ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಕಲೇಶಪುರ | ಶೆಡ್‌ಗೆ ನುಗ್ಗಿದ ಲಾರಿ: ಏಳು ಮಂದಿಗೆ ಗಾಯ

Published 4 ಜನವರಿ 2024, 7:21 IST
Last Updated 4 ಜನವರಿ 2024, 7:21 IST
ಅಕ್ಷರ ಗಾತ್ರ

ಸಕಲೇಶಪುರ: ತಾಲ್ಲೂಕಿನ ಬಾಳ್ಳುಪೇಟೆಯ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬುಧವಾರ ರಾತ್ರಿ ಚಾಲಕನ ನಿಯಂತ್ರಣ ತಪ್ಪಿದ ಸಿಮೆಂಟ್ ತುಂಬಿದ್ದ ಲಾರಿಯೊಂದು ರಸ್ತೆ ಬದಿಯಲ್ಲಿದ್ದ ಶೆಡ್‌ಗೆ ನುಗ್ಗಿದೆ. ಏಳು ಮಂದಿ ಗಾಯಗೊಂಡಿದ್ದು, ಐವರ ಸ್ಥಿತಿ ಗಂಭೀರವಾಗಿದೆ.

ಶೆಡ್‌ನಲ್ಲಿದ್ದ ಐವರು ಕಾರ್ಮಿಕರು ಹಾಗೂ ಲಾರಿ ಚಾಲಕ, ಕ್ಲೀನರ್ ಗಾಯಗೊಂಡಿದ್ದು, ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರಿನಿಂದ ತಮಿಳುನಾಡಿನ ಅರುಣಾಚಲಂಗೆ ಸಿಮೆಂಟ್ ತುಂಬಿಕೊಂಡು ತೆರಳುತ್ತಿದ್ದ ಹದಿನಾರು ಚಕ್ರದ ಲಾರಿ, ರಸ್ತೆ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದು, ರಸ್ತೆ ಕಾಮಗಾರಿ ಮಾಡುವ ಕಾರ್ಮಿಕರ ಶೆಡ್‌ಗೆ ನುಗ್ಗಿದೆ.

ಊಟ ಮುಗಿಸಿ ಶೆಡ್‌ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಲಾರಿ ಹಾಗೂ ಶೆಡ್ ಬಿದ್ದಿದ್ದು ಸ್ಥಳೀಯರು ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT