ಹಾಸನ: ಬಿಜೆಪಿ–ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಗುರುವಾರ ಎರಡು ಸೆಟ್ಗಳಲ್ಲಿ ನಾಮಪತ್ರ ಸಲ್ಲಿಸಿದ ವೇಳೆ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ಶಾಸಕ ಎಚ್.ಡಿ. ರೇವಣ್ಣ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಮುಖಂಡರಾದ ಡಿ.ವಿ. ಸದಾನಂದಗೌಡ, ಬೆಳ್ಳಿಪ್ರಕಾಶ್, ಎಂ.ಕೆ. ಪ್ರಾಣೇಶ್ ಹಾಜರಿದ್ದು, ಮಿತ್ರ ಪಕ್ಷಗಳ ಒಗ್ಗಟ್ಟು ಪ್ರದರ್ಶಿಸಿದರು. ಆದರೆ, ನಾಮಪತ್ರ ಸಲ್ಲಿಕೆ ಹಾಗೂ ನಂತರ ನಡೆದ ರ್ಯಾಲಿಯಲ್ಲಿ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡರ ಗೈರು ಎದ್ದು ಕಾಣುತ್ತಿತ್ತು.