಕ ಕೆರೆಯಿಂದ ಮೆಲಕ್ಕೆ ಎತ್ತಲಾಯಿತು.

ಕೆರೆಗೆ ತಡೆಗೊಡೆ ನಿರ್ಮಿಸಿದ್ದರೆ ಈ ರೀತಿಯ ಅವಘಡಗಳು ನಡೆಯುತ್ತಿರಲಿಲ್ಲ, ತಕ್ಷಣವೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಡೆಗೋಡೆ ನಿರ್ಮಿಸಿ ಅಪಘಾತಗಳನ್ನು ತಡೆಯಬೇಕು ಎಂದು ಇಲ್ಲಿನ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT