<p><strong>ಹಾಸನ: </strong>ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾಧ್ಯಮಗಳ ವಿರುದ್ಧ ಮುನಿಸು ಮುಂದುವರಿಸಿದ್ದಾರೆ.</p>.<p>ಚಿಕ್ಕಮಗಳೂರಿನ ಉಮಾ ಮಹೇಶ್ವರಿ ದೇವಾಲಯದಲ್ಲಿ ಕುಟುಂಬ ಸಮೇತರಾಗಿ ಅಮಾವಾಸ್ಯೆ ಪೂಜೆ ಸಲ್ಲಿಸಿದ ಬಳಿಕ ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಶನಿವಾರ ಸಂಜೆ ಹಾಸನ ಹೊರ ವಲಯದಲ್ಲಿರುವ ಹೊಯ್ಸಳ ರೆಸಾರ್ಟ್ ಗೆ ಭೇಟಿ ನೀಡಿದ್ದರು.</p>.<p>ತಂದೆ, ಸಂಸದ ಎಚ್.ಡಿ.ದೇವೇಗೌಡರು, ತಾಯಿ ಚೆನ್ನಮ್ಮ, ಸೋದರ ಸಚಿವ ರೇವಣ್ಣ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಜೊತೆಗಿದ್ದರು.</p>.<p>ಸುಮಾರು ಅರ್ಧ ಗಂಟೆಗೂ ಹೆಚ್ಚು ಹೋಟೆಲ್ ನಲ್ಲಿ ಇದ್ದು ಚಹಾ ಕುಡಿದು ಲಘು ವಿಶ್ರಾಂತಿ ಪಡೆದ ಕುಮಾರಸ್ವಾಮಿ, ನಂತರ ಕುಟುಂಬ ಸಮೇತರಾಗಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.</p>.<p>ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಲು ಅವರು ನಿರಾಕರಿಸಿದರು. ಇದರಿಂದಾಗಿ ಕೆಲ ದಿನಗಳಿಂದ ‘ನಾನು ನಿಮ್ಮೊಂದಿಗೆ ಮಾತನಾಡುವುದಿಲ್ಲ’ ಎನ್ನುವ ಮುನಿಸನ್ನು ಕುಮಾರಸ್ವಾಮಿ ಮುಂದುವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾಧ್ಯಮಗಳ ವಿರುದ್ಧ ಮುನಿಸು ಮುಂದುವರಿಸಿದ್ದಾರೆ.</p>.<p>ಚಿಕ್ಕಮಗಳೂರಿನ ಉಮಾ ಮಹೇಶ್ವರಿ ದೇವಾಲಯದಲ್ಲಿ ಕುಟುಂಬ ಸಮೇತರಾಗಿ ಅಮಾವಾಸ್ಯೆ ಪೂಜೆ ಸಲ್ಲಿಸಿದ ಬಳಿಕ ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಶನಿವಾರ ಸಂಜೆ ಹಾಸನ ಹೊರ ವಲಯದಲ್ಲಿರುವ ಹೊಯ್ಸಳ ರೆಸಾರ್ಟ್ ಗೆ ಭೇಟಿ ನೀಡಿದ್ದರು.</p>.<p>ತಂದೆ, ಸಂಸದ ಎಚ್.ಡಿ.ದೇವೇಗೌಡರು, ತಾಯಿ ಚೆನ್ನಮ್ಮ, ಸೋದರ ಸಚಿವ ರೇವಣ್ಣ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಜೊತೆಗಿದ್ದರು.</p>.<p>ಸುಮಾರು ಅರ್ಧ ಗಂಟೆಗೂ ಹೆಚ್ಚು ಹೋಟೆಲ್ ನಲ್ಲಿ ಇದ್ದು ಚಹಾ ಕುಡಿದು ಲಘು ವಿಶ್ರಾಂತಿ ಪಡೆದ ಕುಮಾರಸ್ವಾಮಿ, ನಂತರ ಕುಟುಂಬ ಸಮೇತರಾಗಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.</p>.<p>ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಲು ಅವರು ನಿರಾಕರಿಸಿದರು. ಇದರಿಂದಾಗಿ ಕೆಲ ದಿನಗಳಿಂದ ‘ನಾನು ನಿಮ್ಮೊಂದಿಗೆ ಮಾತನಾಡುವುದಿಲ್ಲ’ ಎನ್ನುವ ಮುನಿಸನ್ನು ಕುಮಾರಸ್ವಾಮಿ ಮುಂದುವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>