ಸಕಲೇಶಪುರ: ಸಮೀಪದ ಕಪ್ಪಳಿ ಬಳಿ ಬೆಂಗಳೂರು– ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಲಾರಿ ಮಗುಚಿ ಬಿದ್ದ ಪರಿಣಾಮ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿದೆ.
ಸಂಪೂರ್ಣ ಗುಂಡಿಮಯವಾಗಿರುವ ಈ ಮಾರ್ಗದಲ್ಲಿ ಮಳೆ ನೀರು ನಿಂತಿದ್ದರಿಂದ ಲಾರಿಯ ಚಕ್ರ ಗುಂಡಿಯೊಳಗೆ ಇಳಿದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಉರುಳಿದೆ. ಇದರಿಂದಾಗಿ ಈ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿಯುಂಟಾಯಿತು.
ಗ್ರಾಮಾಂತರ ಪೊಲೀಸರು ಏಕಮುಖ ಸಂಚಾರ ವ್ಯವಸ್ಥೆ ಮಾಡಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.