ವಾಹನ ಬಳಕೆ ಹಾಗೂ ಹೆಲಿಕಾಪ್ಟರ್ ಇಳಿಸಲು ಅನುಮತಿಗೆ ಸುವಿಧ ಆ್ಯಪ್ ಮೂಲಕ ಅರ್ಜಿ ಸಲ್ಲಿಸಬಹುದು. ಚುನಾವಣಾ ದೂರುಗಳ ಬಗ್ಗೆ ನಿಗಾವಹಿಸಲು ಸಿ-ವಿಜಿಲ್ ಆ್ಯಪ್ ಕಾರ್ಯ ನಿರ್ವಹಿಸುತ್ತಿದೆ ಎಂದು ವಿವರಿಸಿದರು.
ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಕೆ.ಎನ್.ವಿಜಯ್ ಪ್ರಕಾಶ್, ಹಚ್ಚುವರಿ ಜಿಲ್ಲಾಧಿಕಾರಿ ಎಂ.ಎಲ್.ವೈಶಾಲಿ, ಚುನಾವಣಾ ತಹಶೀಲ್ದಾರ್ ನಾಗಭೂಷಣ್ ಹಾಗೂ ವಿವಿಧ ರಾಜಕೀಯ ಪಕ್ಷದ ಪ್ರತಿನಿಧಿಗಳಾದ ದೇವೇಗೌಡ, ವೇಣುಕುಮಾರ್, ನಾರಾಯಣಗೌಡ ಹಾಜರಿದ್ದರು.