ತಾಲ್ಲೂಕಿನ ಗದ್ದೆಬಿಂಡೇನಹಳ್ಳಿ ಗ್ರಾಮದ ರಮ್ಯಾ, ಹಾಸನ ತಾಲ್ಲೂಕು ಅಂಕಪುರ ಗ್ರಾಮದ ಸಂದೇಶ ಅವರ ವಿವಾಹ ಸಮಾರಂಭ ವಧುವಿನ ಊರಿನಲ್ಲಿ ನಡೆಯಿತು. ಲಾಕ್ಡೌನ್ ಇರುವುದರಿಂದ ವಿವಾಹ ಸಮಾರಂಭ ಸರಳವಾಗಿ ನೆರವೇರಿತು. ಬಳಿಕ ದಂಪತಿ ಪೊಲೀಸ್ ಠಾಣೆಗೆ ತೆರಳಿ ವಿವಾಹದ ನಿಮಿತ್ತ ತಯಾರಿಸಿದ ಅಡುಗೆಯನ್ನು ಪೊಲೀಸರಿಗೆ ಉಣ ಬಡಿಸಿದರು.